FID Number: ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು FID ನಂಬರ್ ಕಡ್ಡಾಯ! ನಿಮ್ಮ FID ನಂಬರ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ನಿಮ್ಮ ಹೆಸರಿಗೆ FID ನಂಬರ್ ಅಂದರೆ ಫಾರ್ಮರ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ನೀವು ಸರಕಾರದ ಹಲವು ಯೋಜನೆಗಳಿಂದ ವಂಚಿತರಾಗಬೇಕಾಗುತ್ತದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ನಿಮ್ಮ ಹೆಸರಿಗೆ FID ನಂಬರ್ ಅಂದರೆ ಫಾರ್ಮರ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ನೀವು ಸರಕಾರದ ಹಲವು ಯೋಜನೆಗಳಿಂದ ವಂಚಿತರಾಗಬೇಕಾಗುತ್ತದೆ.

Thank you for reading this post, don't forget to subscribe!

ಹೌದು ರೈತ ಬಾಂಧವರೇ,ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಿಂದ ಹಿಡಿದು ರಾಜ್ಯ ಸರ್ಕಾರದ ಬೆಳೆ ವಿಮೆ, ಬೆಳೆ ಪರಿಹಾರ ಹಣ ಹೀಗೆ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ನಿಮ್ಮ ಬಳಿ FID ನಂಬರ್ ಅವಶ್ಯಕವಾಗಿ ಇರಬೇಕು. ಅಲ್ಲದೆ ಬಿತ್ತನೆ ಬೀಜದಿಂದ ಹಿಡಿದು, ಇನ್ನಿತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಯಾವುದೇ ಉಪಕರಣಗಳ ಮೇಲೆ ಸಬ್ಸಿಡಿ ಪಡೆಯಲು ಕೂಡ ನಿಮ್ಮದೇ ಆದ ಒಂದು FID ನಂಬರ್ ಇರಲೇಬೇಕು.

ಇದನ್ನೂ ಓದಿ: ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !

ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಮನೆಯಲ್ಲಿಯೇ ಕುಳಿತು ನಿಮ್ಮ ಹೆಸರಿಗೆ FID ನಂಬರ್ ಇದೆಯಾ ಇಲ್ಲವಾ ಎಂಬುದನ್ನು ಇವತ್ತಿನ ಈ ಅಂಕಣದಲ್ಲಿ ತಿಳಿಯೋಣ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ಹೇಗೆ ಮಾಡಿಸಬೇಕು ಮತ್ತು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ತಿಳಿಸುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲೇ FID ನಂಬರ್ ಚೆಕ್ ಮಾಡುವುದು ಹೇಗೆ?

ಹಂತ -1) ರೈತರೇ ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://fruitspmk.karnataka.gov.in/MISReport/GetDetailsByAadhaar.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

FID Number status

ಹಂತ -3) ನಂತರ ನಿಮಗೆ ಒಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರಿಗೆ FID ನಂಬರ್ ಇದ್ದರೆ ಅಲ್ಲಿ ಕಾಣಿಸುತ್ತದೆ. ಅದರ ಜೊತೆಗೆ ನಿಮ್ಮ ಪಿಎಂ ಕಿಸಾನ್ ಐಡಿ ನಂಬರ್ ಕೂಡ ಕಾಣುತ್ತದೆ ಮತ್ತು ಯಾವ ಸರ್ವೆ ನಂಬರಿಗೆ ನಿಮ್ಮ FID ನಂಬರ್ ಲಿಂಕ್ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ವಿಶೇಷ ಸೂಚನೆ: ತಾಂತ್ರಿಕ ಕಾರಣದಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.

FID ನಂಬರ್ ಇಲ್ಲದಿದ್ದರೆ ಏನು ಮಾಡಬೇಕು?

ರೈತ ಮಿತ್ರರೇ ಈಗಾಗಲೇ ನಿಮಗೆ ಮೇಲೆ ತಿಳಿಸಿದಂತೆ ಸರ್ಕಾರದ ಯಾವುದೇ ಕಾರ್ಯಕ್ರಮವಾಗಲಿ ಅಥವಾ ಯೋಜನೆಯಾಗಲಿ ಅಥವಾ ಸಬ್ಸಿಡಿಯಾಗಲಿ , ಅದರ ಪ್ರಯೋಜನ ಪಡೆಯಲು ನಿಮ್ಮ ಬಳಿ ನಿಮ್ಮ ಸ್ವಂತ FID ನಂಬರ್ ಇರುವುದು ಅವಶ್ಯಕ. ಹಾಗಾಗಿ ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ರಚನೆಯಾಗದೆ ಇದ್ದರೆ, ನೀವು ಈ ಕೂಡಲೇ ನಿಮ್ಮ ಸಮೀಪದ ಗ್ರಾಮ್ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?

  • ಆಧಾರ್ ಕಾರ್ಡ್
  • ಪಹಣಿ ಪತ್ರ (ಉತಾರಿ)
  • ಜಾತಿ ಆದಾಯ ಪ್ರಮಾಣಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ)
  • ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ
  • ನಿಮ್ಮ ಇತ್ತೀಚಿನ ಫೋಟೋ

ಈ ಮೇಲಿನ ದಾಖಲೆಗಳನ್ನು ನೀಡಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ನಿಮ್ಮ ಸ್ವಂತ FID ನಂಬರ್ ರಚನೆ ಮಾಡಿಕೊಳ್ಳಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago