Categories: information

ಎಷ್ಟು ಬೆಳೆ ಹಾನಿಯಾದರೆ ಎಷ್ಟು ವಿಮೆ ಹಣ ಸಿಗಲಿದೆ? ಇಲ್ಲಿದೆ ಮಾಹಿತಿ

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಯಾವ ಹಂತದಲ್ಲಿ ಹಾನಿಯಾದರೆ ಎಷ್ಟು ಹಣ ಜಮೆಯಾಗುತ್ತದೆ ನಿಮಗೆ ಗೊತ್ತೇ? ಇಲ್ಲಿದೆ ಮಾಹಿತಿ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಯಾವ ಹಂತದಲ್ಲಿ ಹಾನಿಯಾದರೆ ಎಷ್ಟು ಹಣ ಜಮೆಯಾಗುತ್ತದೆ ನಿಮಗೆ ಗೊತ್ತೇ? ಇಲ್ಲಿದೆ ಮಾಹಿತಿ.

ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ  ಮಳೆಯ ಕೊರತೆಯಿಂದ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ. 25 ರಷ್ಟು ಬೆಳೆ ವಿಮೆ ಪಾವತಿಸಲಾಗುವುದು.  ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿಬೆಳೆ ನಷ್ಟ ಸಂಭವಿಸಿದರೆ  ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮೆ ನಷ್ಟ ಪರಿಹಾರದಲ್ಲಿ ಶೇ. 25 ರಷ್ಟು  ಹಣವನ್ನು ಪರಿಹಾರವಾಗಿ ನೀಡಲಾಗುವುದು.

Thank you for reading this post, don't forget to subscribe!

how much crop insurance ಬೆಳೆ ಯಾವ ಹಂತದಲ್ಲಿ ಎಷ್ಟು ನಷ್ಟವಾದರೆ ಎಷ್ಟು ಪರಿಹಾರ ನೀಡಲಾಗುವುದು?

ತೊಗರಿ ಬೆಳೆ ಮೊಳಕೆ ಹಂತದಲ್ಲಿ ನಷ್ಟವಾದರೆ ವಿಮಾ ಮೊತ್ತದ ಶೇ. 46 ರಷ್ಟು ಪರಿಹಾರ ನೀಡಲಾಗುವುದು. ಬೆಳವಣಿಗೆ ಹಂತದಲ್ಲಿ ಶೇ. 29, ಮೊಗ್ಗುವ ಹಂತದಲ್ಲಿ ಕೊಯ್ಲು ಹಂತದಲ್ಲಿ ಶೇ. 25 ರಷ್ಟು ಪರಿಹಾರ ನೀಡಲಾಗುವುದು.

ಹೆಸರು ಬೆಳೆಯನ್ನು ಮೊಳಕೆ ಹಂತದಲ್ಲಿ ಶೇ. 60, ಬೆಳೆವಣಿಗೆ ಹಂತದಲ್ಲಿ ಶೇ. 19, ಕೊಯ್ಲು ಹಂತದಲ್ಲಿ ಶೇ. 80 ರಷ್ಟು ಪರಿಹಾರ ನೀಡಲಾಗುವುದು.

ಸೊಯಾಬಿನ್ ಮತ್ತು ಅವರೆ ಮೊಳಕೆ ಹಂತದಲ್ಲಿ ಶೇ. 54, ಬೆಳವಣಿಗೆ ಹಂತದಲ್ಲಿ ಶೇ. 22, ಕೊಯ್ಲು ಹಂತದಲ್ಲಿ ಶೇ. 22 ಪರಿಹಾರ ನೀಡಲಾಗುವುದು.

ಸೂರ್ಯಕಾಂತಿ ಮೊಳಕೆ ಹಂತದಲ್ಲಿ ಶೇ. 68, ಬೆಳವಣಿಗೆ ಹಂತದಲ್ಲಿ ಶೇ. 18, ಕೊಯ್ಲು ಹಂತದಲ್ಲಿ ಶೇ. 13 ರಷ್ಟು ಪರಿಹಾರ ನೀಡಲಾಗುವುದು.

ಹತ್ತಿ ಮೊಳಕೆ ಹಂತದಲ್ಲಿ ಶೇ. 44, ಬೆಳವಣಿಗೆ ಹಂತದಲ್ಲಿ ಶೇ. 25, ಕೊಯ್ಲು ಹಂತದಲ್ಲಿ ಶೇ. 21 ರಷ್ಟು ಪರಿಹಾರ ನೀಡಲಾಗುವುದು. ಅದೇ ರೀತೆ ಎಳ್ಳು ಮೊಳಕೆ ಹಂತದಲ್ಲಿ ಶೇ. 58, ಬೆಳವಣಿಗೆ ಹಂತದಲ್ಲಿ ಶೇ. 18 ಹಾಗೂ ಕೊಯ್ಲು ಹಂತದಲ್ಲಿ ಶೇ. 24 ರಷ್ಚು ಪರಿಹಾರ ನೀಡಲಾಗುವುದು. ಹಾಗಾಗಿ ರೈತರು ಕಡ್ಡಾಯವಾಗಿ ಬೆಳೆ ವಿಮಾ ಸೌಲಭ್ಯವನ್ನು ಪಡೆಯಲು ಕೋರಲಾಗಿದೆ.

ರೈತರು ಪಾವತಿಸಬೇಕಾದ ವಿಮಾ ಮೊತ್ತದ ಮಾಹಿತಿ ಇಲ್ಲಿದೆ

ರೈತರು ಪ್ರತಿ ಹೆಕ್ಟೇರಿಗೆ ತೊಗರಿ  800 ರಿಂದ 850 ರೂಪಾಯಿ ಹೆಸರು 580 ರೂಪಾಯಿ ಉದ್ದು 560 ರೂಪಾಯಿ, ಸಜ್ಜೆ 580 ರೂಪಾಯಿ ಸೋಯಾ ಮತ್ತು ಅವರೆ 580 ರೂಪಾಯಿ ರೈತರ ವಂತಿಗೆ ಪಾವತಿಸಬೇಕಾಗುತ್ತದೆ. ಸೂರ್ಯಕಾಂತಿ 840 ರೂಪಾಯಿ ಹತ್ತಿ ನೀರಾವರಿ 3350, ಎಳ್ಳು 500 ರೂಪಾಯಿ ವಿಮಾ ಮೊತ್ತ ಪಾವತಿಸಬೇಕಾಗುತ್ತದೆ.

ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬೆಳೆ ವಿಮೆ ಮಾಡಿಸಿ ಬೆಳೆಯ ವಿವಿಧ ಹಂತಗಳಲ್ಲಿ ಹಾನಿ ಸಂಭವಿಸಿದಾಗ ವಿಮಾ ಪರಿಹಾರ ಪಡೆಯಬಹುದು.

ಬೆಳೆ ವಿಮೆ ಕಟ್ಟುವಾಗ ಯಾವ ವಿಮಾ ಕಂಪನಿಗೆ ಕಟ್ಟಲಾಗಿದೆ ಎಂಬುದನ್ನು ರೈತರು ಬರೆದಿಟ್ಟುಕೊಳ್ಳಬೇಕು. ಇದರೊಂದಿಗೆ ನಿಮ್ಮ ತಾಲೂಕಿನ ವಿಮಾ ಕಂಪನಿಯ ಸಿಬ್ಬಂದಿಯ ಮೊಬೈಲ್ ನಂಬರ್ ಇಟ್ಟುಕೊಳ್ಳಬೇಕು. ಬೆಳೆ ಹಾನಿಯಾದರೆ ವಿಮಾ ಕಂಪನಿಗೆ 72 ಗಂಟೆಯೊಳಗೆ ತಿಳಿಸಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿ ನಿಮ್ಮ ಜಮೀನಿಗೆ ಬಂದು ಬೆಳೆಹಾನಿಯಾಗಿದ್ದನ್ನು ಪರಿಶೀಲಿಸಿ ಬೆಳೆ ವಿಮೆ ಪರಿಹಾರಕ್ಕಾಗಿ ಮೇಲಧಿಕಾರಿಗಳಿಗೆ ತಿಳಿಸುತ್ತಾರೆ.

ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯಿದೆ ಎಂಬುದನ್ನು ತಿಳಿದುಕೊಳ್ಳಲು ರೈತರು ಈ ಲಿಂಕ್

https://www.samrakshane.karnataka.gov.in/HomePages/frmKnowYourInsCompany.aspx

ಮೇಲೆ ಕ್ಲಿಕ್ ಮಾಡಿದ ನಂತರ ಯಾವ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ಬೆಳೆವಿಮೆಗೆ ನಿಯೋಜಿಸಲಾಗಿದೆ ಎಂಬ ಪಟ್ಟಿ ಕಾಣುತ್ತದೆ. ನಿಮ್ಮ ತಾಲೂಕಿನಲ್ಲಿ ವಿಮಾ ಕಂಪನಿಯ ಸಿಬ್ಬಂದಿಗಳ ಮೊಬೈಲ್ ನಂಬರ್ ತಿಳಿದುಕೊಳ್ಳಲು ಸಹಾಯವಾಣಿ 1800 180 1551 ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಉಚಿತ ಸಹಾಯವಾಣಿ ಕಾರ್ಯನಿರ್ವಹಿಸದಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

ಓದುಗರಲ್ಲಿ ವಿನಂತಿ,

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago