43 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಕುರಿತಂತೆ ದೊಡ್ಡ ಅಪ್ಡೇಟ್ ಬಂದಿದೆ! ನಿಮ್ಮ ಹಣ ಜಮೆ ಆಗಿದೆಯೇ ಇಲ್ಲವೇ ಎಂಬ ಸ್ಟೇಟಸ್ನ್ನು ಇಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಸರ್ಕಾರದಿಂದ ಬಿಡುಗಡೆಯಾದ ಹೊಸ ಮಾಹಿತಿಯನ್ನು ತಿಳಿದುಕೊಳ್ಳಿ ಮತ್ತು ತಕ್ಷಣ ನಿಮ್ಮ ವಿವರಗಳನ್ನು ಪರಿಶೀಲಿಸಿ.
ರಾಜ್ಯದಲ್ಲಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಇತಿಹಾಸ ನೀಡದಂತಹ ಪರಿಹಾರವನ್ನು ರೈತರಿಗೆ ನೀಡಲಾಗಿದೆ. ಸುಮಾರು 43 ಲಕ್ಷ ರೈತರಿಗೆ ವಿಮಾ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಅಲ್ಲಮಪ್ರಭು ಪಾಟೀಲ್ ರವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತ ಸುರಕ್ಷತಾ ಪ್ರಧಾನ ಫಸಲ್ ಭೀಮಾ ಯೋಜನೆಡಿ 28 ಲಕ್ಷ ರೈತರನ್ನು ನೋಂದಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಬೆಳೆ ನಷ್ಟವಾದ 43 ಲಕ್ಷ ರೈತರಿಗೆ ಸುಮಾರು 5 ಸಾವಿರ ಕೋಟಿ ರೂ. ಇತಿಹಾಸದಲ್ಲೇ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟಿರಲಿಲ್ಲ.
ಅತಿವೃಷ್ಠಿ ಪರಿಹಾರ ಬೇರೆ, ಬೆಳೆ ಹಾನಿ ಪರಿಹಾರ ಬೇರೆ ಎಂದು ಅವರು ಹೇಳಿದರು, ಫಸಲ್ ಭೀಮಾ ಯೋಜನೆ ರೈತರು ವಿಮಾ ಹಣದ ಶೇ. 2 ರಷ್ಟನ್ನು ಮಾತ್ರ ಕಟ್ಟಬೇಕು. ಉಳಿದ ಶೇ. 98ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ಹೇಳಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಯೋಜನೆ 2022-23ನೇ ಸಾಲಿನಿಂದ 2025-26ನೇ ಸಾಲಿನ ಸಾಲಿನ ಮುಂಗಾರು ಹಂಗಾಮಿನವರೆಗೂ ಒಟ್ಟು 23,782 ರೈತರು 31,338.13 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಯಡಿ ನೋಂದಾಯಿಸಲಾಗಿದೆ.
ಇದುವರೆಗೂ ಈ ಕ್ಷೇತ್ರ 13,728 ರೈತರಿಗೆ ಬೆಳೆ ವಿಮೆ ಪರಿಹಾರ ನೀಡಲಾಗಿದೆ. 945 ಪ್ರಕರಣಗಳು ಬಾಕಿಯಿದ್ದು, ಅವರಿಗೆ ಅಷ್ಟು ಬೇಗ ವಿಲೇವಾರಿ ಮಾಡಲಾಗುವುದಿಲ್ಲ. ವಿಮೆಯಡಿ ರೈತರಿಗೆ ಯಾವುದೇ ಬಾಕಿ ಇಲ್ಲ ಎಂದು ಅವರು ಹೇಳಿದರು.
2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು Bele vime status ಅನ್ನು ಮೊಬೈಲ್ ನಲ್ಲಿ ಪರಿಶೀಲಿಸಿದ್ದಾರೆ.
ಸ್ಟೇಟಸ್ ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು 2025-26 ರ ಕೆಳಗಡೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಫಾರ್ಮರ್ಸ್ ಕಾಲಮ್ ಕೆಳಗಡೆ ಸ್ಥಿತಿಯನ್ನು ಪರಿಶೀಲಿಸಿ ಮೇಲೆ ಕ್ಲಿಕ್ ಮಾಡಬೇಕು.
ರೈತರು ಇಲ್ಲಿ ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಿ. ನಂತರ ಬೆಳೆ ವಿಮೆ ಮಾಡಿಸುವಾಗ ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ಮೇಲೆ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ಕ್ಯಾಪ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ ರಿಫ್ರೆಶ್ ಬಟನ್ ಮೇಲೆ ಕ್ಲಿಕ್ ಮಾಡಿ. ಆಗ ಹೊಸ ಕ್ಯಾಪ್ಚ್ಯಾ ಕೋಡ್ ಅಪ್ಡೇಟ್ ಆಗುತ್ತದೆ. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.
ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿ ನಿಮ್ಮ ಮೊಬೈಲ್ ನಂಬರ್ ಕೊನೆಯ ಮೂರು ಅಂಕಿ ಅದರ ಮುಂದೆ ನಿಮ್ಮಹೆಸರು ಕಾಣಿಸುತ್ತದೆ. ಸ್ಟೇಟಸ್ ಬಾಕ್ಸ್ ನಲ್ಲಿ ವಿಮಾ ಕಂಪನಿಯಿಂದ ನಿಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋಎಂಬುದು ಕಾಣುತ್ತದೆ. ಅದರ ಮುಂದುಗಡೆ ಅರ್ಜಿ ಎಲ್ಲಿ ಸಲ್ಲಿಸಲಾಗಿದೆ ಗ್ರಾಮ ಒನ್ ಕೇಂದ್ರದಲ್ಲಿಯೇ ಅಥವಾ ಸಿಎಸ್ಸಿ ಕೇಂದ್ರದಲ್ಲಿ ಸಲ್ಲಿಸಿದ್ದೀರೋ ಎಂಬುದು ಗೋಚರಿಸುತ್ತದೆ.
ಸೆಲೆಕ್ಟ್ಮೇಲ್ ಕ್ಲಿಕ್ ಮಾಡಿದ ಮೇಲೆ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಯಾವ ದಿನಾಂಕದಂದು ನಿಮ್ಮ ಅರ್ಜಿಯನ್ನು ಸಲ್ಲಿಸಲಾಗಿದೆ. ಬೆಳೆ ವಿಮೆ ಹಣ ಬಿದ್ದಿದೆಯೋ ಇಲ್ಲವೋ ಎಂಬುದು ಗೋಚರಿಸುತ್ತದೆ. ಬೆಳೆ ವಿಮೆ ಹಣ ಪಾವತಿಸಿದರೆ ಯಾವ ದಿನಾಂಕದಂದು ಸಕ್ಸೆಸಫುಲ್ ಆಗಿದೆ ಎಂಬುದು ಗೋಚರಿಸುತ್ತದೆ. ಬ್ಯಾಂಕಿನಿಂದ ಅಪ್ರೂವ್ ಆಗಿ ಬೆಳೆ ವಿಮೆ ಮಾಡಿದ ಕಂಪನಿಗೆ ಅರ್ಜಿ ಸಲ್ಲಿಸಿದ್ದರೆ ಯಾವ ದಿನಾಂಕದಂದು ಅರ್ಜಿಯನ್ನು ಕಳಿಸಲಾಗಿದೆ ಎಂಬುದು ಗೋಚರಿಸುತ್ತದೆ. ಈ ಆಧಾರದ ಮೇಲೆ ಅರ್ಜಿ ಸ್ವೀಕೃತವಾಗಿ ಯಾವ ಹಂತದಲ್ಲಿದೆ ಎಂದರೆ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…