PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈಗಾಗಲೇ ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗಾಗಿ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (pm kisan yojana) ಬಗ್ಗೆ ನಿಮಗೆಲ್ಲ ತಿಳಿದಿದೆ.

Thank you for reading this post, don't forget to subscribe!

ಆದರೆ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಹೇಳ ಹೊರಟಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ.

ಇದನ್ನೂ ಓದಿ: Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಹೌದು ಸ್ನೇಹಿತರೆ ಪ್ರಧಾನಿ ಮೋದಿಯವರ ಈ ಮಹತ್ವಾಕಾಂಕ್ಷಿ ಯೋಜನೆಯ ಮೂಲಕ ವೃದ್ಧ್ಯಾಪ್ಯದಲ್ಲಿರುವ ರೈತರಿಗೆ ಹಾಗೂ ಇತರೆ ನಾಗರಿಕರಿಗೆ ಯಾರ ಹಂಗಿಲ್ಲದೆ ಸ್ವಂತ ಖರ್ಚಿನಲ್ಲಿ ಇಳಿ ವಯಸ್ಸನ್ನು ಕಳೆಯಲು 60 ವರ್ಷ ದಾಟಿದ ವೃದ್ಧರಿಗೆ ಪ್ರತಿ ತಿಂಗಳು ಸಹಾಯವಾಗಲಿ ಎಂದು 3,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (pm kisan mandhan yojana) ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.

ಹಾಗಾದರೆ ಈ ಯೋಜನೆಗೆ ಯಾರು ಯಾರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ಪಿಎಂ ಕಿಸಾನ್ ಮಾನ್ ಧನ್ ಯೋಜನೆ?

ರೈತ ಮಿತ್ರರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಮೂಲಕ ಹದಿ ಹರೆಯದ ಯೌವ್ವನದಲ್ಲಿ ಕಷ್ಟಪಟ್ಟು ದುಡಿದು ಹಣ್ಣಾದ ರೈತರಿಗೆ, ಇಳಿ ವಯಸ್ಸಿನಲ್ಲಿ ಮಕ್ಕಳು ಮನೆಯಿಂದ ಹೊರಗೆ ಹಾಕಿದರೆ ಯಾರ ಹಂಗಿಲ್ಲದೆ ಬದುಕಲು ರೈತರಿಗೆ ಹಾಗೂ ಇತರೆ ನಾಗರಿಕರಿಗೆ ಪ್ರತಿ ತಿಂಗಳು 3,000 ರೂಪಾಯಿ ಹಣವನ್ನು ಪಿಂಚಣಿಯ ರೂಪದಲ್ಲಿ ನೀಡುತ್ತಿದೆ.

ಯಾರು ಯಾರು ಅರ್ಜಿ ಸಲ್ಲಿಸಬಹುದು?

ಇನ್ನು ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ:-

  • ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸು 20 ರಿಂದ 42 ಆಗಿರಬೇಕು.
  • ಅರ್ಜಿ ಸಲ್ಲಿಸುವವರು ತಿಂಗಳ ಆದಾಯ 15,000 ರೂ. ಗಿಂತ ಹೆಚ್ಚಿರಬಾರದು
  • ಅರ್ಜಿ ಸಲ್ಲಿಸುವವರು 2 ಹೆಕ್ಟೇರ್ (5 ಎಕರೆ) ಗಿಂತ ಹೆಚ್ಚಿನ ಭೂಮಿಯನ್ನು ಹೊಂದಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ?

ಇನ್ನು ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ಎಂದರೆ:

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಐಡೆಂಟಿಟಿ ಕಾರ್ಡ್
  • ಫೋಟೋ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಗೊತ್ತಾಗದಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಅಥವಾ ಯಾವುದಾದರೂ ನೆಟ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಿ.

ಈ ಯೋಜನೆಯ ಲಾಭ ಏನು ?

ಅರ್ಜಿ ಸಲ್ಲಿಸಿದ ನಂತರ  ಪ್ರತಿ ತಿಂಗಳು ನಿಮ್ಮ ಖಾತೆಯಿಂದ 55 ರೂಪಾಯಿಯಿಂದ 200 ರೂಪಾಯಿ ಹಣ ನಿಮ್ಮ ವಯಸ್ಸಿನ ಅನುಗುಣವಾಗಿ ನಿಮ್ಮ ಬ್ಯಾಂಕ್ ನಿಂದ ಕಟ್ ಆಗುತ್ತದೆ.

42 ನೇ ವಯಸ್ಸಿಗೆ ಬರುವಷ್ಟರಲ್ಲಿ  ಒಟ್ಟು 27,000 ರೂಪಾಯಿ ಹಣವನ್ನು ನೀವು ಕಟ್ಟಿದಂತಾಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಪ್ರತಿ ತಿಂಗಳು ನೀವು ಕಟ್ಟುವ ಹಣದಷ್ಟೇ ಕೂಡಿಸಿ ವೃದ್ಧಾಪ್ಯದಲ್ಲಿ ಅಂದರೆ ನಿಮಗೆ 60 ವರ್ಷ ವಯಸ್ಸು ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣವನ್ನು ಜಮಾ ಮಾಡುತ್ತದೆ.

ಇದನ್ನೂ ಓದಿ: ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಕೇಂದ್ರ ಸರ್ಕಾರ ಹೀಗೆ ಪ್ರತಿ ತಿಂಗಳು 3,000 ರೂಪಾಯಿಯನ್ನು ನೀವು ಸಾಯುವವರೆಗೂ ನಿಮ್ಮ ಖಾತೆಗೆ ಜಮಾ ಮಾಡುತ್ತಲೇ ಇರುತ್ತದೆ. ನೀವು ಕಟ್ಟಿರುವ 27,000 ರೂಪಾಯಿ ಹಣ 60 ವರ್ಷ ದಾಟಿದ ನಂತರ ಕೇವಲ ಒಂದು ವರ್ಷದಲ್ಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಮುಂದೆ ನೀವು ಎಷ್ಟು ವರ್ಷ ಬದುಕುತ್ತಿರೋ ಅಲ್ಲಿಯವರೆಗೆ ಬರುವ ಹಣ ನಿಮಗೆ ಲಾಭವೇ ಸರಿ.

ಹಾಗಾದರೆ ಮತ್ತೇಕೆ ತಡ ಈಗಲೇ ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಯಾವುದಾದರೂ ಕಂಪ್ಯೂಟರ್ ಸೆಂಟರ್ ಗೆ ಹೋಗಿ ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಿ.

ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಜಾಲತಾಣಕ್ಕೆ ಭೇಟಿ ನೀಡಿ.

https://maandhan.in/

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago