ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಮಳೆಯಿಂದ ಬೆಳೆ ಹಾನಿಯಾದ 46,268 ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಜೋಡಣೆ ಹಾಗೂ ಹೆಸರಿನಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಲಾಗಿದೆ ಕೂಡಲೇ ನೇರವಾಗಿ ಅವರ ಖಾತೆಗೆ ಹಾನಿಯಾದ ಪರಿಹಾರ ಹಣ ಜಮೆ ಮಾಡಲಿಲ್ಲ. ಹಾಗಾದ್ರೆ ಈ ಅಂಕಣದಲ್ಲಿ ನಾನು ಸಂಪೂರ್ಣವಾಗಿ ಏನು ಮಾಡಬೇಕು ತಿಳಿಸಿದ್ದೇನೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಮಳೆಯಿಂದ ಬೆಳೆ ಹಾನಿಯಾದ 46,268 ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಜೋಡಣೆ ಹಾಗೂ ಹೆಸರಿನಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಲಾಗಿದೆ ಕೂಡಲೇ ನೇರವಾಗಿ ಅವರ ಖಾತೆಗೆ ಹಾನಿಯಾದ ಪರಿಹಾರ ಹಣ ಜಮೆ ಮಾಡಲಿಲ್ಲ.
ಹೌದು, ಈ ಕುರಿತಂತೆ ಸಚಿವ ಕೃಷ್ಣ ಭೈರೇಗೌಡರು ಪ್ರಕಟಿಸಿದ್ದಾರೆ.
ಕಾಂಗ್ರೆಸ್ ನ ತಿಪ್ಪಣ್ಣಪ್ಪ ಕಮಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಲಬುರಗಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ 3.23.318, ರೈತರಿಗೆ 498.73 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಆದರೆ 26,394 ರೈತರಿಗೆ ಹಣ ಪಾವತಿ ಆಗಿಲ್ಲ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದು ಹಾಗೂ ರೈತರ ಹೆಸರಿನಲ್ಲಿ ವ್ಯತ್ಯಾಸ ಇರುವ ಕಾರಣ ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತಿಲ್ಲ. ರೈತರು ಈ ವ್ಯತ್ಯಾಸವನ್ನು ಸರಿಪಡಿಸಿದರೆ ದಿನದಲ್ಲಿ ಹಣ ಅವರ ಖಾತೆಗೆ ಜಮೆಯಾಗಲಿದೆ ಎಂದು ಹೇಳಿದರು
ಇದಕ್ಕೂ ಮುನ್ನ ಮಾತನಾಡಿದ ಕಮಕನೂರು, ಬೆಳೆ ಹಾನಿಗೆ ರೈತರಿಗೆ ಇನ್ಪುಟ್ ಸಬ್ಸಿಡಿ ಹೆಚ್ಚು ಮಾಡಲು ಸುಮಾರು 2.76 ಲಕ್ಷ ರೈತರಿಗೆ ಬೆಳೆ ವಿಮೆ ಸರಿಯಾಗಿ ಸಿಕ್ಕಿಲ್ಲ ಎಂದು ಗಮನ ಸೆಳೆದಿದ್ದರು.
ಬೆಳೆ ಹಾನಿ ಪರಿಹಾರ ಹಣ ನಿಮಗೆ ಜಮೆಯಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಲಾಗಿದೆ
ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪರಿಹಾರ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನೀವುರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ( 2025-26) ಆಯ್ಕೆ ಮಾಡಿಕೊಳ್ಳಬೇಕು. ನಂತರ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಫ್ಲಡ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಇಲ್ಲವೋ ಎಂಬ ಮಾಹಿತಿ ಗೊತ್ತಾಗಲಿದೆ.
ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಅವರು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಹೆಚ್. ಶ್ರೀನಿವಾಸ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು.
ರಾಜ್ಯದ ಎಲ್ಲಾ ರೈತರ ತಾಕುಗಳು ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ.
ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೆ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಗ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ ಕಲ್ಪಿಸಿಲ್ಲ. ಬೆಳೆ ಮಾಹಿತಿ ಕುರಿತಂತೆ ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 4.40 ಕೋಟಿ ತಾಕುಗಳ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸುಮಾರು 2 ಲಕ್ಷ ಆಕ್ಷೇಪಣೆಗಳೂ ಕೂಡ ಸಲ್ಲಿಕೆಯಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಮರು ಸಮೀಕ್ಷೆ ಮಾಡಿಸಿದ್ದೇವೆ. ಅಧಿಕಾರಿ, ಸಿಬ್ಬಂದಿಗಳು ಎಲ್ಲಿಯೂ ಕುಳಿತು ಬೆಳೆ ಸಮೀಕ್ಷೆ ಮಾಡಲು ಅವಕಾಶ ಇರುವುದಿಲ್ಲ ಎಂದರು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…