ಉಂಡೆ ಕೊಬ್ಬರಿ ದರ ನಾಗಾಲೋಟದಲ್ಲಿ ಏರಿಕೆ ಕಂಡಿದ್ದು, ತೆಂಗು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೇಡಿಕೆ ಇರುವುದರಿಂದ ರೈತರಿಗೆ ಲಾಭದಾಯಕ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲೇ ಅತ್ಯಧಿಕ ಗುಣಮಟ್ಟದ ತೆಂಗಿನಕಾಯಿಗೆ ಹೆಸರುವಾಸಿಯಾಗಿರುವ ತುಮಕೂರು ಜಿಲ್ಲೆಯ ತಿಪಟೂರು ಕೊಬ್ಬರಿಗೆ ಇನ್ನಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಕೇವಲ ಒಂದೇ ತಿಂಗಳಲ್ಲಿ ದಾಖಲೆಯ ಗರಿಷ್ಠ ದರ ತಿಪಟೂರು ಉಂಡೆ ಕೊಬ್ಬರಿಗೆ ಬಂದಿದೆ. ನೋಡ ನೋಡುತ್ತಿದ್ದಂತೆ ಏಪ್ರಿಲ್ ತಿಂಗಳ ಈ ಮೂರು ವಾರಗಳಲ್ಲಿ ಪ್ರತಿ ಕ್ವಿಂಟಾಲ್ಗೆ ಗರಿಷ್ಠ 38,000 ರೂಪಾಯಿಗೆ ಮಾರಾಟವಾಗುತ್ತಿದೆ.
Thank you for reading this post, don't forget to subscribe!ವ್ಯಾಪ್ತಿಯಲ್ಲಿ ಹೇರಳವಾಗಿ ತೆಂಗಿನ ಕಾಯಿ ಬೆಳೆಯಲಾಗುತ್ತದೆ. ಅದರಲ್ಲೂ ತಿಪಟೂರು ತೆಂಗಿನ ಕಾಯಿ ಗುಣಮಟ್ಟದಿಂದ ಕೂಡಿದ್ದು, ದಪ್ಪ ಕೊಬ್ಬರಿ ಇರುತ್ತದೆ. ಹೆಚ್ಚಿನ ಎಣ್ಣೆ ಅಂಶ ಇರುವ ಕಾರಣ, ರುಚಿಯು ಹೆಚ್ಚಿರುತ್ತದೆ. ಅಡುಗೆಗೆ ಹಾಗೂ ಇನ್ನಿತರ ಪದಾರ್ಥಗಳಿಗೆ ಬಳಕೆ ಆಗುತ್ತದೆ. 2026ರಲ್ಲಿ ತಿಪಟೂರು ಉಂಡೆ ಕೊಬ್ಬರಿಗೆ ಹೆಚ್ಚು ಬೇಡಿಕೆ ಸೃಷ್ಟಿಯಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಹೆಚ್ಚು ರಫ್ತಾಗುತ್ತಿದೆ.
ಇಂದು ಏಪ್ರಿಲ್ 27 ರಂದು ಉಂಡೆ ಕೊಬ್ಬರಿಗೆ ತಿಪಟೂರು ಎಪಿಎಂಸಿ ಮಾರಕಟ್ಟೆಯಲ್ಲಿ ಕ್ವಿಂಟಾಲ್ ದರ 38,000 ರೂಪಾಯಿ ಗರಿಷ್ಠ, 32,500 ರೂಪಾಯಿ ಕನಿಷ್ಠ ಬೆಲೆ ಇದೆ. ಸರಾಸರಿ 36,711 ರೂಪಾಯಿ ದಾಖಲಾಗಿದೆ. 30,000 ರೂಪಾಯಿ ಆಸುಪಾಸು ಮಾರಾಟವಾದರೆ ಅದೃಷ್ಟದಂತೆ ಭಾವಿಸುತ್ತಿದ್ದ ಬೆಳೆಗಾರರಿಗೆ ಈ ವರ್ಷ ಬಂಪರ್ ಲಾಟರಿ ಹೊಡೆದಂತಾಗಿದೆ. ಬೇರೆ ಬೇರೆ ಭಾಗಗಲ್ಲಿ ಉತ್ಪಾದನೆ ಕೊರತೆ ಕಾರಣಕ್ಕೆ ಉಂಡೆ ಕೊಬ್ಬರಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಎಪಿಎಂಸಿ ವರ್ತಕರೊಬ್ಬರು ತಿಳಿಸಿದ್ದಾರೆ.
ಕಳೆದ ಒಂದು ವಾರದಲ್ಲಿ (ಏಪ್ರಿಲ್ 15-24) ಪ್ರತಿ ದಿನವು 38,000 ರೂಪಾಯಿ ದರವಿದ್ದು, ಇದು ವ್ಯಾಪಾರಿಗಳು, ರೈತರ ಹರ್ಷಕ್ಕೆ ಕಾರಣವಾಗಿದೆ.
* ಗುಬ್ಬಿ ಮಾರುಕಟ್ಟೆ: ಕೊಬ್ಬರಿ ಗರಿಷ್ಠ ಬೆಲೆ 30,000 ರೂಪಾಯಿ
* ಅರಸಿಕೆರೆ ಮಾರುಕಟ್ಟೆ: 32,000 ರೂಪಾಯಿ
* ತುಮಕೂರು ನಗರ ಮಾರುಕಟ್ಟೆ: 32,6000 ರೂಪಾಯಿ
* ಹೊಸದುರ್ಗ ಮಾರುಕಟ್ಟೆ: 30,000 ರೂಪಾಯಿ
* ಬೆಂಗಳೂರು ಮಾರುಕಟ್ಟೆ: 35,000 ರೂಪಾಯಿ
* ದಾವಣಗೆರೆ ಎಪಿಎಂಸಿ: 12,800 ರೂಪಾಯಿ
ತುಮಕೂರು ಭಾಗದಲ್ಲಿ ತೆಂಗು ಬೆಳೆಯಲು ಪೂರಕ ವಾತಾವರಣ ಇದೆ. ಶ್ರೀಮಂತ ಕೃಷಿ ಪರಂಪರೆ ಇಲ್ಲಿದ್ದು, ಎಲ್ಲಿ ನೋಡಿದರೂ ಆಗಸದೆತ್ತರಕ್ಕೆ ಬೆಳೆದು ನಿಂತ ತೆಗಿನ ಮರಗಳನ್ನೇ ಕಾಣುತ್ತೇವೆ. ಈ ವಾಣಿಜ್ಯ ಬೆಳೆ ಇಲ್ಲಿನ ಲಕ್ಷಾಂತರ ಕುಟುಂಬಗಳಿಗೆ ಜೀವನಾಧಾರವಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…