ಆತ್ಮೀಯ ರೈತ ಬಾಂಧವರೇ ತಮಗೆಲ್ಲೇಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ತಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ಎಲ್ಲ ಬೆಳೆಗಳು ನಷ್ಟವಾಗಿದ್ದವು.
Thank you for reading this post, don't forget to subscribe!ಅದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಸರ್ಕಾರವು ಬೆಳೆಹಾನಿಯಾದ ಪ್ರತಿ ರೈತರ ಖಾತೆಗೆ ನೇರವಾಗಿ ಬೆಳೆ ಹಾನಿ ಪರಿಹಾರ ಹಣ ಜಮಾ ಮಾಡುವ ಕ್ರಮವನ್ನು ತೆಗೆದುಕೊಂಡಿದ್ದಾರೆ. ಅದರಂತೆ ಈಗಾಗಲೇ ಮೂರು ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ.
ಇದನ್ನೂ ಓದಿ: ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಅಲ್ಲದೇ ರಾಜ್ಯ ಸರಕಾರ ಹೆಚ್ಚುವರಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ ಅನುದಾನ ಅಲ್ಲದೇ ರಾಜ್ಯ ಸರ್ಕಾರದ ಬೊಕ್ಕಸದಿಂದ 500 ಕೋಟಿ ರೂಪಾಯಿ ವೆಚ್ಚದಲ್ಲಿ ರೈತರಿಗೆ ಹೆಚ್ಚುವರಿ ಪರಿಹಾರ ಹಣ ಜಮಾ ಮಾಡುತ್ತಿದೆ.
ಆದರೆ ಇನ್ನೂ ಹಲವು ರೈತರಿಗೆ ಬರ ಪರಿಹಾರದ ಒಂದು ಕಂತಿನ ಹಣವು ಬಂದಿಲ್ಲ. ಅಂತಹ ಹಣ ಜಮಾ ಆಗದೇ ಇರುವ ರೈತರು ಏನು ಮಾಡಬೇಕು, ಎಲ್ಲಿ ದಾಖಲೆ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ತಿಳಿಯಲು ಈ ಅಂಕಣವನ್ನು ಕೊನೆವರೆಗೂ ತಪ್ಪದೇ ಓದಿರಿ.
ಬೆಳೆ ಪರಿಹಾರ ಹಣ ಜಮಾ ಆಗದೇ ಇರಲು ಕಾರಣವೇನು?
ಹಲವು ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮಾ ಆಗದೇ ಇರಲು ಮುಖ್ಯ ಕಾರಣವೆಂದರೆ ಅಂತಹ ರೈತರು ತಮ್ಮ ಹೆಸರಿಗೆ ಎಫ್ ಐ ಡಿ (FID) ನಂಬರ್ ಮಾಡಿಸದೇ ಇರುವುದು.
ಹೌದು ರೈತರೇ ಇದೀಗ ಸರ್ಕಾರದ ಎಲ್ಲ ಯೋಜನೆಗಳ ಲಾಭ ಪಡೆಯಲು ರೈತರಿಗೆ ಎಫ್ ಐ ಡಿ (FID) ನಂಬರ್ ಕಡ್ಡಾಯವಾಗಿದ್ದು ಈ ನಂಬರ್ ಇಲ್ಲದಿದ್ದರೆ ನಿಮಗೆ ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ ಅಥವಾ ಪಿಎಂ ಕಿಸಾನ್ ಹಣ ಜಮಾ ಆಗುವುದಿಲ್ಲ. ಇದೆಲ್ಲಕ್ಕೂ ಎಫ್ ಐ ಡಿ (FID) ನಂಬರ ಬೇಕೆ ಬೇಕು.
ಇದನ್ನೂ ಓದಿ: ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ನಿಮ್ಮ ಹೆಸರಿಗೆ FID ನಂಬರ್ ಇದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲಿ ತಿಳಿಯಲು ಕೆಳಗೆ ತಿಳಿಸಿದ ವಿಧಾನವನ್ನು ಅನುಸರಿಸಿ.
ಮೊಬೈಲ್ ನಲ್ಲೇ FID ನಂಬರ್ ಚೆಕ್ ಮಾಡುವುದು ಹೇಗೆ?
ಹಂತ -1) ರೈತರೇ ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/GetDetailsByAadhaar.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಒಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರಿಗೆ FID ನಂಬರ್ ಇದ್ದರೆ ಅಲ್ಲಿ ಕಾಣಿಸುತ್ತದೆ. ಅದರ ಜೊತೆಗೆ ನಿಮ್ಮ ಪಿಎಂ ಕಿಸಾನ್ ಐಡಿ ನಂಬರ್ ಕೂಡ ಕಾಣುತ್ತದೆ ಮತ್ತು ಯಾವ ಸರ್ವೆ ನಂಬರಿಗೆ ನಿಮ್ಮ FID ನಂಬರ್ ಲಿಂಕ್ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಒಂದು ವೇಳೆ ನಿಮ್ಮ ಹೆಸರಿಗೆ ಎಫ್ ಐ ಡಿ (FID) ನಂಬರ್ ಇಲ್ಲದಿದ್ದರೆ ಈ ಕೂಡಲೇ ನೀವು ಎಫ್ ಐ ಡಿ (FID) ನಂಬರ್ ಮಾಡಿಸಿ. ಎಫ್ ಐ ಡಿ (FID) ನಂಬರ್ ಮಾಡಿಸುವುದು ಹೇಗೆ ಮತ್ತು ಅದಕ್ಕೆ ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ ತಪ್ಪದೇ ಓದಿ.
FID ನಂಬರ್ ಇಲ್ಲದಿದ್ದರೆ ಏನು ಮಾಡಬೇಕು?
ರೈತ ಮಿತ್ರರೇ ಈಗಾಗಲೇ ನಿಮಗೆ ಮೇಲೆ ತಿಳಿಸಿದಂತೆ ಸರ್ಕಾರದ ಯಾವುದೇ ಕಾರ್ಯಕ್ರಮವಾಗಲಿ ಅಥವಾ ಯೋಜನೆಯಾಗಲಿ ಅಥವಾ ಸಬ್ಸಿಡಿಯಾಗಲಿ , ಅದರ ಪ್ರಯೋಜನ ಪಡೆಯಲು ನಿಮ್ಮ ಬಳಿ ನಿಮ್ಮ ಸ್ವಂತ FID ನಂಬರ್ ಇರುವುದು ಅವಶ್ಯಕ. ಹಾಗಾಗಿ ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ರಚನೆಯಾಗದೆ ಇದ್ದರೆ, ನೀವು ಈ ಕೂಡಲೇ ನಿಮ್ಮ ಸಮೀಪದ ಗ್ರಾಮ್ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?
- ಆಧಾರ ಕಾರ್ಡ
- ಹೊಲದ ಉತಾರಿ
- ಇತ್ತೀಚಿನ ಭಾವಚಿತ್ರ (ಫೋಟೋ)
- ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್
- ಜಾತಿ ಪ್ರಮಾಣ ಪತ್ರ ( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ)
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.
- Krushi honda subsidy: ರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ! ಇಲ್ಲಿದೆ ಸಂಪೂರ್ಣ ಮಾಹಿತಿರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಅವಕಾಶ. ಕೃಷಿ ಭಾಗ್ಯ ಯೋಜನೆಯಡಿ ಮಳೆ ನೀರು ಸಂಗ್ರಹಣೆಗಾಗಿ ಕೃಷಿ ಹೊಂಡಕ್ಕೆ ಎಷ್ಟು ಸಬ್ಸಿಡಿ ಸಿಗುತ್ತದೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆ ವಿವರಗಳು ಇಲ್ಲಿವೆ.
- LIC HFL FD ಯೋಜನೆ: ಪ್ರತಿ ತಿಂಗಳಿಗೆ ₹9,750 ವರೆಗೆ ಬಡ್ಡಿ ಆದಾಯ!ಈ ಯೋಜನೆಯ ಮೂಲಕ, ಹೂಡಿಕೆದಾರರು ತಮ್ಮ ಹಣವನ್ನು ಸುರಕ್ಷಿತವಾಗಿ ಇರಿಸಬಹುದು ಮತ್ತು ಪ್ರತಿ ತಿಂಗಳ ಬಡ್ಡಿ ರೂಪದಲ್ಲಿ ಸ್ಥಿರ ಆದಾಯವನ್ನು ಪಡೆಯಬಹುದು. ವಿಶೇಷವಾಗಿ ಪದವೀ ವಿರಾಮ ಮಾಡಿದವರು, ಪಿಂಚಣಿದಾರರು ಅಥವಾ ಸ್ಥಿರವಾದ ಆದಾಯವನ್ನು ಬಯಸಿದವರಿಗೆ ಇದು ತುಂಬಾ ಉಪಯುಕ್ತ ಯೋಜನೆಯಾಗಿ ಪರಿಗಣಿಸಲ್ಪಡುತ್ತದೆ.
- ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಈಗಿನ ಕಾಲದಲ್ಲಿ ರೈತರು ತಮ್ಮ ಹೊಲದ ವಿವರಗಳನ್ನು ಪರಿಶೀಲಿಸಿ ಅದರ ಸೂಕ್ತ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಳ್ಳುವುದು ಬಹಳ ಅವಶ್ಯಕವಾಗಿದೆ. ಏಕೆಂದರೆ ಸರ್ಕಾರದಿಂದ ಬರುವ ಏನೇ ಸೌಲಭ್ಯಗಳಿದ್ದರೂ ಅವು ಈ ದಾಖಲೆ ನೋಡಿಯೇ ನೀಡಲಾಗುತ್ತದೆ. ಹಾಗಾಗಿ ಪ್ರತಿಯೊಬ್ಬ ರೈತರು ತಮ್ಮ ಜಮೀನಿನ ಸಂಪೂರ್ಣ ದಾಖಲೆ ಮತ್ತು ವಿವರಗಳನ್ನು ಕಡ್ಡಾಯವಾಗಿ ಮಾಡಿಸಿ ಇಡಬೇಕು.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
- ಕರ್ನಾಟಕದಲ್ಲಿ 2.43 ಲಕ್ಷ ರೇಷನ್ ಕಾರ್ಡ್ಗಳ ದಿಢೀರ್ ರದ್ದು: ನಿಮ್ಮ ಕಾರ್ಡ್ ಸಕ್ರಿಯವೇ? ತಕ್ಷಣ ಚೆಕ್ ಮಾಡಿ, ಅಕ್ಕಿ ಸಹಾಯ ಕಳೆದುಕೊಳ್ಳಬೇಡಿ!ಕರ್ನಾಟಕದಲ್ಲಿ 2.43 ಲಕ್ಷ ರೇಷನ್ ಕಾರ್ಡ್ಗಳನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದೆ! ನಿಮ್ಮ ರೇಷನ್ ಕಾರ್ಡ್ ಇನ್ನೂ ಸಕ್ರಿಯವಾಗಿದೆಯೇ? ತಕ್ಷಣವೇ ಮೊಬೈಲಿನಲ್ಲಿ ಆನ್ಲೈನ್ ಮೂಲಕ ಚೆಕ್ ಮಾಡಿ. ಯಾರಿಗೆ ರದ್ದು, ಏಕೆ ರದ್ದು, ಮತ್ತೆ ಸಕ್ರಿಯಗೊಳಿಸುವ ವಿಧಾನ—ಎಲ್ಲಾ ಮಾಹಿತಿ ಇಲ್ಲಿ ಓದಿ!
- ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?










