ಬೆಳೆ ಹಾನಿ ಪರಿಹಾರ ಹಣ ಜಮಾ ಆಗಲು ನಿಮ್ಮ ಬೆಳೆ ಕಡ್ಡಾಯವಾಗಿ ಸಮೀಕ್ಷೆ (crop survey) ಆಗಿರಬೇಕು. ಯಾವ ರೈತರ ಬೆಳೆ ಸಮೀಕ್ಷೆ ಆಗಿರುವುದಿಲ್ಲವೋ ಅಂತಹ ರೈತರಿಗೆ ಬೆಳೆ ಪರಿಹಾರ ಹಣ ಜಮಾ ಆಗುವುದಿಲ್ಲ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರಕಾರವು ಬೆಳೆ ಹಾನಿ ಆಗುವ ರೈತರಿಗೆ ಪರಿಹಾರ ರೂಪದಲ್ಲಿ ಹಣವನ್ನು ನೀಡುತ್ತದೆ.
Thank you for reading this post, don't forget to subscribe!ಬೆಳೆ ಹಾನಿ ಪರಿಹಾರ ಹಣ ಜಮಾ ಆಗಲು ನಿಮ್ಮ ಬೆಳೆ ಕಡ್ಡಾಯವಾಗಿ ಸಮೀಕ್ಷೆ (crop survey) ಆಗಿರಬೇಕು. ಯಾವ ರೈತರ ಬೆಳೆ ಸಮೀಕ್ಷೆ ಆಗಿರುವುದಿಲ್ಲವೋ ಅಂತಹ ರೈತರಿಗೆ ಬೆಳೆ ಪರಿಹಾರ ಹಣ ಜಮಾ ಆಗುವುದಿಲ್ಲ.
ಹಾಗಾದರೆ ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಸುಲಭವಾಗಿ ಮೊಬೈಲ್ ನಲ್ಲಿ ತಿಳಿದುಕೊಳ್ಳುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. Crop Survey App
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರಕಾರದ ಅಧಿಕೃತ ಬೆಳೆ ಸಮೀಕ್ಷೆ ಆ್ಯಪ್ ಆದ ಬೆಳೆ ದರ್ಶಕ್ ಅನ್ನು ಇನ್ಸ್ಟಾಲ್ ಮಾಡಿಕೊಳ್ಳಿ
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ರೈತ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಎಲ್ಲಾ ಆಯ್ಕೆಗಳಿಗೆ while using the app ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕೆಳಗೆ ತೋರಿಸಿದಂತೆ ವರ್ಷ, ಋತು,ಜಿಲ್ಲೆ, ತಾಲ್ಲೂಕು ,ಹೋಬಳಿ ಹಾಗೂ ಗ್ರಾಮದ ಹೆಸರನ್ನು ಹಾಕಿ ಸರ್ವೆ ನಂಬರ್ ಹಾಕಿ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಿ. ನಂತರ ಹಿಸ್ಸಾನಂಬರ್ ಹಾಕಿ ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿರಿ. ಆಗ ನಿಮಗೆ ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವಿವರಗಳು ಕಾಣಿಸುತ್ತವೆ.
ಹಂತ -5) ನಂತರ ಗ್ರಾಮದ ಬೆಳೆ ಸಮೀಕ್ಷೆಗಾರರ ವಿವರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಯನ್ನು ಯಾರು ಸಮೀಕ್ಷೆ ಮಾಡಿದ್ದಾರೆ ಮತ್ತು ಅವರ ಮೊಬೈಲ್ ನಂಬರ್ ಕೂಡ ನಿಮಗೆ ಸಿಗುತ್ತದೆ
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ರೈತರೇ ಒಂದು ವೇಳೆ ನಿಮ್ಮ ಬೆಳೆ ಸಮೀಕ್ಷೆ ಆಗದಿದ್ದರೆ ಬೆಳೆ ಸಮೀಕ್ಷೆಗಾರರಿಗೆ ಕರೆ ಮಾಡಿ ಬೆಳೆ ಸಮೀಕ್ಷೆ ಮಾಡಿಸಿ. ಇಲ್ಲದಿದ್ದರೆ ನಿಮಗೆ ಬೆಳೆ ಹಾನಿ ಪರಿಹಾರ ಹಣ ಜಮಾ ಆಗುವುದಿಲ್ಲ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…