ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
Thank you for reading this post, don't forget to subscribe!ಇದೀಗ ರಾಜ್ಯ ಸರ್ಕಾರ ಕುರಿ ಮತ್ತು ಆಡು ಸಾಕಾಣಿಕೆ ಮಾಡುವ ರೈತರಿಗೆ ಹಾಗೂ ಕುರಿಗಾಹಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಅರ್ಹ ರೈತರು ಹಾಗೂ ಕುರಿಗಾಹಿಗಳಿಂದ ಕುರಿ ಸಾಕಾಣಿಕೆ ಘಟಕ ಸ್ಥಾಪನೆ ಮಾಡಿದರೆ 1.75 ಲಕ್ಷ ರೂಪಾಯಿವರೆಗೆ ಸಬ್ಸಿಡಿ ನೀಡಲಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ವರ್ಷಕ್ಕೆ 6,000 ರೂ.ಬದಲು 8,000 ರೂ. ಹಣ ನೀಡಲು ಮುಂದಾದ ಕೇಂದ್ರ ಸರ್ಕಾರ! ಯಾವಾಗಿನಿಂದ ಬರುತ್ತೆ?
ಹೌದು ರೈತ ಮಿತ್ರರೇ, ರಾಜ್ಯ ಸರ್ಕಾರವು ತನ್ನ ಅಮೃತ ಸ್ವಾಭಿಮಾನಿ ಯೋಜನೆ ಅಡಿಯಲ್ಲಿ ಕುರಿ ಮತ್ತು ಆಡು ಸಾಕಾಣಿಕೆ ಮಾಡುವವರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಅರ್ಹ ರೈತರಿಗೆ ಹಾಗೂ ಕುರಿಗಾಹಿಗಳಿಗೆ ಸಬ್ಸಿಡಿ ರೂಪದಲ್ಲಿ ಕುರಿ ಸಾಕಾಣಿಕೆ ಘಟಕವನ್ನು ಸ್ಥಾಪಿಸಲು ಧನ ಸಹಾಯವನ್ನು ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ?
ನೀವು ಈಗಾಗಲೇ ನಿಮ್ಮ ತಾಲೂಕಿನ ಕುರಿ ಸೊಸೈಟಿಯಲ್ಲಿ ಸದಸ್ಯತ್ವ ಪಡೆದುಕೊಂಡಿದ್ದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗುತ್ತೀರಿ.
ಇದನ್ನೂ ಓದಿ: ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ನೀವು ಅರ್ಜಿ ಸಲ್ಲಿಸಲು ಇದೇ ತಿಂಗಳ 18 ನೇ ತಾರೀಖು ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ನೀವು ನಿಮ್ಮ ಜಿಲ್ಲೆಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ನೀಡಲಾಗುವ ಅರ್ಜಿಯನ್ನು ಪಡೆದು,ಅದನ್ನು ಭರ್ತಿ ಮಾಡಿ ಅದರ ಜೊತೆಗೆ ನಿಮ್ಮ ಅಗತ್ಯ ದಾಖಲೆಗಳನ್ನು ಸಲ್ಲಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t