ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈಗಾಗಲೇ ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗಾಗಿ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (pm kisan yojana) ಬಗ್ಗೆ ನಿಮಗೆಲ್ಲ ತಿಳಿದಿದೆ.
Thank you for reading this post, don't forget to subscribe!ಆದರೆ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಹೇಳ ಹೊರಟಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ.
ಇದನ್ನೂ ಓದಿ: Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !
ಹೌದು ಸ್ನೇಹಿತರೆ ಪ್ರಧಾನಿ ಮೋದಿಯವರ ಈ ಮಹತ್ವಾಕಾಂಕ್ಷಿ ಯೋಜನೆಯ ಮೂಲಕ ವೃದ್ಧ್ಯಾಪ್ಯದಲ್ಲಿರುವ ರೈತರಿಗೆ ಹಾಗೂ ಇತರೆ ನಾಗರಿಕರಿಗೆ ಯಾರ ಹಂಗಿಲ್ಲದೆ ಸ್ವಂತ ಖರ್ಚಿನಲ್ಲಿ ಇಳಿ ವಯಸ್ಸನ್ನು ಕಳೆಯಲು 60 ವರ್ಷ ದಾಟಿದ ವೃದ್ಧರಿಗೆ ಪ್ರತಿ ತಿಂಗಳು ಸಹಾಯವಾಗಲಿ ಎಂದು 3,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ.
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (pm kisan mandhan yojana) ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.
ಹಾಗಾದರೆ ಈ ಯೋಜನೆಗೆ ಯಾರು ಯಾರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಏನಿದು ಪಿಎಂ ಕಿಸಾನ್ ಮಾನ್ ಧನ್ ಯೋಜನೆ?
ರೈತ ಮಿತ್ರರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಮೂಲಕ ಹದಿ ಹರೆಯದ ಯೌವ್ವನದಲ್ಲಿ ಕಷ್ಟಪಟ್ಟು ದುಡಿದು ಹಣ್ಣಾದ ರೈತರಿಗೆ, ಇಳಿ ವಯಸ್ಸಿನಲ್ಲಿ ಮಕ್ಕಳು ಮನೆಯಿಂದ ಹೊರಗೆ ಹಾಕಿದರೆ ಯಾರ ಹಂಗಿಲ್ಲದೆ ಬದುಕಲು ರೈತರಿಗೆ ಹಾಗೂ ಇತರೆ ನಾಗರಿಕರಿಗೆ ಪ್ರತಿ ತಿಂಗಳು 3,000 ರೂಪಾಯಿ ಹಣವನ್ನು ಪಿಂಚಣಿಯ ರೂಪದಲ್ಲಿ ನೀಡುತ್ತಿದೆ.
ಯಾರು ಯಾರು ಅರ್ಜಿ ಸಲ್ಲಿಸಬಹುದು?
ಇನ್ನು ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ:-
- ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸು 20 ರಿಂದ 42 ಆಗಿರಬೇಕು.
- ಅರ್ಜಿ ಸಲ್ಲಿಸುವವರು ತಿಂಗಳ ಆದಾಯ 15,000 ರೂ. ಗಿಂತ ಹೆಚ್ಚಿರಬಾರದು
- ಅರ್ಜಿ ಸಲ್ಲಿಸುವವರು 2 ಹೆಕ್ಟೇರ್ (5 ಎಕರೆ) ಗಿಂತ ಹೆಚ್ಚಿನ ಭೂಮಿಯನ್ನು ಹೊಂದಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ?
ಇನ್ನು ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ಎಂದರೆ:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಐಡೆಂಟಿಟಿ ಕಾರ್ಡ್
- ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಗೊತ್ತಾಗದಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಅಥವಾ ಯಾವುದಾದರೂ ನೆಟ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಿ.
ಈ ಯೋಜನೆಯ ಲಾಭ ಏನು ?
ಅರ್ಜಿ ಸಲ್ಲಿಸಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಯಿಂದ 55 ರೂಪಾಯಿಯಿಂದ 200 ರೂಪಾಯಿ ಹಣ ನಿಮ್ಮ ವಯಸ್ಸಿನ ಅನುಗುಣವಾಗಿ ನಿಮ್ಮ ಬ್ಯಾಂಕ್ ನಿಂದ ಕಟ್ ಆಗುತ್ತದೆ.
42 ನೇ ವಯಸ್ಸಿಗೆ ಬರುವಷ್ಟರಲ್ಲಿ ಒಟ್ಟು 27,000 ರೂಪಾಯಿ ಹಣವನ್ನು ನೀವು ಕಟ್ಟಿದಂತಾಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಪ್ರತಿ ತಿಂಗಳು ನೀವು ಕಟ್ಟುವ ಹಣದಷ್ಟೇ ಕೂಡಿಸಿ ವೃದ್ಧಾಪ್ಯದಲ್ಲಿ ಅಂದರೆ ನಿಮಗೆ 60 ವರ್ಷ ವಯಸ್ಸು ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣವನ್ನು ಜಮಾ ಮಾಡುತ್ತದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಕೇಂದ್ರ ಸರ್ಕಾರ ಹೀಗೆ ಪ್ರತಿ ತಿಂಗಳು 3,000 ರೂಪಾಯಿಯನ್ನು ನೀವು ಸಾಯುವವರೆಗೂ ನಿಮ್ಮ ಖಾತೆಗೆ ಜಮಾ ಮಾಡುತ್ತಲೇ ಇರುತ್ತದೆ. ನೀವು ಕಟ್ಟಿರುವ 27,000 ರೂಪಾಯಿ ಹಣ 60 ವರ್ಷ ದಾಟಿದ ನಂತರ ಕೇವಲ ಒಂದು ವರ್ಷದಲ್ಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಮುಂದೆ ನೀವು ಎಷ್ಟು ವರ್ಷ ಬದುಕುತ್ತಿರೋ ಅಲ್ಲಿಯವರೆಗೆ ಬರುವ ಹಣ ನಿಮಗೆ ಲಾಭವೇ ಸರಿ.
ಹಾಗಾದರೆ ಮತ್ತೇಕೆ ತಡ ಈಗಲೇ ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಯಾವುದಾದರೂ ಕಂಪ್ಯೂಟರ್ ಸೆಂಟರ್ ಗೆ ಹೋಗಿ ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಜಾಲತಾಣಕ್ಕೆ ಭೇಟಿ ನೀಡಿ.
https://maandhan.in/
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಬಯಸಿದ್ದರೆ ಈಗ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಆಕಾರಬಂದ್ (akarband download) ಚೆಕ್ ಮಾಡಬಹುದು.
- ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ. ಕರ್ನಾಟಕ ಕೃಷಿ ಸುದ್ದಿ 2026.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
- ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
- ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ
- ಗೃಹಲಕ್ಷ್ಮೀ 29ನೇ ಕಂತಿನ ಹಣ ಬಿಡುಗಡೆ ನಿಮಗೆ ಜಮೆಯಾಯಿತೇ ಇಲ್ಲೇ ಚೆಕ್ ಮಾಡಿಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ₹2000 ಹಣ ಬಿಡುಗಡೆ ಆಗಿದೆ. ನಿಮ್ಮ ಖಾತೆಗೆ ಜಮೆಯಾಯಿತೇ ಇಲ್ಲವೇ ಎಂದು ಆನ್ಲೈನ್ನಲ್ಲಿ ಹೇಗೆ ಚೆಕ್ ಮಾಡುವುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.













