ಇದೀಗ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು ಮುಂದಿನ ಒಂದು ವಾರದಲ್ಲಿ ಎಲ್ಲಾ ಅರ್ಹ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ಬಾರಿ ಹಿಂಗಾರು ಋತುವಿನಲ್ಲಿ ಅಕಾಲಿಕ ಮಳೆಯಾಗಿ ರಾಜ್ಯದ ಹಲವೆಡೆ ಬೆಳೆಗಳು ಹಾನಿಗೆ ಒಳಗಾಗಿವೆ.
Thank you for reading this post, don't forget to subscribe!ಇದೀಗ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು ಮುಂದಿನ ಒಂದು ವಾರದಲ್ಲಿ ಎಲ್ಲಾ ಅರ್ಹ ರೈತರ ಖಾತೆಗೆ ಪರಿಹಾರ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಈ ವರ್ಷದ ಹಿಂಗಾರು ಹಂಗಾಮಿನಲ್ಲಿ ಅಕಾಲಿಕವಾಗಿ ಸುರಿದ ಮಳೆಗೆ 1.58 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ 120 ಕೋಟಿ ರೂಪಾಯಿ ಪರಿಹಾರ ಹಣವನ್ನು(bele parihara amount) ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷ್ಣ ಭೈರೇಗೌಡ ಅವರು ಮಾಧ್ಯಮಗಳಿಗೆ ಹೇಳಿದರು.
ಇನ್ನು ನಿಮ್ಮ ಬೆಳೆ ಕೂಡ ಹಿಂಗಾರು ಹಂಗಾಮಿನಿಂದ ಹಾನಿಗೊಳಗಾಗಿ ಹಿಂಗಾರು ಬೆಳೆ ಪರಿಹಾರಕ್ಕೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿ ಸ್ಥಿತಿಯನ್ನು ನೀವು ಮನೆಯಲ್ಲೇ ಕುಳಿತು ಚೆಕ್ ಮಾಡಬಹುದು.
ಹೌದು ರೈತ ಮಿತ್ರರೇ, ಇದೀಗ ನೀವು ರಾಜ್ಯ ಸರಕಾರ ಬಿಡುಗಡೆ ಮಾಡಲಿರುವ ಹಿಂಗಾರು ಬೆಳೆ ಪರಿಹಾರ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಅದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕನ್ನಡ ಅಥವಾ ಇಂಗ್ಲಿಷ್ ಭಾಷೆ ಮೇಲೆ ಕ್ಲಿಕ್ ಮಾಡಿ ಮುಂದುವರಿಯಿರಿ. ಅಲ್ಲಿ ನಿಮಗೆ Parihara Payment Reports ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಅಲ್ಲಿ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Village Wise List ಮೇಲೆ ಕ್ಲಿಕ್ ಮಾಡಿ. ನಂತರ ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಹಿಂಗಾರು ಬೆಳೆ ಪರಿಹಾರ ಹಣಕ್ಕೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಿಂಗಾರು ಬೆಳೆ ಪರಿಹಾರ ಹಣ ಬರುವುದಿಲ್ಲ.ಈ
ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಹಿಂಗಾರು ಬೆಳೆ ಪರಿಹಾರ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…