ಯಾವ ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ಮತ್ತು ಯಾವ ಯಾವ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಮಳೆ ಅಂದಾಜಿಗಿಂತ ಅಧಿಕವಾಗಿ ಸುರಿದಿದ್ದು ಈಗಾಗಲೇ ಸಾಕಷ್ಟು ರೈತರ ಬೆಳೆಗಳು ಹಾನಿಗೊಳಗಾಗಿವೆ. ಈ ಸಂದರ್ಭದಲ್ಲಿ ಹಿಂಗಾರು ಮಳೆ ಆರಂಭವಾಗಿದ್ದು, ಒಂದೆಡೆ ಇದು ರೈತರಿಗೆ ಖುಷಿ ತಂದರೆ ಮತ್ತೊಂದೆಡೆ ಬೆಳೆ ಹಾನಿಗೊಳಗಾದ ರೈತರಿಗೆ ಇದು ಸಂಕಷ್ಟ ತಂದೊಡ್ಡಿದೆ.
Thank you for reading this post, don't forget to subscribe!ಇನ್ನು ಹಿಂಗಾರು ಮಳೆ ಅಂದಾಜಿನಂತೆ ಆರಂಭವಾಗಿದ್ದು ಇಂದಿನಿಂದ ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ರೈತ ಮಿತ್ರರೇ, ರಾಜ್ಯದ ಹಲವೆಡೆ ಇಂದಿನಿಂದ 4 ದಿನ ಮಿಂಚು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ಮತ್ತು ಯಾವ ಯಾವ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ.
ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ಯೆಲ್ಲೋ ಅಲರ್ಟ್ ನೀಡಲಾಗಿತ್ತು. ಇನ್ನು ದಕ್ಷಿಣ ಕನ್ನಡ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮಳೆ ವ್ಯಾಪಿಸಿಕೊಳ್ಳುವ ಸಂಭವವಿದ್ದು, ಈ ಭಾಗದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೈಸೂರು, ಚಾಮರಾಜನಗರ ಜಿಲ್ಲೆಯ ಜತೆಗೆ ಮಂಡ್ಯ, ಹಾಸನ, ತುಮಕೂರು,ಕೊಡಗು, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉಳಿದ ಜಿಲ್ಲೆಗಳಲ್ಲಿ ಸಾಧರಣಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಇನ್ನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೆಳಗಾವಿ,ಧಾರವಾಡ,ಬಾಗಲಕೋಟೆ,ವಿಜಯಪುರ, ರಾಯಚೂರು ,ಕಲಬುರ್ಗಿ,ಯಾದಗಿರಿ ಸೇರಿದಂತೆ ಮುಂತಾದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ವರದಿ ನೀಡಲಾಗಿದೆ. ಈ ಭಾಗದ ಪ್ರದೇಶದಲ್ಲಿ ಕೆಲವೆಡೆ ಗುಡುಗು ಮಿಂಚು ಸಹಿತ ಭಾರಿ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…