ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಹಿಂಗಾರು ಮಳೆ ಮುಗಿದು ಇನ್ನೇನು ಚಳಿಗಾಲ ಆರಂಭವಾಗಿದೆ ಎನ್ನುವಷ್ಟರಲ್ಲಿ ಫೆಂಗಲ್ ಚಂಡಮಾರುತ (fengal cyclone) ಬೀಸುತ್ತಿದ್ದು ಇದರಿಂದ ರಾಜ್ಯದ ಹಲವು ಕಡೆ ತಂಪಾದ ವಾತಾವರಣ ನಿರ್ಮಾಣವಾಗಿದೆ.
Thank you for reading this post, don't forget to subscribe!ಅಲ್ಲದೆ ಹಲವಾರು ಜಿಲ್ಲೆಗಳಲ್ಲಿ ಕಳೆದರೆಡು ದಿನಗಳಿಂದ ಮೋಡ ಕವಿದ ವಾತಾವರಣ ಏರ್ಪಟ್ಟಿದ್ದು ಮುಂದಿನ 3 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಹಣ ಜಮಾ! ನಿಮಗೂ ಜಮಾ ಅಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಹಾಗಾದರೆ ಯಾವ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಹಾಗೂ ಯಾವ ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಎಲ್ಲೆಲ್ಲಿ ಮಳೆಯಾಗಲಿದೆ ?
ರಾಜ್ಯದಲ್ಲಿ ಬೀಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಒಳನಾಡಿನ ಮೂರು ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ನೀಡಿದೆ.
ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ತುಮಕೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಹವಾಮಾನ ಇಲಾಖೆ ವರದಿ ಮಾಡಿದೆ.
ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್ ಖರೀದಿಗೆ ಶೇ.90 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !
ಇನ್ನು ಮುಂದಿನ 3 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಡ್ಯ, ರಾಮನಗರ, ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಗಳವಾವರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಇರಲಿದ್ದು ಅದರೊಂದಿಗೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.
ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.
ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಮೊಬೈಲ್ ನಲ್ಲೇ ಮಳೆ ಮುನ್ಸೂಚನೆ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.aas.meghdoot&hl=en_IN&gl=US

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.

ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.

ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.