CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
ವೃತ್ತಿಪರ ಕೋರ್ಸ್ಗಳ (Professional Courses) ಪ್ರವೇಶಾತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ಸರ್ಕಾರಿ ಕೋಟಾದ ಸೀಟುಗಳನ್ನು ಪಡೆದ ನಂತರವೂ ಕೆಲವು ಖಾಸಗಿ ಕಾಲೇಜುಗಳು ಕಾನೂನು ಬಾಹಿರವಾಗಿ ಹೆಚ್ಚಿನ ಶುಲ್ಕಕ್ಕೆ ಬೇಡಿಕೆ ಇಡುತ್ತಿರುವ ದೂರುಗಳು ಕೇಳಿಬರುತ್ತಿವೆ.
Thank you for reading this post, don't forget to subscribe!ಇದಕ್ಕೆ ಬ್ರೇಕ್ ಹಾಕಲು ಶುಲ್ಕ ನಿಯಂತ್ರಣ ಸಮಿತಿ (Fee Regulatory Committee) ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ.
ಸರ್ಕಾರ ನಿಗದಿಪಡಿಸಿದ ಮೊತ್ತಕ್ಕಿಂತ ಒಂದು ರೂಪಾಯಿ ಜಾಸ್ತಿ ಕೇಳಿದರೂ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿದ್ಯಾರ್ಥಿಗಳು ನೇರವಾಗಿ ದೂರು ದಾಖಲಿಸಬಹುದು ಎಂದು ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ
ಯಾರೆಲ್ಲಾ ದೂರು ನೀಡಬಹುದು?
ಇದು ಕೇವಲ ಹೊಸದಾಗಿ ಅಡ್ಮಿಷನ್ ಪಡೆಯುತ್ತಿರುವವರಿಗೆ ಮಾತ್ರವಲ್ಲ!
ಮುಂಬರುವ ದಿನಗಳಲ್ಲಿ ವೃತ್ತಿಪರ ಕೋರ್ಸ್ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು.
ಈಗಾಗಲೇ ಕಾಲೇಜು ಸೇರಿ, ಹೆಚ್ಚಿನ ಶುಲ್ಕದ ಕಿರುಕುಳ ಅನುಭವಿಸುತ್ತಿರುವ ಹಳೇ ವಿದ್ಯಾರ್ಥಿಗಳು.
ಯಾವೆಲ್ಲಾ ಕಾಲೇಜುಗಳಿಗೆ ಇದು ಅನ್ವಯ?
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಸೀಟು ಹಂಚಿಕೆಯಾಗುವ ರಾಜ್ಯದ ಎಲ್ಲಾ ಖಾಸಗಿ ವೃತ್ತಿಪರ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳು ಈ ವ್ಯಾಪ್ತಿಗೆ ಒಳಪಡುತ್ತವೆ. ಇದರಲ್ಲಿ ಅನುದಾನಿತ, ಅನುದಾನ ರಹಿತ ಹಾಗೂ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳೂ ಸೇರಿವೆ. ಈ ಯಾವುದೇ ಸಂಸ್ಥೆಗಳು ಸರ್ಕಾರ ನಿಗದಿಪಡಿಸಿದ ಅಧಿಕೃತ ಫೀಸ್ ಹೊರತುಪಡಿಸಿ, ಇತರೆ ಯಾವುದೇ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ.
ದೂರು ನೀಡಬೇಕಾದ ವಿಳಾಸ ಇಲ್ಲಿದೆ:
ಹೆಚ್ಚುವರಿ ಶುಲ್ಕದ ಹಾವಳಿಯಿಂದ ನೊಂದ ವಿದ್ಯಾರ್ಥಿಗಳು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಮಿತಿಯ ಕಚೇರಿಗೆ ನೇರವಾಗಿ ಭೇಟಿ ನೀಡಿ ದೂರು ಸಲ್ಲಿಸಬಹುದು.
ವಿಳಾಸ: ಶುಲ್ಕ ನಿಯಂತ್ರಣ ಸಮಿತಿ ಕಚೇರಿ, ನೆಲಮಹಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಟ್ಟಡ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…