ಆತ್ಮೀಯ ರೈತ ಬಾಂಧವರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇತ್ತೀಚೆಗೆ ರಾಜ್ಯ ಸರ್ಕಾರ ಈ ಸಾಲಿನ ಮುಂಗಾರು ಬೆಳೆಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಸಲ್ಲಿಸಲು ಸೂಚಿಸಿದೆ. ಹೀಗಾಗಿ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರೈತರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಹಲವು ರೈತರಿಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದಿರುವುದಿಲ್ಲ. ಅಂತಹ ರೈತರಿಗಾಗಿ ಈ ಅಂಕಣವನ್ನು ಪ್ರಕಟಿಸುತ್ತಿದ್ದೇವೆ, ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇತ್ತೀಚೆಗೆ ರಾಜ್ಯ ಸರ್ಕಾರ ಈ ಸಾಲಿನ ಮುಂಗಾರು ಬೆಳೆಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಸಲ್ಲಿಸಲು ಸೂಚಿಸಿದೆ. ಹೀಗಾಗಿ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರೈತರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಹಲವು ರೈತರಿಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದಿರುವುದಿಲ್ಲ. ಅಂತಹ ರೈತರಿಗಾಗಿ ಈ ಅಂಕಣವನ್ನು ಪ್ರಕಟಿಸುತ್ತಿದ್ದೇವೆ, ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಆತ್ಮೀಯ ಓದುಗರೇ, ಅತಿವೃಷ್ಟಿ , ಅನಾವೃಷ್ಟಿ,ಭೂಕಂಪ, ಸುನಾಮಿ ಇದೇ ಮುಂತಾದ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾಗುವ ಕ್ಷೇತ್ರವೆಂದರೆ ಅದು ಕೃಷಿ. ಇನ್ನು ಭಾರತದಲ್ಲಿ ಸುಮಾರು ಶೇಕಡಾ 60 ರಷ್ಟು ಕುಟುಂಬಗಳು ಈ ಕೃಷಿಯನ್ನೇ ನಂಬಿ ಬದುಕುತ್ತಿವೆ. ಆದರೆ ಮೇಲೆ ಸೂಚಿಸಿದ ಪ್ರಕೃತಿ ವಿಕೋಪಗಳಾದಾಗ ಇಂತಹ ರೈತರ ಬದುಕು ತುಂಬಾ ದುಸ್ತರವಾಗುತ್ತದೆ. ಸಾಲ ಶೂಲ ಮಾಡಿ ಬಿತ್ತಿ ಬೆಳೆದ ಬೆಳೆ ಹೀಗೆ ಪ್ರಕೃತಿ ವಿಕೋಪಕ್ಕೆ ಸಿಲುಕಿದ ಮರು ಕ್ಷಣವೇ ಎಷ್ಟೊ ರೈತ ಕುಟುಂಬಗಳು ಸಾಲದ ಹೊರೆ ತಾಳದೇ ಬೀದಿಗೆ ಬೀಳುತ್ತವೆ.
ಇಂತಹ ಸಂದರ್ಭದಲ್ಲಿ ರೈತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 50:50 ಅನುಪಾತದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿವೆ. ಈ ಯೋಜನೆಯ ಅಡಿಯಲ್ಲಿ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಬೆಳೆ ಹಾನಿಯಾದ ರೈತರಿಗೆ ಆರ್ಥಿಕವಾಗಿ ಧನ ಸಹಾಯವನ್ನು ನೀಡಲಾಗುತ್ತಿದೆ.
ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ತಮ್ಮ ಫ್ರೂಟ್ಸ್ ಐಡಿ ನಂಬರ್ ಹೊಂದಿರುವುದು ಕಡ್ಡಾಯವಾಗಿದೆ. ಒಂದು ವೇಳೆ ರೈತರು ತಮ್ಮ ಫ್ರೂಟ್ಸ್ ಐಡಿ ನಂಬರ್ ಮರೆತು ಹೋಗಿದ್ದರೆ ಅದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ವಿವರಿಸಿದ್ದೇವೆ. ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/GetDetailsByAadhaar.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಅಲ್ಲಿ ನಿಮಗೆ ಕಾಣಿಸುತ್ತದೆ. ಅದರ ಜೊತೆಗೆ ಪಿಎಂಕೆ ಐಡಿ ನಂಬರ್ ಕೂಡ ಕಾಣುತ್ತದೆ.
ಹೀಗೆ ನೀವು ನಿಮ್ಮ ಫ್ರೂಟ್ಸ್ ಐಡಿ ನಂಬರ್ ಪಡೆದುಕೊಂಡು ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…