ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ನಿಮ್ಮ ಹೆಸರಿಗೆ FID ನಂಬರ್ ಅಂದರೆ ಫಾರ್ಮರ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ನೀವು ಸರಕಾರದ ಹಲವು ಯೋಜನೆಗಳಿಂದ ವಂಚಿತರಾಗಬೇಕಾಗುತ್ತದೆ.
Thank you for reading this post, don't forget to subscribe!ಹೌದು ರೈತ ಬಾಂಧವರೇ,ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಿಂದ ಹಿಡಿದು ರಾಜ್ಯ ಸರ್ಕಾರದ ಬೆಳೆ ವಿಮೆ, ಬೆಳೆ ಪರಿಹಾರ ಹಣ ಹೀಗೆ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ನಿಮ್ಮ ಬಳಿ FID ನಂಬರ್ ಅವಶ್ಯಕವಾಗಿ ಇರಬೇಕು. ಅಲ್ಲದೆ ಬಿತ್ತನೆ ಬೀಜದಿಂದ ಹಿಡಿದು, ಇನ್ನಿತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಯಾವುದೇ ಉಪಕರಣಗಳ ಮೇಲೆ ಸಬ್ಸಿಡಿ ಪಡೆಯಲು ಕೂಡ ನಿಮ್ಮದೇ ಆದ ಒಂದು FID ನಂಬರ್ ಇರಲೇಬೇಕು.
ಇದನ್ನೂ ಓದಿ: ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !
ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಮನೆಯಲ್ಲಿಯೇ ಕುಳಿತು ನಿಮ್ಮ ಹೆಸರಿಗೆ FID ನಂಬರ್ ಇದೆಯಾ ಇಲ್ಲವಾ ಎಂಬುದನ್ನು ಇವತ್ತಿನ ಈ ಅಂಕಣದಲ್ಲಿ ತಿಳಿಯೋಣ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ಹೇಗೆ ಮಾಡಿಸಬೇಕು ಮತ್ತು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ತಿಳಿಸುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಮೊಬೈಲ್ ನಲ್ಲೇ FID ನಂಬರ್ ಚೆಕ್ ಮಾಡುವುದು ಹೇಗೆ?
ಹಂತ -1) ರೈತರೇ ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/GetDetailsByAadhaar.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಒಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರಿಗೆ FID ನಂಬರ್ ಇದ್ದರೆ ಅಲ್ಲಿ ಕಾಣಿಸುತ್ತದೆ. ಅದರ ಜೊತೆಗೆ ನಿಮ್ಮ ಪಿಎಂ ಕಿಸಾನ್ ಐಡಿ ನಂಬರ್ ಕೂಡ ಕಾಣುತ್ತದೆ ಮತ್ತು ಯಾವ ಸರ್ವೆ ನಂಬರಿಗೆ ನಿಮ್ಮ FID ನಂಬರ್ ಲಿಂಕ್ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ವಿಶೇಷ ಸೂಚನೆ: ತಾಂತ್ರಿಕ ಕಾರಣದಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.
FID ನಂಬರ್ ಇಲ್ಲದಿದ್ದರೆ ಏನು ಮಾಡಬೇಕು?
ರೈತ ಮಿತ್ರರೇ ಈಗಾಗಲೇ ನಿಮಗೆ ಮೇಲೆ ತಿಳಿಸಿದಂತೆ ಸರ್ಕಾರದ ಯಾವುದೇ ಕಾರ್ಯಕ್ರಮವಾಗಲಿ ಅಥವಾ ಯೋಜನೆಯಾಗಲಿ ಅಥವಾ ಸಬ್ಸಿಡಿಯಾಗಲಿ , ಅದರ ಪ್ರಯೋಜನ ಪಡೆಯಲು ನಿಮ್ಮ ಬಳಿ ನಿಮ್ಮ ಸ್ವಂತ FID ನಂಬರ್ ಇರುವುದು ಅವಶ್ಯಕ. ಹಾಗಾಗಿ ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ರಚನೆಯಾಗದೆ ಇದ್ದರೆ, ನೀವು ಈ ಕೂಡಲೇ ನಿಮ್ಮ ಸಮೀಪದ ಗ್ರಾಮ್ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?
- ಆಧಾರ್ ಕಾರ್ಡ್
- ಪಹಣಿ ಪತ್ರ (ಉತಾರಿ)
- ಜಾತಿ ಆದಾಯ ಪ್ರಮಾಣಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ)
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ
- ನಿಮ್ಮ ಇತ್ತೀಚಿನ ಫೋಟೋ
ಈ ಮೇಲಿನ ದಾಖಲೆಗಳನ್ನು ನೀಡಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ನಿಮ್ಮ ಸ್ವಂತ FID ನಂಬರ್ ರಚನೆ ಮಾಡಿಕೊಳ್ಳಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.