ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿಗಿಂತ ಈ ವರ್ಷ ಮುಂಗಾರು ಮಳೆ ಪ್ರಮಾಣ ಅಂದಾಜಿಗಿಂತ ಹೆಚ್ಚಾಗಿದ್ದು, ಇದರಿಂದ ಹಲವು ರೈತರ ಬೆಳೆಗಳು ಹಾನಿಗೊಳಗಾಗಿವೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿಗಿಂತ ಈ ವರ್ಷ ಮುಂಗಾರು ಮಳೆ ಪ್ರಮಾಣ ಅಂದಾಜಿಗಿಂತ ಹೆಚ್ಚಾಗಿದ್ದು, ಇದರಿಂದ ಹಲವು ರೈತರ ಬೆಳೆಗಳು ಹಾನಿಗೊಳಗಾಗಿವೆ.
Thank you for reading this post, don't forget to subscribe!ಇನ್ನು ಮಳೆಯ ಅಬ್ಬರ ಮುಂದುವರಿದಿರುವುದರಿಂದ ಬೆಳೆ ಹಾನಿ ಪ್ರಮಾಣ ಇನ್ನೂ ಹೆಚ್ಚಾಗಲಿದೆ. ಕಳೆದ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿ ರೈತರ ಬೆಳೆ ಹಾನಿಯಾಗಿದ್ದವು. ಆದರೆ ಈ ಬಾರಿ ಸರಾಸರಿಗಿಂತ ಹೆಚ್ಚು ಮಳೆಯಾಗಿ ಕೆಲವು ಜಿಲ್ಲೆಗಳಲ್ಲಿ ಗುಡ್ಡ ಕುಸಿತ, ಪ್ರವಾಹವಾಗಿ ಆ ಭಾಗದ ರೈತರ ಬೆಳೆ ಮತ್ತೆ ಹಾನಿಗೊಳಗಾಗಿವೆ.
ಈ ವರ್ಷದಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರ ಸದ್ಯ ಒಟ್ಟು 777 ಕೋಟಿ ರೂಪಾಯಿ ಅನುದಾನವನ್ನು ಪರಿಹಾರವಾಗಿ ಬಿಡುಗಡೆ ಮಾಡಿದೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು,” ಈ ವರ್ಷ ಮುಂಗಾರು ಸರಾಸರಿಗಿಂತ ಹೆಚ್ಚಾಗಿದ್ದು, ರೈತರ ಬೆಳೆಗಳಿಗೆ ತುಂಬಾ ಹಾನಿ ಉಂಟಾಗಿದೆ. ಈ ಕಾರಣದಿಂದ ನಮ್ಮ ಸರಕಾರವು ರೈತರಿಗೆ ಆರ್ಥಿಕವಾಗಿ ಧನ ಸಹಾಯ ಮಾಡಿ ಅವರ ಬೆನ್ನಿಗೆ ನಿಲ್ಲಲು ಈಗ 777 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ” ಎಂದು ತಿಳಿಸಿದರು.
ಇನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ” ಬಿಡುಗಡೆ ಮಾಡಲಾದ ಹಣವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಈ ಅನುದಾನದಲ್ಲಿ ಹಾಸನ ಜಿಲ್ಲೆಗೆ ಅತಿ ಹೆಚ್ಚು ಅನುದಾನ ಸಿಕ್ಕಿದ್ದು ಒಟ್ಟು 23 ಕೋಟಿಯನ್ನು ನೀಡಲಾಗಿದೆ. ಇನ್ನು ಮಂಡ್ಯ ಜಿಲ್ಲೆಗೆ 20 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ” ಎಂದು ಅವರು ತಿಳಿಸಿದರು.
ಆದ್ದರಿಂದ ಈ ವರ್ಷದ ಮಳೆಯಿಂದ ಬೆಳೆ ಹಾನಿಯಾದ ರೈತರು ಆದಷ್ಟು ಬೇಗನೆ ತಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ತಮ್ಮ ಬೆಳೆ ಹಾನಿಯ ವಿಷಯವನ್ನು ತಿಳಿಸಿ ಪರಿಹಾರವನ್ನು ಪಡೆದುಕೊಳ್ಳಿ.
ಇನ್ನು ಇತ್ತೀಚೆಗಷ್ಟೇ ಕಳೆದ ಸಾಲಿನ ಬೆಳೆ ಹಾನಿ ಪರಿಹಾರವನ್ನು ರಾಜ್ಯ ಸರ್ಕಾರ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿತ್ತು. ಅಲ್ಲದೇ ಹೆಚ್ಚುವರಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 500 ಕೋಟಿ ರೂಪಾಯಿ ಹೆಚ್ಚುವರಿ ಅನುದಾನವನ್ನು ನೀಡಿತ್ತು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…