ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಕುರಿ ಸಾಕಾಣಿಕೆ ಮಾಡುವವರಿಗೆ ಇರುವ ಸಬ್ಸಿಡಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದ್ದೇವು.
Thank you for reading this post, don't forget to subscribe!ಈ ಅಂಕಣದಲ್ಲಿ ನಾವು ತೋಟಗಾರಿಕಾ ಇಲಾಖೆ ವತಿಯಿಂದ ಸಿಗಲಿರುವ ಮಹತ್ವದ ಸಬ್ಸಿಡಿಗಳಾದ ಪವರ್ ಟಿಲ್ಲರ್,ರೋಟೋವೇಟರ್,ಮಿನಿ ಟ್ರ್ಯಾಕ್ಟರ್ ಸಬ್ಸಿಡಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಬೆಳೆ ವಿಮೆ: ರಾಜ್ಯದ 17.61 ಲಕ್ಷ ರೈತರಿಗೆ 2021.75 ಕೋಟಿ ರೂ. ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ ಚೆಕ್ ಮಾಡಿ!
ಆತ್ಮೀಯ ರೈತರೇ ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗೆ ತಂತ್ರಜ್ಞಾನದ ಮೊರೆ ಹೋಗುತ್ತಿದ್ದೂ, ಇದು ಇತ್ತೀಚಿನ ಹಲವು ಯೋಜನೆಗಳಲ್ಲಿ ನಿಮ್ಮ ಗಮನಕ್ಕೆ ಬಂದಿರಬಹುದು.
ಇನ್ನು ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಈ ಸಮಸ್ಯೆಗೆ ಪರಿಹಾರವಾಗಿ ಕೃಷಿ ವಿಜ್ಞಾನಿಗಳು ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರಿಗಾಗಿ ಹಲವು ಯಂತ್ರೋಪಕರಣಗಳನ್ನು ಕಂಡು ಹಿಡಿದಿದ್ದಾರೆ. ಇದರಲ್ಲಿ ಪ್ರಮುಖವಾದ ಯಂತ್ರೋಪಕರಣಗಳು ಎಂದರೆ ಅದು ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೊಟೊವೇಟರ್.
ಇದನ್ನೂ ಓದಿ: PM Kisan: ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದು ಹೇಗೆ?
ಹೌದು ರೈತ ಮಿತ್ರರೇ, ಈ ಯಂತ್ರೋಪಕರಣಗಳು ಬಂದ ನಂತರ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರ ಆದಾಯ ಹೆಚ್ಚಿದ್ದು, ಅವರ ಇನ್ನಿತರ ಕೆಲಸದ ಆಳುಗಳ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಈ ಕಾರಣದಿಂದ ಸರ್ಕಾರವೂ ರೈತರಿಗೆ ಹೆಚ್ಚು ಹೆಚ್ಚು ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ಬಳಸುವಂತೆ ಪ್ರೇರೇಪಣೆ ನೀಡಲು ಸಬ್ಸಿಡಿ (Mini tractor subsidy) ನೀಡುತ್ತಿದೆ.
ಇದೀಗ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ಖರೀದಿಸಲು ಬಯಸುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ರೈತರಿಗೆ ಶೇಕಡಾ 90 ರಷ್ಟು ಸಬ್ಸಿಡಿ ಆಧಾರದಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಯಾವ ಯಂತ್ರೋಪಕರಣದ ಮೇಲೆ ಎಷ್ಟು ಸಬ್ಸಿಡಿ?
ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ನೀಡಿರುವ ಸೂಚನೆಯಂತೆ ರಾಜ್ಯ ಸರ್ಕಾರವು ಇದೀಗ ರೈತರಿಗೆ ಯಂತ್ರೋಪಕರಣಗಳನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತಿದೆ. ಅಂತೆಯೇ ಇದೀಗ ತೋಟಗಾರಿಕಾ ಇಲಾಖೆ ಯಂತ್ರೋಪಕರಣಗಳ ಮೇಲೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ. ಸಬ್ಸಿಡಿಗಳ ಮಾಹಿತಿ ಇಲ್ಲಿದೆ ನೋಡಿ.
1.ಪವರ್ ಟಿಲ್ಲರ್ : ಇದರ ಮೇಲೆ ರಾಜ್ಯ ಸರ್ಕಾರವು ಶೇಕಡಾ 50 ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು 75,200 ರೂಪಾಯಿವರೆಗೆ ಸಹಾಯಧನವನ್ನು ಪಡೆಯಬಹುದು.
2. ಟ್ರಾಕ್ಟರ್ ಚಾಲಿತ ಎಂಬಿ ಪ್ಲೋ: ಸಾಮಾನ್ಯ ವರ್ಗದವರಿಗೆ 14,100 ರೂ, ರಿವರ್ಸಿಬಲ್ ಎಂ.ಬಿ. ಫ್ಲೋ ಗೆ 25,800 ರೂ ಸಬ್ಸಿಡಿ ದೊರೆಯುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಎಂ.ಬಿ. ಫ್ಲೋ 25,830 ರೂ ರಿವರ್ಸಿಬಲ್ ಎಂ.ಬಿ. ಫ್ಲೋ ಗೆ 51,300 ರೂ ಅರ್ಥಿಕ ನೆರವು ಪಡೆಯಬಹುದು.
3. ಮಿನಿ ಟ್ರಾಕ್ಟರ್: ಇದರ ಮೇಲೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 3 ಲಕ್ಷದವರೆಗೆ ಸಬ್ಸಿಡಿ ನೀಡುತ್ತಿದೆ. ಇನ್ನು ಸಾಮಾನ್ಯ ವರ್ಗದ ಜನರಿಗೆ 75,000 ರೂಪಾಯಿ ಸಹಾಯಧನ ನೀಡುತ್ತಿದೆ.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?
- ಅರ್ಜಿ ನಮೂನೆ
- ಹೊಲದ ಉತಾರಿ
- ಆಧಾರ್ ಕಾರ್ಡ್ ಝಾರಕ್ಸ್
- ಪಾಸ್ ಬುಕ್ ಝೆರಾಕ್ಸ್
- ಇತ್ತೀಚಿನ ಭಾವಚಿತ್ರ
- ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮಾತ್ರ)
- ರೇಷನ್ ಕಾರ್ಡ್
- ಭೂ ಹಿಡುವಳಿ ಪತ್ರ
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಅರ್ಜಿ ಸಲ್ಲಿಸಿ ಸಬ್ಸಿಡಿ ಪಡೆಯಿರಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
- Trump Warns Oman Over Hormuz Strait Mediation With IranAmid escalating tensions in the Strait of Hormuz, the United States has launched fresh strikes on Iran following alleged drone threats targeting American vessels. Explosions were reported near Bandar Abbas as regional security concerns continue to intensify.
- ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.
- ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj Mishra ರಾತ್ರೋರಾತ್ರಿ ಮುಂಬೈಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಒಳರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ.
- Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ.
- ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
- ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ, ಯೆಲ್ಲೂ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
- BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವಸರ್ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ.!ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಕುತೂಹಲ ಹೆಚ್ಚಾಗಿದೆ.
- Karnataka Politics: ಡಿ.ಕೆ ಶಿವಕುಮಾರ್ಗೆ ಪಟ್ಟಾಭಿಷೇಕದ ಜೊತೆ ಸಿದ್ದರಾಮಯ್ಯ ನಾಲ್ವರು ಆಪ್ತರಿಗೆ ಡಿಸಿಎಂ ಹುದ್ದೆ ಸಾಧ್ಯತೆಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ನಾಯಕತ್ವ ಬದಲಾವಣೆ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ. ಡಿ.ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಪಟ್ಟಾಭಿಷೇಕ ಸಾಧ್ಯತೆ ಎನ್ನಲಾಗುತ್ತಿದ್ದರೆ, ಸಿದ್ದರಾಮಯ್ಯ ಆಪ್ತ ನಾಲ್ವರು ನಾಯಕರಿಗೆ ಡಿಸಿಎಂ ಹುದ್ದೆ ನೀಡುವ ಫಾರ್ಮುಲಾ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ. ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ!










