ಬೆಳೆ ಸಮೀಕ್ಷೆಯನ್ನು ಮೊಬೈಲ್ನಲ್ಲೇ ಮಾಡಿ ಬೆಳೆ ವಿಮೆ ಹಣ ಪಡೆಯಬಹುದು. ಯಾವ ಅಪ್ ಬಳಸಬೇಕು, ಹೇಗೆ ವಿವರ ತುಂಬಬೇಕು, ಕೊನೆಯ ದಿನಾಂಕ ಏನು – ಎಲ್ಲ ಮಾಹಿತಿಯನ್ನೂ ಇಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಿ. ರೈತರಿಗೆ ಬಹಳ ಉಪಯುಕ್ತ ಮಾಹಿತಿ.
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರಿಗೆ ಗುಡ್ ನ್ಯೂಸ್ ಇಲ್ಲಿದೆ. ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿಯೇ ಬೆಳೆ ಸಮೀಕ್ಷೆ ಮಾಡಬಹುದು. ಹೌದು, ರೈತ ಮಿತ್ರರೇ ಇದಕ್ಕೆ ಯಾರ ಸಹಾಯವೂ ಬೇಕಿಲ್ಲ. ಇಲ್ಲಿ ತಿಳಿಸಿದ ಮಾಹಿತಿಯ ಪ್ರಕಾರ ನೀವು ಸುಲಭವಾಗಿ ನಿಮ್ಮ ಬೆಳೆಗಳಿಗೆ ನೀವೇ ಸಮೀಕ್ಷೆ ಮಾಡಿ ಮಾಹಿತಿಯನ್ನು ಅಪ್ಲೋಡ್ ಮಾಡಬಹುದು.
2025-26ನೇ ಸಾಲಿನ ಹಿಂಗಾರು ಬೆಳೆ ಸಮೀಕ್ಷೆ ಈಗಾಗಲೇ ಆರಂಭವಾಗಿದೆ. ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಹಿಂಗಾರು ರೈತರು ಬೆಳೆ ಸಮೀಕ್ಷೆ 2025 ಆಯಪ್ ನ್ನು ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರವನ್ನು ಖುದ್ದಾಗಿ ದಾಖಲಿಸಬೇಕಿದೆ. ಹೀಗೆ ವಿವರ ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬೆಳೆಸಾಲ ಪಡೆಯುವಲ್ಲಿ ಅನುಕೂಲವಾಗಲಿದೆ. ಎಲ್ಲಾ ರೈತರು ಬೆಳೆ ವಿವರವನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆಯಪ್ ನಲ್ಲಿ ದಾಖಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ಹಿಂಗಾರು ರೈತರ ಬೆಳೆ ಸಮೀಕ್ಷೆ 2025 ಕಾಣಿಸುತ್ತದೆ. ಅಲ್ಲಿ ನೀವು ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ವೈಲ್ ಯೂಸಿಂಗ್ ದ ಆಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ಅಗ್ರಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ರೈತರ ಬೆಳೆ ಸಮೀಕ್ಷೆ 2025 ಕೆಳಗಡೆ ಋತು ಹಿಂಗಾರು ಕಾಣಿಸುತ್ತದೆ. ಅದರ ಕಳಗಡೆ ನಿಮಗೆ ಬೆಳೆ ಸಮೀಕ್ಷೆಯಲ್ಲಿ ತೊಂದರೆಯಾದರೆ ಅಲ್ಲಿ ಕಾಣುವ ರೈತರು ಬೆಳೆ ಸಮೀಕ್ಷೆಯ ಉಚಿತ ಸಹಾಯವಾಣಿ ನಂಬರ್ 18004253553 ಗೆ ಸಂಪರ್ಕಿಸಬಹುದು.
ಇಕೆವೈಸಿ ಮೂಲಕ ಆಧಾರ್ ದೃಢೀಕರಿಸು ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳು ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಈಘ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ಪಡೆಯಿರಿ Generate OTP ಮೇಲೆ ಕ್ಲಿಕ್ ಮಾಡಬೇಕಾ. ನಿಮ್ಮ ಮೊಬೈಲಿಗೆ ಒಂದು ಓಟಿಪಿ ಬರುತ್ತದೆ.ಆ ಓಟಿಪಿಸಂಖ್ಯೆಯನ್ನು ನೀವು ನಮೂದಿಸಬೇಕು.ಇಲ್ಲದಿದ್ದರೆ ಫೇಸ್ ಕ್ಯಾಪ್ಚುರ್ ಮೇಲೆ ಕ್ಲಿಕ್ ಮಾಡಬೇಕು
ರೈತರು ಬರಗಾಲ ಪರಿಹಾರ, ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಪಡೆಯಲು ರೈತರು ಬೆಳೆ ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಇನ್ನೇಕೆ ತಡ ಈಗಲೇ ಬೆಳೆ ಸಮೀಕ್ಷೆ ಮಾಡಿ ಬೆಳೆ ಪರಿಹಾರ ಪಡೆಯಿರಿ.
ರೈತರು ಬೆಳೆ ವಿವರ ದಾಖಲಿಸದೇ ಹೋದಲ್ಲಿ ಸರ್ಕಾರದ ಯೋಜನೆಯ ಲಾಭದಿಂದ ವಂಚಿತರಾಗುವ ಸಾಧ್ಯತೆಯಿದೆ. ಆದ್ದರಿಂದ ಬೆಳೆ ವಿವರ ದಾಖಲಿಸಬೇಕು ಎಂದು ಲಕ್ಷ್ಮೇಶ್ವರ ಕೃಷಿ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕ ಚಂದ್ರಶೇಖರ ನರಸಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರು ಹೆಚ್ಚಿನ ಆಸಕ್ತಿಯಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿ ದಾಖಲಿಸಬೇಕು. ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…