ಆತ್ಮೀಯ ರೈತ ಬಾಂಧವರೇ ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರೈತನು ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಎರಡು ವಿಷಯಗಳೆಂದರೆ ಅವು ಜಮೀನು ಮತ್ತು ತಾನು ಸಾಕಿದ ಜಾನುವಾರು. ಕೆಲವು ಸಂದರ್ಭದಲ್ಲಿ ಅವನಿಗೆ ಏನೇ ಸಮಸ್ಯೆಯಾದರೂ ಅವನು ಸಹಿಸಬಲ್ಲ,ಆದರೆ ಈ ಎರಡು ವಿಷಯಗಳಲ್ಲಿ ಅವನು ಎಂದಿಗೂ ಸಹಿಸಲಾರ.
ಆತ್ಮೀಯ ರೈತ ಬಾಂಧವರೇ ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರೈತನು ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಎರಡು ವಿಷಯಗಳೆಂದರೆ ಅವು ಜಮೀನು ಮತ್ತು ತಾನು ಸಾಕಿದ ಜಾನುವಾರು. ಕೆಲವು ಸಂದರ್ಭದಲ್ಲಿ ಅವನಿಗೆ ಏನೇ ಸಮಸ್ಯೆಯಾದರೂ ಅವನು ಸಹಿಸಬಲ್ಲ,ಆದರೆ ಈ ಎರಡು ವಿಷಯಗಳಲ್ಲಿ ಅವನು ಎಂದಿಗೂ ಸಹಿಸಲಾರ.
Thank you for reading this post, don't forget to subscribe!ಇದೀಗ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಅಲ್ಲದೇ ಹಲವು ಜಿಲ್ಲೆಗಳಲ್ಲಿ ಈ ಸಂದರ್ಭದಲ್ಲಿ ಅತಿವೃಷ್ಟಿ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಮನುಷ್ಯರಿಗಿಂತ ಹೆಚ್ಚಾಗಿ ಜಾನುವಾರುಗಳು ತುಂಬಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ.
ಅದು ಮಳೆಗಾಲವೇ ಇರಲಿ ಅಥವಾ ಬೇಸಿಗೆ ಕಾಲ ಇರಲಿ, ದನಗಳನ್ನು ಕಟ್ಟಲು ಒಂದು ಅಚ್ಚುಕಟ್ಟಾದ ಕೊಟ್ಟಿಗೆ (ಶೆಡ್) ಇರಲೇಬೇಕು. ಇಲ್ಲದಿದ್ದರೆ ರೈತನ ಪ್ರಾಣವಾದ ಇವು ವಿನಾಕಾರಣ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.
ಈ ದೃಷ್ಟಿಯಿಂದಲೇ ರಾಜ್ಯ ಸರ್ಕಾರ ನರೇಗಾ ಯೋಜನೆಯಡಿಯಲ್ಲಿ ರೈತರು ದನದ ಕೊಟ್ಟಿಯನ್ನು ಕಟ್ಟಿಕೊಳ್ಳಲು ಸಹಾಯಧನವನ್ನು ನೀಡಲು ಮುಂದಾಗಿದೆ. ಹಾಗಾದ್ರೆ ಯಾವುದು ಈ ಯೋಜನೆ ,ಎಷ್ಟು ಸಹಾಯ ಧನ ಸಿಗುತ್ತದೆ, ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ರೈತರೇ ನಿಮಗೆಲ್ಲ ತಿಳಿದಿರುವಂತೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನರೇಗಾ ಯೋಜನೆಯಡಿ ಕೆಲಸ ಮಾಡುವ ನೋಂದಾಯಿತ ರೈತರಿಗೆ ತಮ್ಮ ಜಾನುವಾರುಗಳನ್ನು ಸಾಕಲು ಈ ಸಹಾಯ ಧನವನ್ನು ರಾಜ್ಯ ಸರಕಾರ ನೀಡುತ್ತಿದ್ದು, ಇದು ಕೇವಲ ನರೇಗಾ ಯೋಜನೆಯಡಿ ನೋಂದಾಯಿತ ರೈತರಿಗೆ ಮಾತ್ರ ಅನ್ವಯಿಸಲಿದೆ.
ಇದರ ಅಡಿಯಲ್ಲಿ ಅರ್ಹ ರೈತರಿಗೆ ದನದ ಶೆಡ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ 57,000 ರೂಪಾಯಿಗಳ ಆರ್ಥಿಕ ಧನ ಸಹಾಯವನ್ನು ಮಾಡುತ್ತಿದೆ. ಇದರ ಪ್ರಕಾರ ಈ ಹಣದಲ್ಲಿ 10,500 ರೂಪಾಯಿ ಕೂಲಿ ಆಳುಗಳಿಗೆ ನೀಡಬೇಕು ಮತ್ತು ಉಳಿದ ಹಣವನ್ನು ಕೊಟ್ಟಿಗೆ ನಿರ್ಮಾಣಕ್ಕೆ ಬೇಕಾಗುವ ವಸ್ತುಗಳನ್ನು ಖರೀದಿಸಲು ಬಳಸಬೇಕು ಎಂಬ ನಿಯಮವಿದೆ.
ಇನ್ನು ಈ ಸಹಾಯಧನವನ್ನು ಪಡೆಯಲು ಬಯಸುವ ಅರ್ಹ ರೈತರು ಅರ್ಜಿ ನಮೂನೆಯೊಂದಿಗೆ ತಮ್ಮ ಆಧಾರ ಕಾರ್ಡ,ನರೇಗಾ ಜಾಬ್ ಕಾರ್ಡ್,ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್ ಮತ್ತು ಪಶು ಸಾಕಾಣಿಕೆಯ ಪ್ರಮಾಣ ಪತ್ರವನ್ನು ಲಗತ್ತಿಸಿ ತಮ್ಮ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕೊಡಬೇಕು.
ಈ ಕುರಿತು ನಿಮಗೆ ಏನೇ ಹೆಚ್ಚಿನ ಮಾಹಿತಿ ಬೇಕಿದ್ದರೆ ಅಥವಾ ಏನೇ ಪ್ರಶ್ನೆಗಳಿದ್ದರೆ ನೀವು ನಿಮ್ಮ ಪಂಚಾಯತಿಯಲ್ಲಿ ಹೋಗಿ ವಿಚಾರಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…