ಇವತ್ತಿನ ಈ ಅಂಕಣದಲ್ಲಿ ನಾವು ನಿಮಗೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಲಿಂಕ್ ಅಥವಾ ಅಪ್ಡೇಟ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ (PM KISAN SAMMAN NIDHI) ಯೋಜನೆಯ 18 ಕಂತುಗಳ ಹಣ ಈಗಾಗಲೇ ಅರ್ಹ ರೈತರ ಖಾತೆಗೆ ಜಮಾ ಆಗಿವೆ.
Thank you for reading this post, don't forget to subscribe!ಇನ್ನೂ ಹಲವು ರೈತರ ಖಾತೆಗೆ ಹಣ ಜಮಾ ಆಗಿಲ್ಲ. ಅಲ್ಲದೆ ಹಲವಾರು ರೈತರ ಖಾತೆಗೆ 18 ನೇ ಕಂತಿನ ಹಣ ಜಮಾ ಆಗಿದ್ದರು ಹಣ ಜಮಾ ಆಗಿರುವ ಮೆಸೇಜ್ ಬಂದಿಲ್ಲ. ಇದಕ್ಕೆ ಕಾರಣ ಹಲವಾರು. ನೀವು ನಿಮ್ಮ ಪಿಎಂ ಕಿಸಾನ್ ಖಾತೆಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡದೆ ಇರುವುದು ಪ್ರಮುಖ ಕಾರಣ.
ಇವತ್ತಿನ ಈ ಅಂಕಣದಲ್ಲಿ ನಾವು ನಿಮಗೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಲಿಂಕ್ ಅಥವಾ ಅಪ್ಡೇಟ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಅಪ್ಡೇಟ್ ಮೊಬೈಲ್ ನಂಬರ್ (Update Mobile Number) ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ಅಥವಾ ಆಧಾರ ಕಾರ್ಡ ನಂಬರ್ ಹಾಕಿ, ಕ್ಯಾಪ್ಚಾ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Get Adhar ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಪಿಎಂ ಕಿಸಾನ್ ಖಾತೆಗೆ ಲಿಂಕ್ ಇರುವ ಮೊಬೈಲ್ ನಂಬರ್ ಗೆ OTP ಬರುತ್ತದೆ. ಅದನ್ನು ನಮೂದಿಸಿ. Verify OTP ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಪಿಎಂ ಕಿಸಾನ್ ಖಾತೆಯ ಮಾಹಿತಿ ಸಿಗುತ್ತದೆ. ಕೆಳಗೆ ನೀಡಲಾಗಿರುವ Enter Your New Mobile Number (ನಿಮ್ಮ ಹೊಸ ಮೊಬೈಲ್ ನಂಬರ್ ಹಾಕಿ) ಬಾಕ್ಸ್ ನಲ್ಲಿ ನಿಮ್ಮ ಹೊಸ ಮೊಬೈಲ್ ನಂಬರ್ ಹಾಕಿ ಅದೇ ಸಂಖ್ಯೆಗೆ ಒಂದು OTP ಬರುತ್ತದೆ. ಅದನ್ನು ಹಾಕಿ Verify OTP ಮೇಲೆ ಕ್ಲಿಕ್ ಮಾಡಿ, ಕೊನೆಗೆ Click for Update Mobile Number ಮೇಲೆ ಕ್ಲಿಕ್ ಮಾಡಿ.
ನಂತರ ನಿಮಗೆ ಮೇಲಿನ ಚಿತ್ರದಲ್ಲಿ ತೋರಿಸಿದಂತೆ ನಿಮ್ಮ ಮೊಬೈಲ್ ನಂಬರ್ ಯಶಸ್ವಿಯಾಗಿ ಅಪ್ಡೇಟ್ ಮಾಡಲಾಗಿದೆ ಎಂಬ ಪಾಪ್ ಅಪ್ ಮೆಸೇಜ್ ಕಾಣಿಸುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲಿ ಕುಳಿತುಕೊಂಡೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಸುಲಭವಾಗಿ ಅಪ್ಡೇಟ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…