Categories: information

ರೈತರಿಗೆ ಗುಡ್ ನ್ಯೂಸ್ : 250.97 ಕೋಟಿ ಬೆಳೆ ಹಾನಿ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮೆ.!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಬೆಂಗಳೂರು, ಅತಿವೃಷ್ಟಿಯಿಂದ ನೊಂದ ರೈತರಿಗೆ ಯಾವುದೇ ವಿಳಂಬ ಮಾಡದೆ ಸಕಾಲದಲ್ಲಿ ಸ್ಪಂದಿಸುವುದನ್ನು ನಮ್ಮ ಸರ್ಕಾರವು ಆದ್ಯತೆಯಾಗಿ ಪರಿಗಣಿಸಿದೆ. - ಬೆಳೆ ಹಾನಿಯಾದ ರೈತರ ವಿವರವನ್ನು ಈಗಾಗಲೇ PARIHARA (ಪರಿಹಾರ) ತಂತ್ರಾಂಶದಲ್ಲಿ ದಾಖಲಿಸಿದ್ದು, ಒಟ್ಟು 3,26,183 ರೈತರಿಗೆ ರೂ. 250.97 ಕೋಟಿ ಬೆಳೆ ಹಾನಿ ಪರಿಹಾರ ಮುಂದಿನ 3-4 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಬೆಂಗಳೂರು, ಅತಿವೃಷ್ಟಿಯಿಂದ ನೊಂದ ರೈತರಿಗೆ ಯಾವುದೇ ವಿಳಂಬ ಮಾಡದೆ ಸಕಾಲದಲ್ಲಿ ಸ್ಪಂದಿಸುವುದನ್ನು ನಮ್ಮ ಸರ್ಕಾರವು ಆದ್ಯತೆಯಾಗಿ ಪರಿಗಣಿಸಿದೆ. – ಬೆಳೆ ಹಾನಿಯಾದ ರೈತರ ವಿವರವನ್ನು ಈಗಾಗಲೇ PARIHARA (ಪರಿಹಾರ) ತಂತ್ರಾಂಶದಲ್ಲಿ ದಾಖಲಿಸಿದ್ದು, ಒಟ್ಟು 3,26,183 ರೈತರಿಗೆ ರೂ. 250.97 ಕೋಟಿ ಬೆಳೆ ಹಾನಿ ಪರಿಹಾರ ಮುಂದಿನ 3-4 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

Thank you for reading this post, don't forget to subscribe!

ಕಲಬುರಗಿ ಜಿಲ್ಲೆಯಲ್ಲಿ ಆಗಷ್ಟ್ ತಿಂಗಳಿನಲ್ಲಿ 69% ಹಾಗೂ ಸೆಪ್ಟೆಂಬರ್ 63% ಹೆಚ್ಚು ಮಳೆಯಿಂದಾಗಿ NDRF ಮಾರ್ಗಸೂಚಿಯನ್ವಯ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯ ವರದಿಯ ಅನುಸಾರ ಕಲಬುರಗಿ ಜಿಲ್ಲೆಯಲ್ಲಿ 3,24,205 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ವರದಿಯಾಗಿರುತ್ತದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿರುತ್ತದೆ. ಹತ್ತಿ, ತೊಗರಿ, ಸೂರ್ಯಕಾಂತಿ ಹಾಗೂ ಅರಿಶಿಣ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ಒಟ್ಟು 2,67,560 ರೈತರ 3,35,046.2 ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆಯ ಮಧ್ಯಂತರ ಪರಿಹಾರ (Mid-Season Adversity) ನೀಡಲು ಸರ್ಕಾರ ಆದೇಶಿಸಿದೆ. ಬೆಳೆವಿಮೆ ಪರಿಹಾರ ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

ಹಾನಿಯಾದ ಹತ್ತಿ ಬೆಳೆ ನೋಂದಣಿ ಮಾಡಿಸಿದ ರೈತರ- ಸಂಖ್ಯೆ10,025. ಪ್ರದೇಶ-11,727.5 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ- ರೂ 9.95 ಕೋಟಿ. ತೊಗರಿ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ- ಸಂಖ್ಯೆ 2,56,845. ಪ್ರದೇಶ– 3,22,734 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ- ರೂ 232.81ಕೋಟಿ ಸೂರ್ಯಕಾಂತಿ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ- 382. ಪ್ರದೇಶ- 392.088 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ ರೂ 0.24 ಕೋಟಿಯಾಗಿದೆ.

ಅರಿಶಿಣ ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ- 308. ಪ್ರದೇಶ- 192.615 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ ರೂ 0.41ಕೋಟಿ. ಒಟ್ಟು ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆ -2,67,560. ಪ್ರದೇಶ- 3,35,046.2 ಹೆಕ್ಟೇರ್ ಹಾಗೂ ಒಟ್ಟು ಪರಿಹಾರ ರೂ 243.41ಕೋಟಿ. ಉದ್ದು, ಹೆಸರು, ಸೋಯಾ ಅವರೆ ಹಾಗೂ ಇನ್ನಿತರ ಬೆಳಗಳಿಗೆ ಬೆಳೆ ಹಾನಿ ಕುರಿತು ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ (Localized calamity) ದೂರು ನೀಡಿದ ಒಟ್ಟು 22,385 ರೈತರಿಗೆ ರೂ. 8.79 ಕೊಟಿ ಬೆಳೆವಿಮೆ ಪರಿಹಾರ ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ರೈತ ದೇಶದ ಬೆನ್ನೆಲುಬು ಎನ್ನುತ್ತಾರೆ, ಆ ಬೆನ್ನೆಲುಬನ್ನು ಗಟ್ಟಿಯಾಗಿಸಿ, ಉಳಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದ್ದಾರೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago