Categories: information

BJP vs CONGRESS: ಯಾರ ಪ್ರಣಾಳಿಕೆಯಲ್ಲಿ ಏನಿದೆ? ಯಾರ ಪ್ರಣಾಳಿಕೆ ಬಲಿಷ್ಠವಾಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ನಮಸ್ತೆ ಗೆಳೆಯರೇ,ನಿಮಗೆಲ್ಲ ಮೀಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೆ ನಿಮಗೆಲ್ಲ ತಿಳಿದಿರುವಂತೆ ಲೋಕಸಭಾ ಚುನಾವಣೆಯ ಅಖಾಡ ಸಿದ್ಧವಾಗಿದೆ. ಅದಕ್ಕಾಗಿ ಎಲ್ಲಾ ಪಕ್ಷಗಳು ತಮ್ಮ ತಮ್ಮ ಪಕ್ಷದ ಗ್ಯಾರಂಟಿಗಳನ್ನು ಬಿಡುಗಡೆ ಮಾಡಿದ್ದಾರೆ. ಯಾವ ಪಕ್ಷ ಜನರಿಗೆ ಅತಿ ಉಪಯುಕ್ತವಾದ ಗ್ಯಾರಂಟಿಗಳನ್ನು ನೀಡಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Spread the love

ನಮಸ್ತೆ ಗೆಳೆಯರೇ,ನಿಮಗೆಲ್ಲ ಮೀಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೆ ನಿಮಗೆಲ್ಲ ತಿಳಿದಿರುವಂತೆ ಲೋಕಸಭಾ ಚುನಾವಣೆಯ ಅಖಾಡ ಸಿದ್ಧವಾಗಿದೆ. ಅದಕ್ಕಾಗಿ ಎಲ್ಲಾ ಪಕ್ಷಗಳು ತಮ್ಮ ತಮ್ಮ ಪಕ್ಷದ ಗ್ಯಾರಂಟಿಗಳನ್ನು ಬಿಡುಗಡೆ ಮಾಡಿದ್ದಾರೆ. ಯಾವ ಪಕ್ಷ ಜನರಿಗೆ ಅತಿ ಉಪಯುಕ್ತವಾದ ಗ್ಯಾರಂಟಿಗಳನ್ನು ನೀಡಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನು ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು 75 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇನ್ನು ಮೋದಿ ಸರ್ಕಾರದಿಂದಲೂ 25 ಹೊಸ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ. ಹಾಗಾದರೆ ಯಾವುವು ಪ್ರಮುಖ ಗ್ಯಾರಂಟಿಗಳಿವೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

ಇದನ್ನೂ ಓದಿ: Surya Ghar Yojana: ಸೋಲಾರ್ ಪ್ಯಾನೆಲ್ ಅಳವಡಿಸಿ ಲಕ್ಷಗಟ್ಟಲೆ ಹಣ ಗಳಿಸುವ ಈ ಯೋಜನೆ ಬಗ್ಗೆ ನಿಮಗೆ ಗೊತ್ತಾ?

ಬಿಜೆಪಿ ಪ್ರಣಾಳಿಕೆಯಲ್ಲಿ ಏನಿದೆ?

ಹೌದು ಸ್ನೇಹಿತರೆ ಲೋಕಸಭಾ ಚುನಾವಣೆ ಪ್ರಾರಂಭವಾಗಿದೆ ಮೋದಿ ಸರ್ಕಾರದಿಂದ ಬಿಡುಗಡೆಯಾದ ಗ್ಯಾರಂಟಿಗಳೆಂದರೆ ಮುಂದಿನ ಐದು ವರ್ಷ ಉಚಿತ ರೇಷನ್ ಕೊಡುವುದಾಗಿ ಭರವಸೆ, ಇನ್ನೊಂದು ಗ್ಯಾರಂಟಿ ಏನೆಂದರೆ ಲಕ್ಷದೀದಿ ಯೋಜನೆ.ಈ ಯೋಜನೆ ಜನರಿಗೆ ಸ್ವಲ್ಪ ಕನ್ಫ್ಯೂಷನ್ ಆಗಬಹುದು. ಏಕೆಂದರೆ ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ, ದೇಶದಲ್ಲಿರುವ ಎಲ್ಲಾ ಮಹಿಳೆಯರಿಗೆ ವರ್ಷಕ್ಕೆ ಕನಿಷ್ಠ ಒಂದು ಲಕ್ಷ ರೂಪಾಯಿಗಳನ್ನು ದುಡಿಯಲು ಸಹಾಯ ಮಾಡುವುದಾಗಿದೆ. ಈ ಯೋಜನೆಯ ಮುಖಾಂತರ ಸುಮಾರು ಮೂರು ಕೋಟಿ ಮಹಿಳೆಯರು ಫಲಾನುಭವಿಗಳು  ಆಗಲಿದ್ದಾರೆ.

ಪ್ರಮುಖವಾಗಿ ಇನ್ನೊಂದು ಅಂಶವೇನೆಂದರೆ ಮುದ್ರಾ ಯೋಜನೆ ಅಡಿಯಲ್ಲಿ ಮೊದಲನೇಗಿಂತಲೂ 20 ಲಕ್ಷ ಲೋನ್ ಹೆಚ್ಚಿಸಲು ಭರವಸೆಯನ್ನು ನೀಡಿದ್ದಾರೆ
ಹಾಗೂ ಕಿಸಾನ್ ಸಮಾನ್ ಯೋಜನೆಯಲ್ಲಿ ಈಗಿರುವ ಅಂಕಿ ಅಂಶಗಳಿಗಿಂತಲೂ 10 ಕೋಟಿ ರೈತರಿಗೆ ಹೆಚ್ಚಿಸುತ್ತಾರೆ ಎಂದು ಆಶ್ವಾಸನೆ ನೀಡಿದ್ದಾರೆ. ಇದರೊಂದಿಗೆ ಸಮಾನ ನಾಗರಿಕ ಕಾಯ್ದೆ ಜಾರಿಗೆ ತರುವ ಭರವಸೆಯನ್ನು ನೀಡಿದ್ದಾರೆ.ಅದರ ಜೊತೆಗೆ CAA ಕೂಡಾ ಜಾರಿಗೆ ಬರಲಿದೆ ಎಂದು ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದ್ದಾರೆ. ಅಲ್ಲದೇ ದೇಶದಲ್ಲಿ ಎಡಪಂಥೀಯ ತೀವ್ರವಾದಿಗಳು (left wing extremism) ಮಟ್ಟ ಹಾಕುವುದಾಗಿ ಹೇಳಿದ್ದಾರೆ. ಅದರಂತೆ ಹೊರಗಿನ ದುಷ್ಟ ಶಕ್ತಿಗಳ ವಿರುದ್ಧ ದೇಶವನ್ನು ಕಾಪಾಡುವುದು ತಮ್ಮ ಪ್ರಮುಖ ಗುರಿ ಎಂದು ಹೇಳಿದ್ದಾರೆ.

ಇನ್ನು ಉಳಿದ ಗ್ಯಾರಂಟಿಗಳು ಕೂಡ ಇವೆ ಅವುಗಳೆಂದರೆ ಒಂದು ದೇಶ ಒಂದು ಚುನಾವಣೆ ಮತ್ತು ರೈಲ್ವೆ ಮತ್ತು ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ಅಭಿವೃದ್ಧಿ ಪಡಿಸುವುದಾಗಿ ಹೇಳಿಕೊಂಡಿದ್ದಾರೆ. ಹೀಗೆ ಸಾಕಷ್ಟು ಹೊಸ ಯೋಜನೆಗಳನ್ನು ನೀಡಲು ಮೋದಿ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: 9 ನೇ ಕಂತಿನ ಹಣ ಬಿಡುಗಡೆಗೆ! ನಿಮ್ಮ ಜಿಲ್ಲೆಗೆ ಬಿಡುಗಡೆ ಆಗಿದೆಯಾ ಚೆಕ್ ಮಾಡಿ ನೋಡಿ !!

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏನಿದೆ?

ಬಿಜೆಪಿ ಪಕ್ಷಕ್ಕಿಂತ ಪ್ರಣಾಳಿಕೆಯಲ್ಲಿ ತಾವೇನು ಕಮ್ಮಿ ಇಲ್ಲ ಎಂಬಂತೆ ಕಾಂಗ್ರೆಸ್ ಪಕ್ಷ ಕೂಡ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರ ಪ್ರಮುಖ ಅಂಶಗಳು ಇಲ್ಲಿವೆ ನೋಡಿ..

ಪ್ರಮುಖವಾಗಿ ಕಾಂಗ್ರೆಸ್ ಪಕ್ಷವು ಯುವಕರನ್ನು ಟಾರ್ಗೆಟ್ ಮಾಡಿದ್ದು, ಯುವಕರಿಗೆ ಉದ್ಯೋಗದ ಭರವಸೆ ನೀಡಿದೆ. ಅದರ ಜೊತೆಗೆ ರೈತರನ್ನು ಗಮನದಲ್ಲಿ ಇಟ್ಟುಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸ್ವಾಮಿನಾಥ ಫಾರ್ಮುಲಾ ಪ್ರಕಾರ ಕಾನೂನು ಬದ್ಧ ಮಾಡಲು ಆಶ್ವಾಸನೆ ನೀಡಿದೆ. ಅಲ್ಲದೇ ರೈತರ ಸಾಲಮನ್ನಾ ಮಾಡುವ ಭರವಸೆಯನ್ನು ನೀಡಿದೆ.

ಇನ್ನು ಮಹಿಳೆಯರನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ವರ್ಷ 1 ಲಕ್ಷ ರುಪಾಯಿ ನೇರವಾಗಿ ಅವರ ಖಾತೆಗೆ ಹಾಕುವ ಆಶ್ವಾಸನೆ ನೀಡಿದೆ.ಅಲ್ಲದೆ ಹೆಣ್ಣು ಮಕ್ಕಳಿಗೆ ಕೇಂದ್ರ ಸರಕಾರದ ನೌಕರಿಯಲ್ಲಿ 50% ಮೀಸಲಾತಿ ನೀಡುವುದಾಗಿ ಘೋಷಣೆ ಮಾಡಿದೆ.

ಇನ್ನು ಕಾರ್ಮಿಕರನ್ನು ಗಮನದಲ್ಲಿ ಇಟ್ಟುಕೊಂಡು, ಅವರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಲು ಪ್ರತಿ ಕಾರ್ಮಿಕರಿಗೂ (ನರೇಗಾ ಕಾರ್ಮಿಕರು ಸೇರಿ) ದಿನಕ್ಕೆ 400 ರುಪಾಯಿ ಸಂಬಳವನ್ನು ನೀಡುವುದಾಗಿ ಹೇಳಿದೆ. ಇನ್ನು ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಕಾರ್ಮಿಕರಿಗೆ ಗ್ಯಾರಂಟೀ ಕೆಲಸವನ್ನು ನೀಡುವುದಾಗಿ ಹೇಳಿದ್ದಾರೆ.

ಹೀಗೆ ಸಾಕಷ್ಟು ಹೊಸ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿದೆ.

ಈಗ ಎರಡೂ ಪಕ್ಷಗಳ ಪ್ರಣಾಳಿಕೆ ಅಂಶಗಳನ್ನು ನಿಮ್ಮ ಮುಂದೆ ಬಿಚ್ಚಿಟ್ಟಿದ್ದು, ನಿಜವಾಗಿಯೂ ದೇಶದ ಅಭಿವೃದ್ಧಿ ಮತ್ತು ದೇಶದ ಜನರ ಅಭಿವೃದ್ಧಿಗಾಗಿ ಬದ್ಧರಾಗಿರುವ ಪಕ್ಷಕ್ಕೆ ಮತ ನೀಡುವುದು ನಿಮ್ಮ ಜವಾಬ್ದಾರಿ.

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago