ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈಗಾಗಲೇ ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗಾಗಿ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (pm kisan yojana) ಬಗ್ಗೆ ನಿಮಗೆಲ್ಲ ತಿಳಿದಿದೆ.
Thank you for reading this post, don't forget to subscribe!ಆದರೆ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಹೇಳ ಹೊರಟಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ.
ಹೌದು ಸ್ನೇಹಿತರೆ ಪ್ರಧಾನಿ ಮೋದಿಯವರ ಈ ಮಹತ್ವಾಕಾಂಕ್ಷಿ ಯೋಜನೆಯ ಮೂಲಕ ವೃದ್ಧ್ಯಾಪ್ಯದಲ್ಲಿರುವ ರೈತರಿಗೆ ಹಾಗೂ ಇತರೆ ನಾಗರಿಕರಿಗೆ ಯಾರ ಹಂಗಿಲ್ಲದೆ ಸ್ವಂತ ಖರ್ಚಿನಲ್ಲಿ ಇಳಿ ವಯಸ್ಸನ್ನು ಕಳೆಯಲು 60 ವರ್ಷ ದಾಟಿದ ವೃದ್ಧರಿಗೆ ಪ್ರತಿ ತಿಂಗಳು ಸಹಾಯವಾಗಲಿ ಎಂದು 3,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ.
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (pm kisan mandhan yojana) ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.
ಹಾಗಾದರೆ ಈ ಯೋಜನೆಗೆ ಯಾರು ಯಾರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ರೈತ ಮಿತ್ರರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಮೂಲಕ ಹದಿ ಹರೆಯದ ಯೌವ್ವನದಲ್ಲಿ ಕಷ್ಟಪಟ್ಟು ದುಡಿದು ಹಣ್ಣಾದ ರೈತರಿಗೆ, ಇಳಿ ವಯಸ್ಸಿನಲ್ಲಿ ಮಕ್ಕಳು ಮನೆಯಿಂದ ಹೊರಗೆ ಹಾಕಿದರೆ ಯಾರ ಹಂಗಿಲ್ಲದೆ ಬದುಕಲು ರೈತರಿಗೆ ಹಾಗೂ ಇತರೆ ನಾಗರಿಕರಿಗೆ ಪ್ರತಿ ತಿಂಗಳು 3,000 ರೂಪಾಯಿ ಹಣವನ್ನು ಪಿಂಚಣಿಯ ರೂಪದಲ್ಲಿ ನೀಡುತ್ತಿದೆ.
ಇನ್ನು ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ:-
ಇನ್ನು ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ಎಂದರೆ:
ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಗೊತ್ತಾಗದಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಅಥವಾ ಯಾವುದಾದರೂ ನೆಟ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಯಿಂದ 55 ರೂಪಾಯಿಯಿಂದ 200 ರೂಪಾಯಿ ಹಣ ನಿಮ್ಮ ವಯಸ್ಸಿನ ಅನುಗುಣವಾಗಿ ನಿಮ್ಮ ಬ್ಯಾಂಕ್ ನಿಂದ ಕಟ್ ಆಗುತ್ತದೆ.
42 ನೇ ವಯಸ್ಸಿಗೆ ಬರುವಷ್ಟರಲ್ಲಿ ಒಟ್ಟು 27,000 ರೂಪಾಯಿ ಹಣವನ್ನು ನೀವು ಕಟ್ಟಿದಂತಾಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಪ್ರತಿ ತಿಂಗಳು ನೀವು ಕಟ್ಟುವ ಹಣದಷ್ಟೇ ಕೂಡಿಸಿ ವೃದ್ಧಾಪ್ಯದಲ್ಲಿ ಅಂದರೆ ನಿಮಗೆ 60 ವರ್ಷ ವಯಸ್ಸು ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣವನ್ನು ಜಮಾ ಮಾಡುತ್ತದೆ.
ಕೇಂದ್ರ ಸರ್ಕಾರ ಹೀಗೆ ಪ್ರತಿ ತಿಂಗಳು 3,000 ರೂಪಾಯಿಯನ್ನು ನೀವು ಸಾಯುವವರೆಗೂ ನಿಮ್ಮ ಖಾತೆಗೆ ಜಮಾ ಮಾಡುತ್ತಲೇ ಇರುತ್ತದೆ. ನೀವು ಕಟ್ಟಿರುವ 27,000 ರೂಪಾಯಿ ಹಣ 60 ವರ್ಷ ದಾಟಿದ ನಂತರ ಕೇವಲ ಒಂದು ವರ್ಷದಲ್ಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಮುಂದೆ ನೀವು ಎಷ್ಟು ವರ್ಷ ಬದುಕುತ್ತಿರೋ ಅಲ್ಲಿಯವರೆಗೆ ಬರುವ ಹಣ ನಿಮಗೆ ಲಾಭವೇ ಸರಿ.
ಹಾಗಾದರೆ ಮತ್ತೇಕೆ ತಡ ಈಗಲೇ ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಯಾವುದಾದರೂ ಕಂಪ್ಯೂಟರ್ ಸೆಂಟರ್ ಗೆ ಹೋಗಿ ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಜಾಲತಾಣಕ್ಕೆ ಭೇಟಿ ನೀಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…