Categories: Best Health Tips

ಐಸ್ ಕ್ರೀಮ್ ಯಾಕೆ ತಿನ್ನಬೇಕು ಗೊತ್ತಾ? ಐಸ್ ಕ್ರೀಮ್ ತಿನ್ನುವುದರ ಬಗ್ಗೆ ಡಾಕ್ಟರ್ ಏನು ಹೇಳುತ್ತಾರೆ?

ಸ್ನೇಹಿತರೇ ಐಸ್ ಕ್ರೀಮ್ ಅಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ.ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಐಸ್ ಕ್ರೀಮ್ ಇಷ್ಟಪಡದವರೇ ಇಲ್ಲ. ಮಕ್ಕಳು ಎಷ್ಟೇ ಐಸ್ ಕ್ರೀಮ್ ಬೇಕು ಎಂದು ಹಠ ಹಿಡಿದರು ಅದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಬಹುತೇಕ ಪೋಷಕರು ಹೇಳುತ್ತಾರೆ. ಆದರೆ ಐಸ್ ಕ್ರೀಮ್ ತಿನ್ನುವುದರಿಂದ ಕೆಲವು ಆರೋಗ್ಯ ಪ್ರಯೋಜನಗಳಿವೆ ಎಂದು ನಿಮಗೆ ಗೊತ್ತೇ?

Spread the love

ಸ್ನೇಹಿತರೇ ಐಸ್ ಕ್ರೀಮ್ ಅಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ.ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಐಸ್ ಕ್ರೀಮ್ ಇಷ್ಟಪಡದವರೇ ಇಲ್ಲ. ಮಕ್ಕಳು ಎಷ್ಟೇ ಐಸ್ ಕ್ರೀಮ್ ಬೇಕು ಎಂದು ಹಠ ಹಿಡಿದರು ಅದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಬಹುತೇಕ ಪೋಷಕರು ಹೇಳುತ್ತಾರೆ. ಆದರೆ ಐಸ್ ಕ್ರೀಮ್ ತಿನ್ನುವುದರಿಂದ ಕೆಲವು ಆರೋಗ್ಯ ಪ್ರಯೋಜನಗಳಿವೆ ಎಂದು ನಿಮಗೆ ಗೊತ್ತೇ?

Thank you for reading this post, don't forget to subscribe!

ಐಸ್ ಕ್ರೀಮ್ ವಯಸ್ಸಿನ ಬೇಧವಿಲ್ಲದೆ ಎಲ್ಲರೂ ಇಷ್ಟಪಡುವ ಪದಾರ್ಥಗಳಲ್ಲಿ ಇದು ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಕೆಲವು ಜನರು ಐಸ್ ಕ್ರೀಮ್‌ ಅನ್ನು ‘ಸ್ಟ್ರೆಸ್ ಬಸ್ಟರ್’ ಎಂದು ಕರೆಯುತ್ತಾರೆ. ಅಂದರೆ ನೀವು ಆತಂಕಕ್ಕೆ ಒತ್ತಡಕ್ಕೆ ಒಳಗಾದ ಸಂದರ್ಭದಲ್ಲಿ ಐಸ್ ಕ್ರೀಮ್ ಅನ್ನ ತಿನ್ನುವುದರಿಂದ ಮನಸ್ಸು ಹಗುರವಾಗುತ್ತದೆ. ನೀವು ಹೆಚ್ಚು ಐಸ್ ಕ್ರೀಮ್ ತಿಂದರೆ ಕೆಮ್ಮು ವಕ್ಕರಿಸುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಸಾಮಾನ್ಯವಾಗಿ ಎಲ್ಲರೂ ನಂಬಿರುವಂತೆ ಹೆಚ್ಚು ಐಸ್ ಕ್ರೀಮ್ ತಿಂದರೆ ರೋಗಗಳು ಬರುತ್ತವೆ ಎಂಬುದು ಸತ್ಯವಾದರೂ ಅದರಿಂದ ಹಲವು ಪ್ರಯೋಜನಗಳು ಇವೆ. ಅವು ಯಾವುವು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

ಐಸ್ ಕ್ರೀಮ್ ಕೇವಲ ರುಚಿಯನ್ನು ಮಾತ್ರವಲ್ಲದೆ ಕೆಲವು ಪೌಷ್ಟಿಕಾಂಶದ ಮೌಲ್ಯವನ್ನೂ ಹೊಂದಿದೆ. ಐಸ್ ಕ್ರೀಮ್ ಸಂಪೂರ್ಣ ಪೌಷ್ಟಿಕಾಂಶದ ಆಹಾರವಲ್ಲದಿದ್ದರೂ, ಪ್ರಸಿದ್ಧ ಪೌಷ್ಟಿಕತಜ್ಞ ಲಾರಾ ಎಂ. ಅಲ್ಲೆ ಅವರು ಐಸ್ ಕ್ರೀಮ್ ಪ್ರಯೋಜನಗಳನ್ನು ಹೊಂದಿದೆ ಎಂದು ಹೇಳುತ್ತಾರೆ.ಐಸ್ ಕ್ರೀಮ್ ಉತ್ತಮ ಗುಣಮಟ್ಟದ್ದಾಗಿದ್ದರೆ ಮತ್ತು ಅದರ ತಯಾರಿಕೆಯಲ್ಲಿ ಯಾವುದೇ ರಾಸಾಯನಿಕಗಳನ್ನು ಸೇರಿಸದಿದ್ದರೆ, ಖಂಡಿತವಾಗಿಯೂ ಐಸ್ ಕ್ರೀಮ್ ನಮ್ಮ ದೇಹಕ್ಕೆ ಉಪಯುಕ್ತ ಪೋಷಕಾಂಶಗಳನ್ನು ಹೊಂದಿರುತ್ತದೆ ಎಂದು ಅವರು ಭಾವಿಸುತ್ತಾರೆ.ಐಸ್ ಕ್ರೀಮ್ ತಿನ್ನುವುದರಿಂದ ನಮ್ಮ ದೇಹದಲ್ಲಿ ಎಂಡಾರ್ಫಿನ್ ಎಂಬ ಹಾರ್ಮೋನ್ ಬಿಡುಗಡೆಯಾಗುತ್ತದೆ. ಇದರಿಂದ ಮನಸ್ಸು ಮುದಗೊಳ್ಳುತ್ತದೆ. ನಮಗೆ ಗೊತ್ತಿಲ್ಲದೆಯೇ ಸಂತೋಷ ನಮ್ಮೊಳಗೆ ಬರುತ್ತದೆ.ನಾವು ದಿನಪೂರ್ತಿ ಚೈತನ್ಯ ಭರಿತರಾಗಿ ಇರಲು ಇದು ಸಹಾಯಮಾಡುತ್ತದೆ. ಈ ಕಾರಣದಿಂದ ಐಸ್ ಕ್ರೀಮ್ ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದು.

ಅಷ್ಟೇ ಅಲ್ಲದೆ ಐಸ್ ಕ್ರೀಮ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕ್ಯಾಲ್ಸಿಯಂ ಪೂರೈಕೆ ಹೆಚ್ಚಾಗುತ್ತದೆ. ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸುತ್ತದೆ. ಇದು ಹಲ್ಲುಗಳನ್ನು ಮತ್ತು ಮೂಳೆಗಳನ್ನ ಸುದೀರ್ಘಕಾಲ ಗಟ್ಟಿಮುಟ್ಟಾಗಿ ಇರಲು ಸಹಜವಾಗಿ ವೃದ್ಧಾಪ್ಯದಲ್ಲಿ ಕಂಡುಬರುವ ಮೂಳೆ ಸವತಕ್ಕೆ ಐಸ್ ಕ್ರೀಮ್ ಒಂದು ಮದ್ದು ಎನ್ನಬಹುದು. ಐಸ್ ಕ್ರೀಮ್ ತಿನ್ನುವುದರಿಂದ ನಮ್ಮ ದೇಹದಲ್ಲಿ ಶಕ್ತಿಯು ಬಹುಬೇಗ ಹೆಚ್ಚುತ್ತದೆ. ಸಾಮಾನ್ಯ ಆಹಾರಕ್ಕೆ ಹೋಲಿಸಿದರೆ ಐಸ್ ಕ್ರೀಮ್ ನಮಗೆ ಬೇಗನೆ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದರಲ್ಲೂ ರಾಸಾಯನಿಕ ಮುಕ್ತವಾದ ಐಸ್ ಕ್ರೀಮ್ ದೇಹಕ್ಕೆ ಮತ್ತಷ್ಟು ಹೆಚ್ಚು ಶಕ್ತಿಯನ್ನು ಒದಗಿಸುತ್ತದೆ. ಹಲ್ಲಿನ ಸಮಸ್ಯೆಗಳ ಸಮಯದಲ್ಲಿ ಐಸ್ ಕ್ರೀಮ್ ನಮಗೆ ತುಂಬಾ ಉಪಯುಕ್ತವಾಗಿದೆ. ಹಲ್ಲು ತೆಗೆದ ನಂತರ ಐಸ್ ಕ್ರೀಂ ತಿಂದರೆ ಗಾಯ ಬಹುಬೇಗ ವಾಸಿಯಾಗುತ್ತದೆ ಎಂದು ವೈದ್ಯರೂ ಒಪ್ಪುತ್ತಾರೆ. ಆ ಸಮಯದಲ್ಲಿ ಐಸ್ ಕ್ರೀಮ್ ತಿಂದರೆ ತುಂಬಾ ಒಳ್ಳೆಯದು ಎಂದೂ ಹೇಳಲಾಗುತ್ತದೆ. ಹೀಗೆ ಐಸ್ ಕ್ರೀಮ್ ನಿಂದ ನಮ್ಮ ದೇಹಕ್ಕೆ ಹತ್ತು ಹಲವು ಪ್ರಯೋಜನಗಳು ಇದ್ದರೂ ಅದರ ಬಗ್ಗೆ ನಮ್ಮ ಪೋಷಕರು ತಮ್ಮ ಮಕ್ಕಳಿಗೆ ಎಚ್ಚರಿಕೆಯನ್ನು ಉಂಟುಮಾಡುತ್ತಾರೆ. ಎಚ್ಚರಿಕೆ ಮಾಡುವುದು ತಪ್ಪಲ್ಲ, ಅದರ ಜೊತೆಗೆ ಅದರಿಂದಾಗುವ ಹಾನಿಗಳನ್ನು ತಪ್ಪಿಸುವುದು ಕೂಡ ಅಷ್ಟೇ ಮಹತ್ವದ್ದಾಗಿದೆ.

ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ ನೋಟಿಫಿಕೇಶನ್ ಗಳನ್ನು “allow” ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago