ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಹೊಲದಲ್ಲಿ ಕೃಷಿ ಪಂಪ್ ಸೆಟ್ (krushi pump set) ಹೊಂದಿದ್ದರೆ ನಿಮಗೆ ಇಲ್ಲೊಂದು ಮಹತ್ವದ ಮಾಹಿತಿ ಇದೆ. ಅದೇನೆಂದರೆ ನಿಮ್ಮ ಕೃಷಿ ಪಂಪ್ ಸೆಟ್ ಗೆ ನಿಮ್ಮ ಆಧಾರ ಲಿಂಕ್ ಮಾಡುವ ಕುರಿತು.
Thank you for reading this post, don't forget to subscribe!ಹೌದು ರೈತ ಮಿತ್ರರೇ, ರಾಜ್ಯ ಸರ್ಕಾರವು ಕೃಷಿ ಉತ್ಪಾದನೆ ಹೆಚ್ಚಿಸಲು ಬಡ ಮತ್ತು ಹಿಂದುಳಿದ ರೈತರಿಗೆ ಸಬ್ಸಿಡಿ ರೂಪದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ.
ಈ ರೀತಿಯಾಗಿ ಸಬ್ಸಿಡಿ ರೂಪದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಉಚಿತವಾಗಿ ನೀಡಲಾಗುತ್ತಿರುವ ವಿದ್ಯುತ್ ಅರ್ಹ ಫಲಾನುಭವಿ ರೈತರಿಗೆ ತಲುಪುತ್ತಿದೆಯೋ ಇಲ್ಲವೋ ಅಥವಾ ಅಕ್ರಮವಾಗಿ ಅನರ್ಹರು ಬಳಸುತ್ತಿದ್ದಾರೋ ಎಂಬುದನ್ನು ಪತ್ತೆ ಹಚ್ಚಲು ಮತ್ತು ಎಷ್ಟು ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಲಾಭ ಪಡೆಯುತ್ತಿದ್ದಾರೆ ಎಂಬುದನ್ನು ತಿಳಿಯಲು ರಾಜ್ಯ ಸರ್ಕಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ.
ಇನ್ನು ಈ ಕುರಿತು ರೈತರಲ್ಲಿ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದು, ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಾಡಿದರೆ ವಿದ್ಯುತ್ ಬಿಲ್ ಕಟ್ಟಬೇಕಾಗುತ್ತದೆ,ಮತ್ತು ಹೆಚ್ಚಿನ ವಿದ್ಯುತ್ ದರ ಭರಿಸಬೇಕಾಗುತ್ತದೆ ಅಥವಾ ಸಬ್ಸಿಡಿ ಕಡಿತಗೊಳಿಸಲಾಗುತ್ತದೆ ಎಂಬ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ.
ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
ಈ ಮಾಹಿತಿ ಆಧರಿಸಿ ಮುಂಬರುವ ರಾಜ್ಯ ಸರಕಾರದ ಜನಕಲ್ಯಾಣ ಯೋಜನೆಗಳಿಗೆ ಸಹಕಾರಿಯಾಗುತ್ತದೆ. ಅಲ್ಲದೆ ಇಂತಹ ರೈತಪರ ಯೋಜನೆಗಳಿಂದ ಎಷ್ಟು ಜನರು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಯುತ್ತದೆ ಎಂದು ಅವರು ಹೇಳಿದರು.
ಈಗಾಗಲೇ ರಾಜ್ಯದಲ್ಲಿರುವ 34 ಕೃಷಿ ಪಂಪ್ ಸೆಟ್ ಹೊಂದಿರುವ ರೈತರಲ್ಲಿ 32 ಲಕ್ಷ ಕೃಷಿ ಪಂಪ್ ಸೆಟ್ ಗಳಿಗೆ ಈಗಾಗಲೇ ಆಯಾ ರೈತರ ಆಧಾರ್ ಲಿಂಕ್ ಆಗಿದ್ದು, ಇನ್ನುಳಿದ ರೈತರಿಗೆ ತಮ್ಮ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ ಲಿಂಕ್ ಮಾಡುವಂತೆ ಸೂಚನೆ ನೀಡಿದರು.
ಇನ್ನು ಆಯಾ ಭಾಗದ ಎಸ್ಕಾಂ ಕಂಪನಿಗಳು ನಿಯೋಜಿಸಿರುವ ಲೈನ್ ಮ್ಯಾನ್ ಗಳು ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುತ್ತಾರೆ. ಹಾಗಾಗಿ ರೈತರು ತಮ್ಮ ಭಾಗದ ಲೈನ್ ಮನ್ ಕರೆಸಿ ತಮ್ಮ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…