ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಹೊಲದಲ್ಲಿ ಕೃಷಿ ಪಂಪ್ ಸೆಟ್ (krushi pump set) ಹೊಂದಿದ್ದರೆ ನಿಮಗೆ ಇಲ್ಲೊಂದು ಮಹತ್ವದ ಮಾಹಿತಿ ಇದೆ. ಅದೇನೆಂದರೆ ನಿಮ್ಮ ಕೃಷಿ ಪಂಪ್ ಸೆಟ್ ಗೆ ನಿಮ್ಮ ಆಧಾರ ಲಿಂಕ್ ಮಾಡುವ ಕುರಿತು.
Thank you for reading this post, don't forget to subscribe!ಹೌದು ರೈತ ಮಿತ್ರರೇ, ರಾಜ್ಯ ಸರ್ಕಾರವು ಕೃಷಿ ಉತ್ಪಾದನೆ ಹೆಚ್ಚಿಸಲು ಬಡ ಮತ್ತು ಹಿಂದುಳಿದ ರೈತರಿಗೆ ಸಬ್ಸಿಡಿ ರೂಪದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ.
ಈ ರೀತಿಯಾಗಿ ಸಬ್ಸಿಡಿ ರೂಪದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಉಚಿತವಾಗಿ ನೀಡಲಾಗುತ್ತಿರುವ ವಿದ್ಯುತ್ ಅರ್ಹ ಫಲಾನುಭವಿ ರೈತರಿಗೆ ತಲುಪುತ್ತಿದೆಯೋ ಇಲ್ಲವೋ ಅಥವಾ ಅಕ್ರಮವಾಗಿ ಅನರ್ಹರು ಬಳಸುತ್ತಿದ್ದಾರೋ ಎಂಬುದನ್ನು ಪತ್ತೆ ಹಚ್ಚಲು ಮತ್ತು ಎಷ್ಟು ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಲಾಭ ಪಡೆಯುತ್ತಿದ್ದಾರೆ ಎಂಬುದನ್ನು ತಿಳಿಯಲು ರಾಜ್ಯ ಸರ್ಕಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ.
ಇನ್ನು ಈ ಕುರಿತು ರೈತರಲ್ಲಿ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದು, ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಾಡಿದರೆ ವಿದ್ಯುತ್ ಬಿಲ್ ಕಟ್ಟಬೇಕಾಗುತ್ತದೆ,ಮತ್ತು ಹೆಚ್ಚಿನ ವಿದ್ಯುತ್ ದರ ಭರಿಸಬೇಕಾಗುತ್ತದೆ ಅಥವಾ ಸಬ್ಸಿಡಿ ಕಡಿತಗೊಳಿಸಲಾಗುತ್ತದೆ ಎಂಬ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ.
ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
ಈ ಮಾಹಿತಿ ಆಧರಿಸಿ ಮುಂಬರುವ ರಾಜ್ಯ ಸರಕಾರದ ಜನಕಲ್ಯಾಣ ಯೋಜನೆಗಳಿಗೆ ಸಹಕಾರಿಯಾಗುತ್ತದೆ. ಅಲ್ಲದೆ ಇಂತಹ ರೈತಪರ ಯೋಜನೆಗಳಿಂದ ಎಷ್ಟು ಜನರು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಯುತ್ತದೆ ಎಂದು ಅವರು ಹೇಳಿದರು.
ಈಗಾಗಲೇ ರಾಜ್ಯದಲ್ಲಿರುವ 34 ಕೃಷಿ ಪಂಪ್ ಸೆಟ್ ಹೊಂದಿರುವ ರೈತರಲ್ಲಿ 32 ಲಕ್ಷ ಕೃಷಿ ಪಂಪ್ ಸೆಟ್ ಗಳಿಗೆ ಈಗಾಗಲೇ ಆಯಾ ರೈತರ ಆಧಾರ್ ಲಿಂಕ್ ಆಗಿದ್ದು, ಇನ್ನುಳಿದ ರೈತರಿಗೆ ತಮ್ಮ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ ಲಿಂಕ್ ಮಾಡುವಂತೆ ಸೂಚನೆ ನೀಡಿದರು.
ಇನ್ನು ಆಯಾ ಭಾಗದ ಎಸ್ಕಾಂ ಕಂಪನಿಗಳು ನಿಯೋಜಿಸಿರುವ ಲೈನ್ ಮ್ಯಾನ್ ಗಳು ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುತ್ತಾರೆ. ಹಾಗಾಗಿ ರೈತರು ತಮ್ಮ ಭಾಗದ ಲೈನ್ ಮನ್ ಕರೆಸಿ ತಮ್ಮ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…