ಬೆಳೆ ವಿಮೆ: ರಾಜ್ಯದ 17.61 ಲಕ್ಷ ರೈತರಿಗೆ 2021.75 ಕೋಟಿ ರೂ. ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ ಚೆಕ್ ಮಾಡಿ!

ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಇಲ್ಲಿಯವರೆಗೂ ಬೆಳೆ ವಿಮೆ ಮಾಡಿಸಿದ ಅರ್ಹ 17.61 ಲಕ್ಷ ರೈತರಿಗೆ 2021.71 ಕೋಟಿ ರೂಪಾಯಿ ಹಣವನ್ನು ನೇರವಾಗಿ ಡಿಬಿಟಿ ಮೂಲಕ ಅವರ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಕಳೆದ ಸಾಲಿನ ಅಂದಾಜು ಮಳೆಗಿಂತ ಹೆಚ್ಚು ಸುರಿದ ಕಾರಣ ರಾಜ್ಯದಲ್ಲಿ ಲಕ್ಷಾಂತರ ರೈತರ ಬೆಳೆಗಳು ಹಾನಿಗೊಳಗಾಗಿವೆ.

Thank you for reading this post, don't forget to subscribe!

ಇಂತಹ ಬೆಳೆ ಹಾನಿಗೊಳಗಾದ ರೈತರಿಗೆ ಇದೀಗ ಈ ಸಾಲಿನ ಬೆಳೆ ವಿಮೆ (bele vime paymemt status) ಹಣ ಜಮಾ ಮಾಡಲಾಗಿದ್ದು, ಅರ್ಹ ರೈತರ ಖಾತೆಗೆ ಈಗಾಗಲೇ ನೇರವಾಗಿ ಬೆಳೆ ಹಾನಿಯಾದ ರೈತರ ಪ್ರತಿ ಎಕರೆಗೆ ₹37,300 ರೂಪಾಯಿಯಂತೆ ಹಣ ಜಮಾ ಮಾಡಲಾಗಿದೆ.

19 ನವೆಂಬರ್ 2024 ರಂದು ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಇಲ್ಲಿಯವರೆಗೂ ಬೆಳೆ ವಿಮೆ ಮಾಡಿಸಿದ ಅರ್ಹ 17.61 ಲಕ್ಷ ರೈತರಿಗೆ 2021.71 ಕೋಟಿ ರೂಪಾಯಿ ಹಣವನ್ನು ನೇರವಾಗಿ ಡಿಬಿಟಿ ಮೂಲಕ ಅವರ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: PM Kisan: ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದು ಹೇಗೆ?

ಈ ಸಾಲಿನ ಬೆಳೆ ವಿಮೆ (bele vime parihara 2024 karnataka) ಮಾಡಿಸಿದ ಅರ್ಹ ರೈತರಿಗೆ ಮಾತ್ರ ನೇರವಾಗಿ ಹಣ ಜಮಾ ಮಾಡಲಾಗಿದೆ. ರಾಜ್ಯ ಸರ್ಕಾರದ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಮುಂಗಾರು ಮಳೆಯಿಂದ ಉಂಟಾದ ಹಾನಿಯನ್ನು ಭರಿಸಲು ರಾಜ್ಯ ಸರಕಾರ ಅರ್ಹ ರೈತರಿಗೆ ಬೆಳೆ ವಿಮೆ ಹಣವನ್ನು ನೇರವಾಗಿ ಆಯಾ ರೈತರ ಖಾತೆಗೆ ಜಮಾ ಮಾಡಿದೆ, ಎಂದು ಕೃಷಿ ಸಚಿವ ಚೆಲುವರಯಸ್ವಾಮಿ ಅವರು ಮಾಧ್ಯಮಗಳಿಗೆ ತಿಳಿಸಿದರು.

ಹಾಗಾದರೆ ಈ ವರ್ಷ ನಿಮ್ಮ ಬೆಳೆ ಮುಂಗಾರಿನಿಂದ ಹಾನಿಯಾಗಿದ್ದರೆ, ನಿಮ್ಮ ಖಾತೆಗೂ ಹಣ ಜಮಾ ಆಗಿರುತ್ತದೆ. ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲೇ ಸುಲಭವಾಗಿ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಬೆಳೆ ವಿಮೆ ಹಣ ಜಮಾ ಆಗಿದೆಯಾ ಎಂದು ಹೀಗೆ ಚೆಕ್ ಮಾಡಿ:-

ಹಂತ -1) ಮೊದಲಿಗೆ ನಿಮಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://samrakshane.karnataka.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ 2023-24 ಹಾಕಿ ಋತುವನ್ನು kharif ಎಂದು ಆಯ್ಕೆ ಮಾಡಿ, Go ಮೇಲೆ ಕ್ಲಿಕ್ ಮಾಡಿ.

Bele Vime payment status

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Check Status ಮೇಲೆ ಕ್ಲಿಕ್ ಮಾಡಿ.

Bele Vime parihara 2024 karnataka

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಬೆಳೆ ವಿಮೆಗೆ ಸಲ್ಲಿಸಿದ ಅರ್ಜಿಯ ಸಂಖ್ಯೆ ಅಥವಾ ಮೊಬೈಲ್ ನಂಬರ್ ಅಥವಾ ಆಧಾರ ಕಾರ್ಡ ನಂಬರ್ ಹಾಕಿ ಕೆಳಗೆ ನೀಡಲಾಗಿರುವ ಕ್ಯಾಪ್ಚ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

Crop insurance status karnataka

ಹಂತ -5) ನಂತರ ನಿಮಗೆ ಈ ಸಾಲಿನ ಬೆಳೆ ವಿಮೆ ಹಣ ಜಮಾ ಆಗಿದ್ದರೆ ,ಯಾವ ಖಾತೆಗೆ ಜಮಾ ಆಗಿದೆ ಮತ್ತು ಎಷ್ಟು ಹಣ ಜಮಾ ಆಗಿದೆ,ಯಾವ ದಿನಾಂಕದಂದು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಒಂದು ವೇಳೆ ನಿಮಗೆ No Data Found ಎಂದು ತೋರಿಸುತ್ತಿದ್ದರೆ ನಿಮ್ಮ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ ಎಂದರ್ಥ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಈ ಸಾಲಿನ ಬೆಳೆ ವಿಮೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂದು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

57 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

57 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

57 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

57 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

57 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

57 years ago