2003ರ ವಿಶ್ವಕಪ್ ಫೈನಲ್ ನಂತರ ಎರಡು ತಂಡಗಳು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದ ಕುರಿತಾಗಿ ಆಸ್ಟ್ರೇಲಿಯಾ ತಂಡದ ನಾಯಕನಾದ ಪ್ಯಾಟ್ ಕಮಿನ್ಸ್ ಏನು ಹೇಳಿದರು ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಏಕದಿನ ವಿಶ್ವಕಪ್ 2023 ಫೈನಲ್ ನಾಳೆ ಗುಜರಾತಿನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದ್ದು, ಇಡೀ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ ಹತ್ತನ್ನು ಗೆದ್ದು ಫೈನಲ್ ಪ್ರವೇಶಿಸುವ ಭಾರತಕ್ಕೆ ಆಸ್ಟ್ರೇಲಿಯಾ ತಂಡ ಎದುರಾಗಲಿದೆ. 2003ರ ವಿಶ್ವಕಪ್ ಫೈನಲ್ ನಂತರ ಎರಡು ತಂಡಗಳು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದ ಕುರಿತಾಗಿ ಆಸ್ಟ್ರೇಲಿಯಾ ತಂಡದ ನಾಯಕನಾದ ಪ್ಯಾಟ್ ಕಮಿನ್ಸ್ ಏನು ಹೇಳಿದರು ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಸ್ನೇಹಿತರೆ ಈ ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ನಂತೆ ಆಸ್ಟ್ರೇಲಿಯಾ ತಂಡವು ಆಡಿದ 10 ಪಂದ್ಯಗಳಲ್ಲಿ ಹತ್ತನ್ನು ಗೆಲ್ಲದೆ ಮೊದಲೆರಡು ಪಂದ್ಯಗಳನ್ನು ಸೋತು ನಂತರ ಆಡಿದ 8 ಪಂದ್ಯಗಳನ್ನು ಜಯಿಸಿ ಸೆಮಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಇದೀಗ ಫೈನಲ್ ಗೆ ಏರಿದೆ. ಈ ಕುರಿತು ಆಸ್ಟ್ರೇಲಿಯಾ ತಂಡದ ನಾಯಕನಾದ ವ್ಯಾಟ್ ಕಮಿನ್ಸ್ ಅವರು,”ಭಾರತ ತಂಡದ ಎದುರು ಪಂದ್ಯವನ್ನ ಮಾಡಲು ನಾವು ಬಹಳ ಉತ್ಸುಕರಾಗಿದ್ದೇವೆ. ಪ್ರಸ್ತುತ ಪ್ರಚಂಡ ಫಾರ್ಮ್ ನಲ್ಲಿರುವ ಭಾರತ ತಂಡವನ್ನು ಫೈನಲ್ ನಲ್ಲಿ ಎದುರಿಸುತ್ತಿರುವುದು ನಮಗೆ ಒಂದು ಹೆಮ್ಮೆಯ ವಿಷಯವಾಗಿದೆ. ಹೀಗಾಗಿ ಭಾರತ ತಂಡದ ಆಟಗಾರರನ್ನ ಕಟ್ಟಿ ಹಾಕಲು ನಾವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅದರಲ್ಲೂ ಅದ್ಬುತ ಲಯದಲ್ಲಿರುವ ಕೊಹ್ಲಿ, ಶಮಿಯನ್ನು ನಾವು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಭಾರತವನ್ನು ಫೈನಲ್ ನಲ್ಲಿ ಎದುರಿಸಲು ಎದುರು ನೋಡುತ್ತಿದ್ದೇವೆ,” ಎಂದು ನುಡಿದಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…
ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…