ಆತ್ಮೀಯ ರೈತ ಬಾಂಧವರೇ, ರಾಜ್ಯ ಸರ್ಕಾರ ಬರ ಪರಿಹಾರದ ಮೊದಲ ಕಂತು 2,000 ರೂಪಾಯಿಯನ್ನು ಜನೆವರಿ 23 ರಂದು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಬರ ಪರಿಹಾರಕ್ಕಾಗಿ 3554 ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದ್ದು, ಬರ ಪರಿಹಾರದ 2 ನೇ ಕಂತನ್ನು ಶೀಘ್ರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
Thank you for reading this post, don't forget to subscribe!ಇದನ್ನೂ ಓದಿ: Manasvini Yojane: ಈ ಯೋಜನೆಯ ಮೂಲಕ ಪ್ರತಿ ತಿಂಗಳು 500 ರೂಪಾಯಿ ಪಡೆಯಿರಿ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..
ಯಾರೆಲ್ಲಾ ಅರ್ಹರು?
ಮೊದಲ ಕಂತಿನಲ್ಲಿ ಹಣ ಪಡೆದ ರೈತರು 2 ನೇ ಕಂತಿನ ಹಣ ಪಡೆಯಲು ಅರ್ಹರಾಗಿರುತ್ತಾರೆ. ಜೊತೆಗೆ ಮೊದಲ ಕಂತಿನ ಹಣ ತಾಂತ್ರಿಕ ಸಮಸ್ಯೆಯಿಂದ ಯಾರಿಗೆಲ್ಲ ಬಂದಿಲ್ಲ ಅವರು ತಮ್ಮ ಸಮಸ್ಯೆಯನ್ನು ಪರಿಹರಿಸಿಕೊಂಡಿದ್ದರೆ, ಅವರಿಗೂ ಕೂಡ 2 ನೇ ಕಂತಿನ ಹಣ ಜಮಾ ಆಗಲಿದೆ. ಯಾರೆಲ್ಲಾ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಕಾರ್ಡ ಲಿಂಕ್ ಮಾಡಿಸಿಲ್ಲವೋ, ಆದಷ್ಟೂ ಬೇಗ ಮಾಡಿಸಿ. ಇದರಿಂದ ನೇರವಾಗಿ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗುತ್ತದೆ.
ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ?
ನೀವು ಬರ ಪರಿಹಾರ ಹಣಕ್ಕೇ ಅರ್ಹರಾಗಿದ್ದರೆ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ನಿಮ್ಮ ಮೋಬೈಲ್ ನಲ್ಲಿಯೇ ತಿಳಿದುಕೊಳ್ಳಬಹುದು. ಅದಕ್ಕೆ ಕೆಳಗೆ ಸೂಚಿಸಲಾದ ಹಂತಗಳನ್ನು ಅನುಸರಿಸಿ.
ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮುಂದೆ ಒಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ.
https://parihara.karnataka.gov.in/service89/PaymentDetailsReport.aspx
ಹಂತ -2) ನಂತರ ಅಲ್ಲಿ ಇನ್ ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು ಅಂತ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ಅಲ್ಲಿ ವರ್ಷ, ಋತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮದ ವಿವರಗಳನ್ನು ಹಾಕಿ ನಿಮ್ಮ ಹೆಸರನ್ನು ಚೆಕ್ ಮಾಡಿ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: 9 ನೇ ಕಂತಿನ ಹಣ ಬಿಡುಗಡೆಗೆ! ನಿಮ್ಮ ಜಿಲ್ಲೆಗೆ ಬಿಡುಗಡೆ ಆಗಿದೆಯಾ ಚೆಕ್ ಮಾಡಿ ನೋಡಿ !!
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M