Categories: information

ಎಷ್ಟು ಬೆಳೆ ಹಾನಿಯಾದರೆ ಎಷ್ಟು ವಿಮೆ ಹಣ ಸಿಗಲಿದೆ? ಇಲ್ಲಿದೆ ಮಾಹಿತಿ

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಯಾವ ಹಂತದಲ್ಲಿ ಹಾನಿಯಾದರೆ ಎಷ್ಟು ಹಣ ಜಮೆಯಾಗುತ್ತದೆ ನಿಮಗೆ ಗೊತ್ತೇ? ಇಲ್ಲಿದೆ ಮಾಹಿತಿ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಯಾವ ಹಂತದಲ್ಲಿ ಹಾನಿಯಾದರೆ ಎಷ್ಟು ಹಣ ಜಮೆಯಾಗುತ್ತದೆ ನಿಮಗೆ ಗೊತ್ತೇ? ಇಲ್ಲಿದೆ ಮಾಹಿತಿ.

ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ  ಮಳೆಯ ಕೊರತೆಯಿಂದ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ. 25 ರಷ್ಟು ಬೆಳೆ ವಿಮೆ ಪಾವತಿಸಲಾಗುವುದು.  ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿಬೆಳೆ ನಷ್ಟ ಸಂಭವಿಸಿದರೆ  ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮೆ ನಷ್ಟ ಪರಿಹಾರದಲ್ಲಿ ಶೇ. 25 ರಷ್ಟು  ಹಣವನ್ನು ಪರಿಹಾರವಾಗಿ ನೀಡಲಾಗುವುದು.

Thank you for reading this post, don't forget to subscribe!

how much crop insurance ಬೆಳೆ ಯಾವ ಹಂತದಲ್ಲಿ ಎಷ್ಟು ನಷ್ಟವಾದರೆ ಎಷ್ಟು ಪರಿಹಾರ ನೀಡಲಾಗುವುದು?

ತೊಗರಿ ಬೆಳೆ ಮೊಳಕೆ ಹಂತದಲ್ಲಿ ನಷ್ಟವಾದರೆ ವಿಮಾ ಮೊತ್ತದ ಶೇ. 46 ರಷ್ಟು ಪರಿಹಾರ ನೀಡಲಾಗುವುದು. ಬೆಳವಣಿಗೆ ಹಂತದಲ್ಲಿ ಶೇ. 29, ಮೊಗ್ಗುವ ಹಂತದಲ್ಲಿ ಕೊಯ್ಲು ಹಂತದಲ್ಲಿ ಶೇ. 25 ರಷ್ಟು ಪರಿಹಾರ ನೀಡಲಾಗುವುದು.

ಹೆಸರು ಬೆಳೆಯನ್ನು ಮೊಳಕೆ ಹಂತದಲ್ಲಿ ಶೇ. 60, ಬೆಳೆವಣಿಗೆ ಹಂತದಲ್ಲಿ ಶೇ. 19, ಕೊಯ್ಲು ಹಂತದಲ್ಲಿ ಶೇ. 80 ರಷ್ಟು ಪರಿಹಾರ ನೀಡಲಾಗುವುದು.

ಸೊಯಾಬಿನ್ ಮತ್ತು ಅವರೆ ಮೊಳಕೆ ಹಂತದಲ್ಲಿ ಶೇ. 54, ಬೆಳವಣಿಗೆ ಹಂತದಲ್ಲಿ ಶೇ. 22, ಕೊಯ್ಲು ಹಂತದಲ್ಲಿ ಶೇ. 22 ಪರಿಹಾರ ನೀಡಲಾಗುವುದು.

ಸೂರ್ಯಕಾಂತಿ ಮೊಳಕೆ ಹಂತದಲ್ಲಿ ಶೇ. 68, ಬೆಳವಣಿಗೆ ಹಂತದಲ್ಲಿ ಶೇ. 18, ಕೊಯ್ಲು ಹಂತದಲ್ಲಿ ಶೇ. 13 ರಷ್ಟು ಪರಿಹಾರ ನೀಡಲಾಗುವುದು.

ಹತ್ತಿ ಮೊಳಕೆ ಹಂತದಲ್ಲಿ ಶೇ. 44, ಬೆಳವಣಿಗೆ ಹಂತದಲ್ಲಿ ಶೇ. 25, ಕೊಯ್ಲು ಹಂತದಲ್ಲಿ ಶೇ. 21 ರಷ್ಟು ಪರಿಹಾರ ನೀಡಲಾಗುವುದು. ಅದೇ ರೀತೆ ಎಳ್ಳು ಮೊಳಕೆ ಹಂತದಲ್ಲಿ ಶೇ. 58, ಬೆಳವಣಿಗೆ ಹಂತದಲ್ಲಿ ಶೇ. 18 ಹಾಗೂ ಕೊಯ್ಲು ಹಂತದಲ್ಲಿ ಶೇ. 24 ರಷ್ಚು ಪರಿಹಾರ ನೀಡಲಾಗುವುದು. ಹಾಗಾಗಿ ರೈತರು ಕಡ್ಡಾಯವಾಗಿ ಬೆಳೆ ವಿಮಾ ಸೌಲಭ್ಯವನ್ನು ಪಡೆಯಲು ಕೋರಲಾಗಿದೆ.

ರೈತರು ಪಾವತಿಸಬೇಕಾದ ವಿಮಾ ಮೊತ್ತದ ಮಾಹಿತಿ ಇಲ್ಲಿದೆ

ರೈತರು ಪ್ರತಿ ಹೆಕ್ಟೇರಿಗೆ ತೊಗರಿ  800 ರಿಂದ 850 ರೂಪಾಯಿ ಹೆಸರು 580 ರೂಪಾಯಿ ಉದ್ದು 560 ರೂಪಾಯಿ, ಸಜ್ಜೆ 580 ರೂಪಾಯಿ ಸೋಯಾ ಮತ್ತು ಅವರೆ 580 ರೂಪಾಯಿ ರೈತರ ವಂತಿಗೆ ಪಾವತಿಸಬೇಕಾಗುತ್ತದೆ. ಸೂರ್ಯಕಾಂತಿ 840 ರೂಪಾಯಿ ಹತ್ತಿ ನೀರಾವರಿ 3350, ಎಳ್ಳು 500 ರೂಪಾಯಿ ವಿಮಾ ಮೊತ್ತ ಪಾವತಿಸಬೇಕಾಗುತ್ತದೆ.

ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬೆಳೆ ವಿಮೆ ಮಾಡಿಸಿ ಬೆಳೆಯ ವಿವಿಧ ಹಂತಗಳಲ್ಲಿ ಹಾನಿ ಸಂಭವಿಸಿದಾಗ ವಿಮಾ ಪರಿಹಾರ ಪಡೆಯಬಹುದು.

ಬೆಳೆ ವಿಮೆ ಕಟ್ಟುವಾಗ ಯಾವ ವಿಮಾ ಕಂಪನಿಗೆ ಕಟ್ಟಲಾಗಿದೆ ಎಂಬುದನ್ನು ರೈತರು ಬರೆದಿಟ್ಟುಕೊಳ್ಳಬೇಕು. ಇದರೊಂದಿಗೆ ನಿಮ್ಮ ತಾಲೂಕಿನ ವಿಮಾ ಕಂಪನಿಯ ಸಿಬ್ಬಂದಿಯ ಮೊಬೈಲ್ ನಂಬರ್ ಇಟ್ಟುಕೊಳ್ಳಬೇಕು. ಬೆಳೆ ಹಾನಿಯಾದರೆ ವಿಮಾ ಕಂಪನಿಗೆ 72 ಗಂಟೆಯೊಳಗೆ ತಿಳಿಸಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿ ನಿಮ್ಮ ಜಮೀನಿಗೆ ಬಂದು ಬೆಳೆಹಾನಿಯಾಗಿದ್ದನ್ನು ಪರಿಶೀಲಿಸಿ ಬೆಳೆ ವಿಮೆ ಪರಿಹಾರಕ್ಕಾಗಿ ಮೇಲಧಿಕಾರಿಗಳಿಗೆ ತಿಳಿಸುತ್ತಾರೆ.

ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯಿದೆ ಎಂಬುದನ್ನು ತಿಳಿದುಕೊಳ್ಳಲು ರೈತರು ಈ ಲಿಂಕ್

https://www.samrakshane.karnataka.gov.in/HomePages/frmKnowYourInsCompany.aspx

ಮೇಲೆ ಕ್ಲಿಕ್ ಮಾಡಿದ ನಂತರ ಯಾವ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ಬೆಳೆವಿಮೆಗೆ ನಿಯೋಜಿಸಲಾಗಿದೆ ಎಂಬ ಪಟ್ಟಿ ಕಾಣುತ್ತದೆ. ನಿಮ್ಮ ತಾಲೂಕಿನಲ್ಲಿ ವಿಮಾ ಕಂಪನಿಯ ಸಿಬ್ಬಂದಿಗಳ ಮೊಬೈಲ್ ನಂಬರ್ ತಿಳಿದುಕೊಳ್ಳಲು ಸಹಾಯವಾಣಿ 1800 180 1551 ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಉಚಿತ ಸಹಾಯವಾಣಿ ಕಾರ್ಯನಿರ್ವಹಿಸದಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

ಓದುಗರಲ್ಲಿ ವಿನಂತಿ,

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago