ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಕುರಿ ಸಾಕಾಣಿಕೆ ಮಾಡುವವರಿಗೆ ಇರುವ ಸಬ್ಸಿಡಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದ್ದೇವು.
Thank you for reading this post, don't forget to subscribe!ಈ ಅಂಕಣದಲ್ಲಿ ನಾವು ತೋಟಗಾರಿಕಾ ಇಲಾಖೆ ವತಿಯಿಂದ ಸಿಗಲಿರುವ ಮಹತ್ವದ ಸಬ್ಸಿಡಿಗಳಾದ ಪವರ್ ಟಿಲ್ಲರ್,ರೋಟೋವೇಟರ್,ಮಿನಿ ಟ್ರ್ಯಾಕ್ಟರ್ ಸಬ್ಸಿಡಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಬೆಳೆ ವಿಮೆ: ರಾಜ್ಯದ 17.61 ಲಕ್ಷ ರೈತರಿಗೆ 2021.75 ಕೋಟಿ ರೂ. ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ ಚೆಕ್ ಮಾಡಿ!
ಆತ್ಮೀಯ ರೈತರೇ ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗೆ ತಂತ್ರಜ್ಞಾನದ ಮೊರೆ ಹೋಗುತ್ತಿದ್ದೂ, ಇದು ಇತ್ತೀಚಿನ ಹಲವು ಯೋಜನೆಗಳಲ್ಲಿ ನಿಮ್ಮ ಗಮನಕ್ಕೆ ಬಂದಿರಬಹುದು.
ಇನ್ನು ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಈ ಸಮಸ್ಯೆಗೆ ಪರಿಹಾರವಾಗಿ ಕೃಷಿ ವಿಜ್ಞಾನಿಗಳು ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರಿಗಾಗಿ ಹಲವು ಯಂತ್ರೋಪಕರಣಗಳನ್ನು ಕಂಡು ಹಿಡಿದಿದ್ದಾರೆ. ಇದರಲ್ಲಿ ಪ್ರಮುಖವಾದ ಯಂತ್ರೋಪಕರಣಗಳು ಎಂದರೆ ಅದು ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೊಟೊವೇಟರ್.
ಇದನ್ನೂ ಓದಿ: PM Kisan: ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದು ಹೇಗೆ?
ಹೌದು ರೈತ ಮಿತ್ರರೇ, ಈ ಯಂತ್ರೋಪಕರಣಗಳು ಬಂದ ನಂತರ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರ ಆದಾಯ ಹೆಚ್ಚಿದ್ದು, ಅವರ ಇನ್ನಿತರ ಕೆಲಸದ ಆಳುಗಳ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಈ ಕಾರಣದಿಂದ ಸರ್ಕಾರವೂ ರೈತರಿಗೆ ಹೆಚ್ಚು ಹೆಚ್ಚು ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ಬಳಸುವಂತೆ ಪ್ರೇರೇಪಣೆ ನೀಡಲು ಸಬ್ಸಿಡಿ (Mini tractor subsidy) ನೀಡುತ್ತಿದೆ.
ಇದೀಗ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ಖರೀದಿಸಲು ಬಯಸುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ರೈತರಿಗೆ ಶೇಕಡಾ 90 ರಷ್ಟು ಸಬ್ಸಿಡಿ ಆಧಾರದಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಯಾವ ಯಂತ್ರೋಪಕರಣದ ಮೇಲೆ ಎಷ್ಟು ಸಬ್ಸಿಡಿ?
ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ನೀಡಿರುವ ಸೂಚನೆಯಂತೆ ರಾಜ್ಯ ಸರ್ಕಾರವು ಇದೀಗ ರೈತರಿಗೆ ಯಂತ್ರೋಪಕರಣಗಳನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತಿದೆ. ಅಂತೆಯೇ ಇದೀಗ ತೋಟಗಾರಿಕಾ ಇಲಾಖೆ ಯಂತ್ರೋಪಕರಣಗಳ ಮೇಲೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ. ಸಬ್ಸಿಡಿಗಳ ಮಾಹಿತಿ ಇಲ್ಲಿದೆ ನೋಡಿ.
1.ಪವರ್ ಟಿಲ್ಲರ್ : ಇದರ ಮೇಲೆ ರಾಜ್ಯ ಸರ್ಕಾರವು ಶೇಕಡಾ 50 ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು 75,200 ರೂಪಾಯಿವರೆಗೆ ಸಹಾಯಧನವನ್ನು ಪಡೆಯಬಹುದು.
2. ಟ್ರಾಕ್ಟರ್ ಚಾಲಿತ ಎಂಬಿ ಪ್ಲೋ: ಸಾಮಾನ್ಯ ವರ್ಗದವರಿಗೆ 14,100 ರೂ, ರಿವರ್ಸಿಬಲ್ ಎಂ.ಬಿ. ಫ್ಲೋ ಗೆ 25,800 ರೂ ಸಬ್ಸಿಡಿ ದೊರೆಯುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಎಂ.ಬಿ. ಫ್ಲೋ 25,830 ರೂ ರಿವರ್ಸಿಬಲ್ ಎಂ.ಬಿ. ಫ್ಲೋ ಗೆ 51,300 ರೂ ಅರ್ಥಿಕ ನೆರವು ಪಡೆಯಬಹುದು.
3. ಮಿನಿ ಟ್ರಾಕ್ಟರ್: ಇದರ ಮೇಲೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 3 ಲಕ್ಷದವರೆಗೆ ಸಬ್ಸಿಡಿ ನೀಡುತ್ತಿದೆ. ಇನ್ನು ಸಾಮಾನ್ಯ ವರ್ಗದ ಜನರಿಗೆ 75,000 ರೂಪಾಯಿ ಸಹಾಯಧನ ನೀಡುತ್ತಿದೆ.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?
- ಅರ್ಜಿ ನಮೂನೆ
- ಹೊಲದ ಉತಾರಿ
- ಆಧಾರ್ ಕಾರ್ಡ್ ಝಾರಕ್ಸ್
- ಪಾಸ್ ಬುಕ್ ಝೆರಾಕ್ಸ್
- ಇತ್ತೀಚಿನ ಭಾವಚಿತ್ರ
- ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮಾತ್ರ)
- ರೇಷನ್ ಕಾರ್ಡ್
- ಭೂ ಹಿಡುವಳಿ ಪತ್ರ
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಅರ್ಜಿ ಸಲ್ಲಿಸಿ ಸಬ್ಸಿಡಿ ಪಡೆಯಿರಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿCheck your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು, ರೈತರು ತಮ್ಮ ಬಳಿಯಿರುವ ಫೋನ್ ನಲ್ಲೇ ಆಕಾರಬಂದ್ ಚೆಕ್ ಮಾಡಬಹುದು.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
- ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
- 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
- ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ತುಂತುರು ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೈತರಿಗೆ ಭರ್ಜರಿ ಅವಕಾಶ ಲಭ್ಯವಾಗಿದೆ. ಕೃಷಿ ಇಲಾಖೆಯ ವತಿಯಿಂದ ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಿಂದ ನೀರಿನ ವ್ಯರ್ಥ ಕಡಿಮೆಯಾಗುವುದರ ಜೊತೆಗೆ ಬೆಳೆಗಳ ಉತ್ಪಾದಕತೆ ಹೆಚ್ಚಾಗಲಿದೆ. ಸಣ್ಣ ಹಾಗೂ ಅತಿಸಣ್ಣ ರೈತರಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೋಜನೆಗೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಕಡಿಮೆ ವೆಚ್ಚದಲ್ಲಿ ಆಧುನಿಕ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.










