Categories: information

ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹2,000 ಪಿಂಚಣಿ ; ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಮಾಸಿಕ ₹2,000 ಪಿಂಚಣಿ ಸೌಲಭ್ಯ ನೀಡಲಾಗುತ್ತಿದೆ. ಅರ್ಹ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಸರಳವಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದು.

Spread the love

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಂಕಷ್ಟದಲ್ಲಿರುವ ಮೃತ ರೈತರ ಪತ್ನಿಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರದಿಂದ ಮಾಸಿಕ ₹೨,೦೦೦ ಗಳ ವಿಶೇಷ ವಿಧವಾ ವೇತನ (ಪಿಂಚಣಿ) ಯೋಜನೆಯನ್ನು ಜಾರಿಗೊಳಿಸಲಾಗಿದೆ

Thank you for reading this post, don't forget to subscribe!

ಅರ್ಹತೆ ಮತ್ತು ಮಾನದಂಡಗಳು: ಈ ವಿಶೇಷ ಪಿಂಚಣಿ ಸೌಲಭ್ಯವನ್ನು ಪಡೆಯಲು, ಮೃತ ರೈತರ ಕುಟುಂಬದವರು ಈಗಾಗಲೇ ಕೃಷಿ ಇಲಾಖೆಯ ನಿಯಮಾವಳಿಗಳ ಅಡಿಯಲ್ಲಿ ರೈತರ ಆತ್ಮಹತ್ಯೆ ಪ್ರಕರಣವೆಂದು ಗುರುತಿಸಲ್ಪಟ್ಟು, ಸರ್ಕಾರದ ಅಧಿಕೃತ ಪರಿಹಾರ ಧನವನ್ನು ಪಡೆದಿರಬೇಕು. ಅಂತಹ ಮೃತ ರೈತರ ಪತ್ನಿಯರು ಮಾತ್ರ ಈ ಮಾಸಿಕ ಪಿಂಚಣಿಗೆ ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಕೆ ಹೇಗೆ? ಅರ್ಹ ಫಲಾನುಭವಿಗಳು ತಮ್ಮ ವಾಸಸ್ಥಳದ ವ್ಯಾಪ್ತಿಯಲ್ಲಿ ಬರುವ ‘ಅಟಲ್ ಜೀ ಜನಸ್ನೇಹಿ ಕೇಂದ್ರ’ (ನಾಡಕಚೇರಿ) ಗಳ ಮೂಲಕ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿಸಲಾಗಿದೆ.

ಬೇಕಾಗುವ ಮುಖ್ಯ ದಾಖಲೆಗಳು:

* ಕೃಷಿ ಇಲಾಖೆಯಿಂದ ಆತ್ಮಹತ್ಯೆ ಪರಿಹಾರ ಧನ ಪಡೆದಿರುವ ಅಧಿಕೃತ ಆದೇಶದ ಪ್ರತಿ.
* ಅಟಲ್ ಜೀ ಜನಸ್ನೇಹಿ ಕೇಂದ್ರದ ನಿಗದಿತ ಅರ್ಜಿ ನಮೂನೆ.
* ಅರ್ಜಿದಾರರ ಆಧಾರ್ ಕಾರ್ಡ್.
* ಪಿಂಚಣಿ ಹಣ ಜಮೆಯಾಗಲು ಬ್ಯಾಂಕ್ ಅಥವಾ ಅಂಚೆ ಕಚೇರಿಯ (Post Office) ಖಾತೆ ವಿವರಗಳು.

ಆರ್ಥಿಕ ನಷ್ಟ ಹಾಗೂ ಕುಟುಂಬದ ಯಜಮಾನನನ್ನು ಕಳೆದುಕೊಂಡು ಕಂಗಾಲಾಗಿರುವ ರೈತ ಮಹಿಳೆಯರಿಗೆ ನೆರವಾಗಲು ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಅರ್ಹರು ಇದರ ಸೌಲಭ್ಯವನ್ನು ಪಡೆದುಕೊಳ್ಳಲು ಕೋರಲಾಗಿದೆ

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

57 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

57 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

57 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

57 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

57 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

57 years ago