ಪ್ರೀತಿಗೆ ಗಡಿ, ಭಾಷೆ, ಪ್ರಾಂತ್ಯಗಳ ಹಂಗಿಲ್ಲ ಎಂಬ ಮಾತು ಮತ್ತೇ ಮತ್ತೇ ಸಾಬೀತಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಪಾಕಿಸ್ತಾನದಿಂದ ಭಾರತಕ್ಕೆ ಪ್ರೇಮಿಯನ್ನು ಅರಸಿ ಬಂದು ಸೀಮಾ ಹೈದರ್ ಸುದ್ದಿ. ಕೆಲ ವರ್ಷಗಳ ಹಿಂದೆ ಭಾರತದಿಂದ ಅಂಜು ಎಂಬಾಕೆ ಪಾಕಿಸ್ತಾನಕ್ಕೆ ಹೋಗಿ ಪ್ರಿಯಕರನ ಸೇರಿದ್ದಳು.ಇದೀಗ ಅದೇ ರೀತಿ ಪಾಕಿಸ್ತಾನದ ಮಹಿಳೆಯೊಬ್ಬರು ಭಾರತಕ್ಕೆ ಬಂದು ಪ್ರಿಯಕರನ ಸೇರಿದ್ದಾರೆ.
ಪ್ರೀತಿಗೆ ಗಡಿ, ಭಾಷೆ, ಪ್ರಾಂತ್ಯಗಳ ಹಂಗಿಲ್ಲ ಎಂಬ ಮಾತು ಮತ್ತೇ ಮತ್ತೇ ಸಾಬೀತಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಪಾಕಿಸ್ತಾನದಿಂದ ಭಾರತಕ್ಕೆ ಪ್ರೇಮಿಯನ್ನು ಅರಸಿ ಬಂದು ಸೀಮಾ ಹೈದರ್ ಸುದ್ದಿ. ಕೆಲ ವರ್ಷಗಳ ಹಿಂದೆ ಭಾರತದಿಂದ ಅಂಜು ಎಂಬಾಕೆ ಪಾಕಿಸ್ತಾನಕ್ಕೆ ಹೋಗಿ ಪ್ರಿಯಕರನ ಸೇರಿದ್ದಳು.ಇದೀಗ ಅದೇ ರೀತಿ ಪಾಕಿಸ್ತಾನದ ಮಹಿಳೆಯೊಬ್ಬರು ಭಾರತಕ್ಕೆ ಬಂದು ಪ್ರಿಯಕರನ ಸೇರಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ ಪಾಕಿಸ್ತಾನದ ಕರಾಚಿ ನಿವಾಸಿ ಜವೇರಿಯಾ ಖಾನುಮ್ ಎಂಬಾಕೆ ಅಮೃತಸರ ಜಿಲ್ಲೆಯ ಅಟ್ಟಾರಿಯಿಂದ ಭಾರತಕ್ಕೆ ಬಂದಿದ್ದಾರೆ. ಆಕೆ ತನ್ನ ಪ್ರಿಯಕರ ಕೋಲ್ಕತ್ತಾದ ಸಮೀರ್ ಖಾನ್ನನ್ನು ಸೇರಿದ್ದಾಳೆ. ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಬಂದಿದ್ದು, ಕೋಲ್ಕತ್ತಾ ನಿವಾಸಿ ಸಮೀರ್ನನ್ನು ಮುಂದಿನ ವರ್ಷದ ಜನವರಿಯಲ್ಲಿ ಮದುವೆಯಾಗಲಿದ್ದಾರೆ.
ಈ ಕಾರಣಕ್ಕಾಗಿ ಖಾನುಮ್ಗೆ 45 ದಿನಗಳ ವೀಸಾವನ್ನು ನೀಡಲಾಗಿದೆ. ಕೋವಿಡ್ ಸಾಂಕ್ರಾಮಿಕವು ಭಾರತಕ್ಕೆ ಬರುವ ಆಕೆಯ ಯೋಜನೆಗೆ ಐದು ವರ್ಷಗಳ ಕಾಲ ಅಡ್ಡಗಾಲಾಗಿತ್ತು. ಮುಂದಿನ ವರ್ಷ ಜನವರಿಯಲ್ಲಿ ನಾವು ಮದುವೆಯಾಗುತ್ತೇವೆ ಎಂದು ಮಾಧ್ಯಮಗಳಿಗೆ ಜೋಡಿ ಪ್ರತಿಕ್ರಿಯಿಸಿದೆ.
“ನನಗೆ 45 ದಿನಗಳ ವೀಸಾ ನೀಡಲಾಗಿದೆ. ನಾನು ಇಲ್ಲಿಗೆ ಬಂದಿದ್ದಕ್ಕೆ ತುಂಬಾ ಸಂತೋಷವಾಗಿದೆ. ಆಗಮನದ ನಂತರ ನಾನು ಇಲ್ಲಿ ತುಂಬಾ ಪ್ರೀತಿಯನ್ನು ಪಡೆಯುತ್ತಿದ್ದೇನೆ. ಐದು ವರ್ಷದ ನಂತರ ನನಗೆ ವೀಸಾ ಸಿಕ್ಕಿದೆ. ಇದನ್ನು ನಂಬಲಾಗುತ್ತಿಲ್ಲ” ಎಂದು ಖಾನುಮ್ ತಿಳಿಸಿದ್ದಾರೆ.
“2018 ರ ಸಂದರ್ಭದಲ್ಲಿ ಆಕೆ ಮೇಲೆ ನನಗೆ ಪ್ರೀತಿಯಾಯಿತು. ಜರ್ಮನಿಯಲ್ಲಿ ಓದುತ್ತಿದ್ದ ನಾನು ಭಾರತಕ್ಕೆ ವಾಪಸ್ ಬಂದೆ. ನನ್ನ ತಾಯಿಯ ಫೋನ್ನಲ್ಲಿ ಅವಳ ಫೋಟೋವನ್ನು ನೋಡಿದೆ. ನಾನು ಜವೇರಿಯಾಳನ್ನು ಮದುವೆಯಾಗುತ್ತೇನೆಂದು ನನ್ನ ತಾಯಿಗೆ ಹೇಳಿದೆ” ಎಂದು ಪ್ರಿಯಕರ ಸಮೀರ್ ಖಾನ್ ತಿಳಿಸಿದ್ದಾರೆ. ಹೀಗೆ ಕಾಲ ಕಾಲಕ್ಕೆ ಪ್ರೀತಿಯು ತನ್ನ ಮಹಿಮೆಯನ್ನು ಹಲವು ರೀತಿಯಲ್ಲಿ ತೋರಿಸುತ್ತಲೇ ಇರುತ್ತದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಈ ಸುದ್ದಿ ಇಡೀ ಇಂಟರ್ನೆಟ್ ಅನ್ನೆ ಅಲುಗಾಡಿಸುತ್ತಿದೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…