WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ರೇಷನ್ ಕಾರ್ಡ್ (BPL Card) ಮೂಲಕ ಪ್ರತಿ ತಿಂಗಳು ಉಚಿತ ಅಕ್ಕಿ, ಎಣ್ಣೆ ದವಸ ಧಾನ್ಯಗಳನ್ನು ನೀಡುತ್ತಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಈ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ  ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಡಿತರ ಚೀಟಿ (Ration Card) ವಿತರಣೆ ಮಾಡಿ,ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ  ಉಚಿತ ರೇಷನ್ ನೀಡಲಾಗುತ್ತಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆದರೆ ಈ ಯೋಜನೆಯನ್ನು ಹಲವರು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ರೇಷನ್ ಕಾರ್ಡ್ ಪಡೆದು ಉಚಿತ ಅಕ್ಕಿ, ದವಸ ಧಾನ್ಯಗಳನ್ನು ಪಡೆಯುತ್ತಿದ್ದಾರೆ. ಇಂತಹವರ ವಿರುದ್ಧ ಇದೀಗ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಳ್ಳುತ್ತಿದೆ.

ಅಲ್ಲದೆ ಈ ಯೋಜನೆ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ₹680  ಹಣವನ್ನು ನೇರವಾಗಿ ಆಯಾ ಕುಟುಂಬದ ಯಜಮಾನ/ಯಜಮಾನಿಯ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದನ್ನೂ ಓದಿ: 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿ

ಆದರೆ ಸರ್ವರ್ ಪ್ರಾಬ್ಲಮ್ ಆಗಿರುವುದರಿಂದ ಈ ತಿಂಗಳು ಬರಬೇಕಾಗಿದ್ದ ಅನ್ನ ಭಾಗ್ಯ ಯೋಜನೆ ಹಣ ಇನ್ನೂ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಆದರೆ ಶೀಘ್ರದಲ್ಲೇ ತಾಂತ್ರಿಕ ದೋಷಗಳನ್ನು ಪರಿಹರಿಸಿ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.

ಇನ್ನು ಹಿಂದಿನ ತಿಂಗಳ ಅನ್ನ ಭಾಗ್ಯ ಯೋಜನೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ,ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಅನ್ನಭಾಗ್ಯ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ವಿಧಾನ:

      
                    WhatsApp Group                             Join Now            
   
                    Telegram Group                             Join Now            

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಲಿಂಕ್ ಮೇಲೆ ಕ್ಲಿಕ್ ಮಾಡಿ  ಗೂಗಲ್ ಪ್ಲೇಸ್ಟೋರಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.dbtkarnataka

ಹಂತ -2) ನಂತರ ನಿಮ್ಮ ಹೆಸರು, ಆಧಾರ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ OTP ಬರುತ್ತದೆ. ಅದನ್ನು ಹಾಕಿ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಹೋಮ್ ಪೇಜ್ ಕಾಣುತ್ತದೆ. ಅಲ್ಲಿ ನೀವು ಪಾವತಿ ಸ್ಥಿತಿ (Payment Status) ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ  ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಎಂಬ ಎರಡು ಆಯ್ಕೆ ಕಾಣುತ್ತವೆ. ನೀವು ಅನ್ನಭಾಗ್ಯ ಯೋಜನೆ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ಅಲ್ಲಿ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಮತ್ತು ಯಾವ ಯಾವ ತಿಂಗಳ ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

By

Leave a Reply

Your email address will not be published. Required fields are marked *