ರಾಜ್ಯ ಸರ್ಕಾರದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಮಾಸಿಕ ₹2,000 ಪಿಂಚಣಿ ಸೌಲಭ್ಯ ನೀಡಲಾಗುತ್ತಿದೆ. ಅರ್ಹ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಸರಳವಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದು.
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಂಕಷ್ಟದಲ್ಲಿರುವ ಮೃತ ರೈತರ ಪತ್ನಿಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರದಿಂದ ಮಾಸಿಕ ₹೨,೦೦೦ ಗಳ ವಿಶೇಷ ವಿಧವಾ ವೇತನ (ಪಿಂಚಣಿ) ಯೋಜನೆಯನ್ನು ಜಾರಿಗೊಳಿಸಲಾಗಿದೆ
Thank you for reading this post, don't forget to subscribe!ಅರ್ಹತೆ ಮತ್ತು ಮಾನದಂಡಗಳು: ಈ ವಿಶೇಷ ಪಿಂಚಣಿ ಸೌಲಭ್ಯವನ್ನು ಪಡೆಯಲು, ಮೃತ ರೈತರ ಕುಟುಂಬದವರು ಈಗಾಗಲೇ ಕೃಷಿ ಇಲಾಖೆಯ ನಿಯಮಾವಳಿಗಳ ಅಡಿಯಲ್ಲಿ ರೈತರ ಆತ್ಮಹತ್ಯೆ ಪ್ರಕರಣವೆಂದು ಗುರುತಿಸಲ್ಪಟ್ಟು, ಸರ್ಕಾರದ ಅಧಿಕೃತ ಪರಿಹಾರ ಧನವನ್ನು ಪಡೆದಿರಬೇಕು. ಅಂತಹ ಮೃತ ರೈತರ ಪತ್ನಿಯರು ಮಾತ್ರ ಈ ಮಾಸಿಕ ಪಿಂಚಣಿಗೆ ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಕೆ ಹೇಗೆ? ಅರ್ಹ ಫಲಾನುಭವಿಗಳು ತಮ್ಮ ವಾಸಸ್ಥಳದ ವ್ಯಾಪ್ತಿಯಲ್ಲಿ ಬರುವ ‘ಅಟಲ್ ಜೀ ಜನಸ್ನೇಹಿ ಕೇಂದ್ರ’ (ನಾಡಕಚೇರಿ) ಗಳ ಮೂಲಕ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿಸಲಾಗಿದೆ.
ಬೇಕಾಗುವ ಮುಖ್ಯ ದಾಖಲೆಗಳು:
* ಕೃಷಿ ಇಲಾಖೆಯಿಂದ ಆತ್ಮಹತ್ಯೆ ಪರಿಹಾರ ಧನ ಪಡೆದಿರುವ ಅಧಿಕೃತ ಆದೇಶದ ಪ್ರತಿ.
* ಅಟಲ್ ಜೀ ಜನಸ್ನೇಹಿ ಕೇಂದ್ರದ ನಿಗದಿತ ಅರ್ಜಿ ನಮೂನೆ.
* ಅರ್ಜಿದಾರರ ಆಧಾರ್ ಕಾರ್ಡ್.
* ಪಿಂಚಣಿ ಹಣ ಜಮೆಯಾಗಲು ಬ್ಯಾಂಕ್ ಅಥವಾ ಅಂಚೆ ಕಚೇರಿಯ (Post Office) ಖಾತೆ ವಿವರಗಳು.
ಆರ್ಥಿಕ ನಷ್ಟ ಹಾಗೂ ಕುಟುಂಬದ ಯಜಮಾನನನ್ನು ಕಳೆದುಕೊಂಡು ಕಂಗಾಲಾಗಿರುವ ರೈತ ಮಹಿಳೆಯರಿಗೆ ನೆರವಾಗಲು ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಅರ್ಹರು ಇದರ ಸೌಲಭ್ಯವನ್ನು ಪಡೆದುಕೊಳ್ಳಲು ಕೋರಲಾಗಿದೆ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು…
ಸಾರ್ವಜನಿಕರೇ ಗಮನಿಸಿ! ನಾಳೆ ದೇಶಾದ್ಯಂತ ಹಲವು ಮೆಡಿಕಲ್ ಶಾಪ್ಗಳು ಬಂದ್ ಆಗಲಿದ್ದು, ಔಷಧಿ ಖರೀದಿಸಲು ತೆರಳುವ ಮುನ್ನ ನಿಮ್ಮ ಪ್ರದೇಶದ…
ಮಂಗಳವಾರ (ಮೇ.19) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ 710 ರೂ. ಕುಸಿದರೆ, 22…
ಉಂಡೆ ಕೊಬ್ಬರಿ ದರ ನಾಗಾಲೋಟದಲ್ಲಿ ಏರಿಕೆ ಕಂಡಿದ್ದು, ತೆಂಗು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೇಡಿಕೆ ಇರುವುದರಿಂದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…