WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ  ನಮಗೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ನಮ್ಮ ದೇಶದಲ್ಲಿ ಇನ್ನು ಬಡತನ ತಾಂಡವವಾಡುತ್ತಿದೆ. ಎಷ್ಟೋ ಜನ ಬಡ ಕುಟುಂಬಗಳು ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೆ ಪರದಾಡುವ ಸ್ಥಿತಿಯಲ್ಲಿದ್ದಾರೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಅಂತಹ ಬಡ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ರೀತಿಯಲ್ಲಿ ಆರ್ಥಿಕವಾಗಿ ಸಹಾಯವನ್ನು ಮಾಡುತ್ತಿವೆ. ಆ ಮೂಲಕ ಅಂತಹ ಬಡ ಕುಟುಂಬಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ ಅವರನ್ನು ಬಡತನ ರೇಖೆಗಿಂತ ಮೇಲೆ ತರುವ ಪ್ರಯತ್ನ ಮಾಡುತ್ತಿವೆ.

ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ₹4.75 ಲಕ್ಷ ರೂಪಾಯಿ ಸಹಾಯಧನ ! ಈಗಲೇ ಅರ್ಜಿ ಸಲ್ಲಿಸಿ

ಇನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ (BPL card) ಅಡಿಯಲ್ಲಿ ಉಚಿತ ರೇಷನ್ ನೀಡಲಾಗುತ್ತಿದೆ. ಆ ಮೂಲಕ ಅಂತಹ ಕುಟುಂಬಗಳಿಗೆ ಆರ್ಥಿಕವಾಗಿ ಬಲ ವೃದ್ಧಿಯಾಗಲು ಸಹಕಾರಿಯಾಗುತ್ತಿದೆ.

ಇತ್ತೀಚೆಗೆ ನಕಲಿ ಬಿಪಿಎಲ್ ಕಾರ್ಡ್ ಹೊಂದಿದವರ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿವೆ. ಇದರ ಮುಂದುವರಿದ ಭಾಗವಾಗಿ ಸದ್ಯ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಕ್ಕೂ ಇಕೇವೈಸಿ (ekyc) ಕಡ್ಡಾಯ ಮಾಡಿದೆ.

ಇದನ್ನೂ ಓದಿ: ಪಿಎಂ ಕಿಸಾನ್ 18 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ

ಹೌದು ರೈತ ಮಿತ್ರರೇ,ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬವೂ ಈಗ ಇಕೇವೈಸಿ (ekyc) ಮಾಡಿಸುವುದು ಕಡ್ಡಾಯವಾಗಿದ್ದು,ಯಾರು ತಮ್ಮ ಬಿಪಿಎಲ್ ಕಾರ್ಡ್ ಇಕೇವೈಸಿ (ekyc) ಮಾಡಿಸುವುದಿಲ್ಲವೋ ಅಂತಹ ಕುಟುಂಬಗಳಿಗೆ ಇನ್ನು ಮುಂದೆ ಉಚಿತ ಅಕ್ಕಿ ಹಾಗೂ ರೇಷನ್ ಸಿಗುವುದಿಲ್ಲ. Ration card

ಏನಿದು ರೇಷನ್ ಕಾರ್ಡ್ ಇಕೇವೈಸಿ?

ಮೇಲೆ ಹೇಳಿದಂತೆ ಇತ್ತೀಚೆಗೆ ನಕಲಿ ರೇಷನ್ ಕಾರ್ಡ್ ಹೊಂದಿರುವವರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ರೇಷನ್ ಕಾರ್ಡ್ ತಡೆಗಟ್ಟಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ನಿಜವಾಗಿಯೂ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗಬೇಕು ಎಂದು ನಕಲಿ ರೇಷನ್ ಕಾರ್ಡ್ ಹೊಂದಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು  ರೇಷನ್ ಕಾರ್ಡ್ ಇಕೇವೈಸಿ ಮಾಡಿಸುವುದು ಕಡ್ಡಾಯ ಮಾಡಿದೆ. Ration card download

      
                    WhatsApp Group                             Join Now            
   
                    Telegram Group                             Join Now            

ಇ-ಕೇವೈಸಿ ಎಂದರೆ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯನ ಹೆಸರನ್ನು ಅಧಿಕೃತವಾಗಿ ನೋಂದಾಯಿಸುವುದು ಆಗಿದೆ. ಇದರಿಂದ ನಕಲಿ ರೇಷನ್ ಕಾರ್ಡ್ ತಡೆಗಟ್ಟಲು ಸಹಕಾರಿ ಆಗುತ್ತದೆ.

ರೇಷನ್ ಕಾರ್ಡ್ ಇ-ಕೇವೈಸಿ ಮಾಡಿಸಲು ದಿನಾಂಕ ವಿಸ್ತರಣೆ:-

ರಾಜ್ಯ ಸರಕಾರವು ಮುಂಚೆ ರೇಷನ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಕ್ಕೆ ಇ-ಕೇವೈಸಿ ಮಾಡಿಸಲು ಸೆಪ್ಟೆಂಬರ್ 14  ಕೊನೆಯ ದಿನಾಂಕ ಎಂದು ನಿಗದಿಪಡಿಸಿತ್ತು. ಆದರೆ ಹಲವಾರು ಕುಟುಂಬಗಳು ಇನ್ನು ರೇಷನ್ ಕಾರ್ಡ್ ಇ-ಕೇವೈಸಿ ಮಾಡಿಸಿಲ್ಲ. ಆದ್ದರಿಂದ ಸರಕಾರವು ರೇಷನ್ ಕಾರ್ಡ್ ಇ-ಕೇವೈಸಿ ಮಾಡಿಸುವುದನ್ನು ಸೆಪ್ಟೆಂಬರ್ 30 ರ ತನಕ ವಿಸ್ತರಿಸಿದೆ.

ಇದನ್ನೂ ಓದಿ: ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹಾಗಾಗಿ ಅರ್ಹ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಗಳು ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರ ಜೊತೆಗೆ ತಮ್ಮ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಹೋಗಿ ತಮ್ಮ ರೇಷನ್ ಕಾರ್ಡ್ ಇಕೇವೈಸಿ ಮಾಡಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

By

Leave a Reply

Your email address will not be published. Required fields are marked *