Categories: information

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.

Spread the love

ಬೆಂಗಳೂರು,ಮೇ 28- ಒಂದು ರಾಜ್ಯದ ಮುಖ್ಯಮಂತ್ರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ವೇಳೆ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಖುದ್ದು ಹಾಜರಿರಬೇಕೇ? ಇಲ್ಲವೇ ಅವರ ಗೈರು ಹಾಜರಿಯಲ್ಲಿ ರಾಜೀನಾಮೆ ನೀಡಬಹುದೇ?.

Thank you for reading this post, don't forget to subscribe!

ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿ ರಾಜೀನಾಮೆ ನೀಡಲು ರಾಜ್ಯಪಾಲರು ಭೌತಿಕವಾಗಿ ಎದುರಲ್ಲೇ ಇರಬೇಕು ಎಂಬ ಯಾವುದೇ ಕಡ್ಡಾಯ ನಿಯಮ ಇಲ್ಲ. ಮುಖ್ಯಮಂತ್ರಿ ತಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರನ್ನು ಉದ್ದೇಶಿಸಿ ಬರೆದು ಅಧಿಕೃತ ಸರ್ಕಾರಿ ಚಾನೆಲ್‌‍ಗಳ ಮೂಲಕ ಕಳುಹಿಸಬಹುದು. ಸಾಮಾನ್ಯವಾಗಿ ಮುಖ್ಯಮಂತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ನೇರವಾಗಿ ಭೇಟಿಯಾಗಿ ರಾಜೀನಾಮೆ ಪತ್ರ ಹಸ್ತಾಂತರಿಸುವುದು ರಾಜಕೀಯ ಸಂಪ್ರದಾಯವಾಗಿದೆ.

ಆದರೆ, ಅದು ಕಾನೂನುಬದ್ಧ ಕಡ್ಡಾಯವಲ್ಲ. ಭಾರತೀಯ ಸಂವಿಧಾನದ ವಿಧಿ 164(1) ಪ್ರಕಾರ, ರಾಜ್ಯಪಾಲರು ಮುಖ್ಯಮಂತ್ರಿಯನ್ನು ನೇಮಕ ಮಾಡುತ್ತಾರೆ ಹಾಗೂ ಸಚಿವ ಸಂಪುಟ ರಾಜ್ಯಪಾಲರ ಇಚ್ಛೆಯ ಮೇರೆಗೆ ಅಧಿಕಾರದಲ್ಲಿ ಮುಂದುವರಿಯುತ್ತದೆ. ಹೀಗಾಗಿ ಮುಖ್ಯಮಂತ್ರಿ ಕಳುಹಿಸುವ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಧಿಕೃತವಾಗಿ ಅಂಗೀಕರಿಸಿದ ಬಳಿಕವೇ ರಾಜೀನಾಮೆ ಜಾರಿಗೆ ಬಂದಂತೆ ಪರಿಗಣಿಸಲಾಗುತ್ತದೆ.

ಸಾಂವಿಧಾನಿಕ ನಿಯಮಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರವನ್ನು ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದರೆ, ಅವರು ರಾಜ್ಯಪಾಲರು ಇಂದೋರ್‌ ಪ್ರವಾಸ ಮುಗಿಸಿ ವಾಪಸ್‌‍ ಬಂದ ತಕ್ಷಣ ಅದನ್ನು ಅವರ ವಿವೇಚನೆಗೆ ಕಳುಹಿಸಿಕೊಡಲಿದ್ದಾರೆ.

ಆದರೆ, ಕೇವಲ ಪತ್ರ ತಲುಪಿದ ತಕ್ಷಣ ರಾಜೀನಾಮೆ ಅಂಗೀಕಾರವಾಗುವುದಿಲ್ಲ. ರಾಜೀನಾಮೆ ಅಂಗೀಕರಿಸುವ ಮುನ್ನ ರಾಜ್ಯಪಾಲರು ಮುಖ್ಯಮಂತ್ರಿಗಳನ್ನು ಖುದ್ದಾಗಿ ಲೋಕಭವನಕ್ಕೆ ಕರೆಸಿ, ಮುಖಾಮುಖಿ ಮಾತುಕತೆ ನಡೆಸಿದ ಬಳಿಕವಷ್ಟೇ ಅದಕ್ಕೆ ಅಧಿಕೃತ ಮುದ್ರೆ ಒತ್ತಲಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಮತ್ತೊಮೆ ಲೋಕಭವನಕ್ಕೆ ಭೇಟಿ ನೀಡಬೇಕಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ ಸ್ಥಾನಕ್ಕೆ ಯಾವುದೇ ಸಂದರ್ಭದಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕಾದರೆ ನೇರವಾಗಿ ಲೋಕಭವನಕ್ಕೆ ತೆರಳಿ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಬೇಕು. ಅದನ್ನು ಪರಿಶೀಲಿಸಿ ಸ್ಪಷ್ಟನೆ ಕೇಳಿದ ನಂತರ ಅಂಗೀಕರಿಸಬೇಕು ಎಂದು ನಿಯಮ ಹೇಳುತ್ತದೆ. ತೀರ ಕ್ಲಿಷ್ಟಕರ ಸಂದರ್ಭದಲ್ಲಿ ಮಾತ್ರ ಗೈರು ಹಾಜರಾದಾಗ ರಾಜ್ಯಪಾಲರ ವಿಶೇಷ ಕರ್ತವ್ಯ ಅಧಿಕಾರಿ ಇಲ್ಲವೇ ಅವರ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳಿಗೆ ರಾಜೀನಾಮೆ ಪತ್ರವನ್ನು ಮಾತ್ರ ನೀಡಬೇಕು. ನಂತರ ರಾಜ್ಯಪಾಲರು ವಾಪಸ್‌‍ ರಾಜ್ಯಕ್ಕೆ ಬಂದ ವೇಳೆ ಅದನ್ನು ಪರಿಶೀಲಿಸಿ ಅಂಗೀಕರಿಸಬಹುದು. ಇಲ್ಲವೇ ಮತ್ತೊಮೆ ಸ್ಪಷ್ಟನೆಗಾಗಿ ಲೋಕಭವನಕ್ಕೆ ಬರುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ಕೊಡಬಹುದು.

ಇಲ್ಲಿ ಈ ಪ್ರಶ್ನೆ ಉದ್ಭವಿಸಲು ಕಾರಣವೇನೆಂದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲು ಮುಂದಾಗಿರುವಾಗಲೇ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಅನ್ಯ ಕಾರಣಗಳಿಂದ ಮಧ್ಯಪ್ರದೇಶದ ರಾಜಧಾನಿ ಇಂದೋರ್‌ಗೆ ತೆರಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯಪಾಲರ ಪತ್ನಿ ಆರೋಗ್ಯ ಸ್ಥಿತಿ ಗಂಭೀರದಲ್ಲಿರುವ ಕಾರಣ ನಿನ್ನೆ ರಾತ್ರಿ ಮುಂಬೈನಿಂದ ಇಂದೋರ್‌ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ ಬೆಂಗಳೂರಿಗೆ ಕಾರ್ಯಕ್ರಮ ನಿಮಿತ್ತ ಉಪರಾಷ್ಟ್ರಪತಿ ರಾಧಾಕೃಷ್ಣನ್‌ ಆಗಮಿಸಲಿದ್ದು, ಶಿಷ್ಟಾಚಾರದ ಪ್ರಕಾರ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ರಾಜ್ಯಪಾಲರು ಬರಬೇಕು. ಮೂಲಗಳ ಪ್ರಕಾರ, ರಾಜ್ಯಪಾಲರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುವ ಸಂಭವವಿದೆ. ಹಾಗಾದರೆ ಸಿದ್ದರಾಮಯ್ಯನವರು ಇಂದು ರಾಜ್ಯಪಾಲರ ವಿಶೇಷ ಕರ್ತವ್ಯ ಅಧಿಕಾರಿಗೆ ರಾಜಿನಾಮೆ ಪತ್ರ ಕೊಡಬಹುದೇ ಎಂಬ ಮೂಲ ಪ್ರಶ್ನೆ ಎದುರಾಗಿದೆ.

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode

Share

Recent Posts

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago

Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?

ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್,…

56 years ago

ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!

CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.…

56 years ago

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ, ಯೆಲ್ಲೂ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ,…

56 years ago

BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವಸರ್ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ.!

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ…

56 years ago