ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ (PM Kisan Samman Yojana) ಅಡಿಯಲ್ಲಿ ಲಾಭ ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳಿಂದ ಇದೀಗ ಕೇಂದ್ರ ಸರ್ಕಾರ ಹಣ ವಾಪಸ್ ತೆಗೆದುಕೊಳ್ಳುತ್ತಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಆರ್ಥಿಕವಾಗಿ ಹಿಂದುಳಿದ ಬಡ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿ ಎಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿತ್ತು.
ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ
ಈ ಯೋಜನೆ ಜಾರಿಗೆ ಬಂದ ಹೊಸದರಲ್ಲಿ ಆಧಾರ್ ತಿದ್ದುಪಡಿ ಹಾಗೂ ಜಮೀನಿನ ದಾಖಲೆಗಳ ತಿದ್ದುಪಡಿ ಮಾಡಿ ಅರ್ಜಿ ಸಲ್ಲಿಸಲು ರಾಜ್ಯ ಸರಕಾರಗಳಿಗೆ ಜವಾಬ್ದಾರಿ ನೀಡಿತ್ತು. ಆದರೆ ಕೇಂದ್ರ ಸರ್ಕಾರದ ಈ ಸಡಿಲಿಕೆಯನ್ನು ದುರುಪಯೋಗ ಪಡಿಸಿಕೊಂಡು ಹಲವು ಅನರ್ಹ ಫಲಾನುಭವಿಗಳು (PM Kisan Beneficiary List) ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದರು.
ಇದೀಗ ಕೇಂದ್ರ ಸರ್ಕಾರವು ಅಂತಹ ಅನರ್ಹ ಫಲಾನುಭವಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಅಕ್ರಮವಾಗಿ ಪಿಎಂ ಕಿಸಾನ್ ಸಮ್ಮಾನ ಹಣ ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳಿಂದ ಹಣ ವಾಪಸ್ ಪಡೆಯುತ್ತಿದೆ.
ಹೌದು ರೈತ ಬಾಂಧವರೇ, ಅರ್ಹ ರೈತರಿಗೆ ಸಿಗಬೇಕಾದ ಈ ಯೋಜನೆಯ ಲಾಭವನ್ನು ಅನರ್ಹ ಫಲಾನುಭವಿಗಳು (pm Kisan not eligible) ನಕಲಿ ದಾಖಲೆಗಳನ್ನು ಸಲ್ಲಿಸಿ ಇಲ್ಲಿಯವರೆಗೆ ಹಣ ಪಡೆಯುತ್ತಿದ್ದರು. ಆದರೆ ಅದಕ್ಕೆ ಕೇಂದ್ರ ಸರಕಾರ ಇದೀಗ ಬ್ರೇಕ್ ಹಾಕಿದೆ.
ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ! ಮತ್ತೆ ಕರ್ನಾಟಕದಲ್ಲಿ ಮಳೆ! ಎಲ್ಲೆಲ್ಲಿ ಆಗಲಿದೆ ಚೆಕ್ ಮಾಡಿ !
ಇಲ್ಲಿಯವರೆಗೆ ಇಂತಹ ಅನರ್ಹ ಫಲಾನುಭವಿಗಳಿಂದ ಕೇಂದ್ರ ಸರಕಾರವು ಬರೋಬ್ಬರಿ 335 ಕೋಟಿ ರೂಪಾಯಿ ಹಣವನ್ನು ಹಿಂಪಡೆದಿದೆ. ಇನ್ನು ಈ ಕಾರ್ಯ ಮುಂದುವರೆದಿದ್ದು ಈ ಮೊತ್ತ ಇನ್ನು ಹೆಚ್ಚಾಗಲಿದೆ ಎಂದು ಊಹಿಸಲಾಗಿದೆ.
ಪಿಎಂ ಕಿಸಾನ್ ಯೋಜನೆಗೆ ಅನರ್ಹರು ಯಾರು ?
ಪಿಎಂ ಕಿಸಾನ್ ಯೋಜನೆಯಿಂದ ಲಾಭ ಪಡೆಯಲು ಬಯಸುವ ರೈತರು ತಮ್ಮ ಹೆಸರಿನಲ್ಲಿ ಜಮೀನನ್ನು ಹೊಂದಿರಬೇಕು. ಅಂತಹ ರೈತರ ಕುಟುಂಬದಲ್ಲಿ ಯಾವ ಸದಸ್ಯನೂ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರಕಾರದಲ್ಲಿ ನೌಕರಿ ಮಾಡುತ್ತಿರಬಾರದು.
ಅಲ್ಲದೇ ಅಂತಹ ರೈತ ಕುಟುಂಬದವರು ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿರಬಾರದು ಮತ್ತು GST ಯನ್ನು ಕೂಡ ಪಾವತಿ ಮಾಡುತ್ತಿರಬಾರದು.
ಅಷ್ಟೇ ಅಲ್ಲದೆ ಅಂತಹ ಕುಟುಂಬದ ಯಾವ ಸದಸ್ಯನೂ ಬಿಸಿನೆಸ್ ಮಾಡುತ್ತಿರಬಾರದು ಎಂದು ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದ ಹೊಸದರಲ್ಲಿಯೇ ಈ ನಿಯಮಗಳನ್ನು ತಿಳಿಸಿತ್ತು.
ಆದರೂ ಹಲವರು ಈ ಯೋಜನೆಯ ಸಡೀಲಿಕೆಯನ್ನು ದುರುಪಯೋಗಪಡಿಸಿಕೊಂಡು ಇಲ್ಲಿಯವರೆಗೂ ಈ ಯೋಜನೆಯ ಲಾಭ ಪಡೆಯುತ್ತಿದ್ದರು. ಆದರೆ ಅಂತಹ ಅನರ್ಹ ಫಲಾನುಭವಿಗಳ ಆಟ ಇನ್ನು ಮುಂದೆ ನಡೆಯುವುದಿಲ್ಲ, ಅಕ್ರಮವಾಗಿ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ
ಇನ್ನು ಪಿಎಂ ಕಿಸಾನ್ ಸಮ್ಮಾನ ಯೋಜನೆಯ 19 ನೇ ಕಂತು ಮುಂದಿನ ವರ್ಷ ಫೆಬ್ರುವರಿ ತಿಂಗಳ ಮೊದಲ ವಾರದಲ್ಲಿ ಜಮಾ ಅಗಲಿದ್ದು, ಅದಕ್ಕಾಗಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್: 19 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಹು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ.
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ ಜಮಾ ಆಗಿದೆ. ಇದೀಗ ಕೇಂದ್ರ ಸರಕಾರ 19 ನೇ ಕಂತಿಗೆ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್ ಖರೀದಿಗೆ ಶೇ.90 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !
ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ? ಒಂದು ವೇಳೆ ನಿಮ್ಮ ಹೆಸರು ಇಲ್ಲದೆ ಇದ್ದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ಪಡೆಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ ಅರ್ಹ ಫಲಾನುಭವಿಗಳ ಪಟ್ಟಿ ಹೀಗೆ ಚೆಕ್ ಮಾಡಿ:
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Beneficiary List ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ.
ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೆ ಇರಲು ಪ್ರಮುಖ ಕಾರಣವೆಂದರೆ ನಿಮ್ಮ ಪಿಎಂ ಕಿಸಾನ್ ಖಾತೆ ಇಕೆವೈಸಿ ಆಗದೇ ಇರುವುದು.
ಮೊಬೈಲ್ ನಲ್ಲೇ ಸುಲಭವಾಗಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಮೊಬೈಲ್ ನಲ್ಲೇ ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ?
ರೈತರೇ, ರಾಜ್ಯ ಸರ್ಕಾರ ಇಲ್ಲಿಯವರೆಗೆ ಪಿಎಂ ಕಿಸಾನ್ ಫ್ರೂಟ್ಸ್ ಐಡಿಗೆ ಇಕೆವೈಸಿ ಆಗದೇ ಇರುವ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇಂತಹ ರೈತರಿಗೆ ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ, ಬರಗಾಲ ಪರಿಹಾರ ಹಣ ಅಥವಾ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ ಹಣ ಜಮಾ ಆಗುವುದಿಲ್ಲ.
ಇದನ್ನೂ ಓದಿ: ಒಂದು ವಾರದಲ್ಲಿ ರೈತರಿಗೆ 120 ಕೋಟಿ ರೂಪಾಯಿ ಹಿಂಗಾರು ಬೆಳೆ ಹಾನಿ ಪರಿಹಾರ ಹಣ ಜಮಾ: ಕಂದಾಯ ಸಚಿವ ಕೃಷ್ಣ ಭೈರೇಗೌಡ
ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ? ಒಂದು ವೇಳೆ ನಿಮ್ಮ ಇಕೆವೈಸಿ ಆಗದೇ ಇದ್ದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ಪಡೆಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಪಿಎಂ ಕಿಸಾನ್: ಹಣ ಜಮಾ ಆಗಿರುವ ಮೆಸೇಜ್ ಬರುತ್ತಿಲ್ಲವೇ? ಈಗಲೇ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ ! ಲಿಂಕ್ ಇಲ್ಲಿದೆ ನೋಡಿಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 20 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ.(PM Kisan Samman Nidhi beneficiary status)
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ, ಹಣ ಮತ್ತು ಶ್ರಮ ಉಳಿಸುವ ಕರ್ನಾಟಕ ಸರ್ಕಾರದ ಡಿಜಿಟಲ್ ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿ.
- ಶೌಚಾಲಯ ನಿರ್ಮಿಸಿ 20 ಸಾವಿರ ಸಬ್ಸಿಡಿ ಹೀಗೆ ಪಡೆಯಿರಿ!ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಿಸಲು ಸರ್ಕಾರದಿಂದ ₹20,000 ವರೆಗೆ ಸಬ್ಸಿಡಿ ನೀಡಲಾಗುತ್ತಿದೆ. ಈ ಸಹಾಯಧನ ಪಡೆಯಲು ಅರ್ಜಿ ವಿಧಾನ, ಅರ್ಹತೆ ಮತ್ತು ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಈಗಲೇ ಅರ್ಜಿ ಸಲ್ಲಿಸಿ ಸರ್ಕಾರದ ಯೋಜನೆಯ ಲಾಭ ಪಡೆಯಿರಿ. 🚽
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬವಿದ್ದರೆ ರೈತರಿಗೆ ಸಿಗಲಿದೆ ₹10,000 ಮತ್ತು ಮಾಸಿಕ ಬಾಡಿಗೆ: ಇಲ್ಲಿದೆ ಸರ್ಕಾರದ ಹೊಸ ನಿಯಮಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬ ಇದ್ದರೆ ರೈತರಿಗೆ ₹10,000 ಪರಿಹಾರ ಹಾಗೂ ಮಾಸಿಕ ಬಾಡಿಗೆ ನೀಡುವ ಸರ್ಕಾರದ ಹೊಸ ನಿಯಮ ಜಾರಿಗೆ ಬಂದಿದೆ. ಈ ನಿಯಮದಿಂದ ರೈತರ ಆದಾಯ ಹೆಚ್ಚಾಗಿ ಕೃಷಿಗೆ ಸಹಾಯವಾಗಲಿದೆ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- E-Svattu 2.0: ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸಾವಿರಾರು ಕುಟುಂಬಗಳು ಭೂಪರಿವರ್ತನೆ ಆದೇಶಗಳಿಲ್ಲದೆ ಮನೆಗಳನ್ನು ನಿರ್ಮಿಸಿಕೊಂಡು ನೆಲೆಸಿವೆ.ಇಂತಹ ಅಕ್ರಮ ನಿವೇಶನಗಳು ಮೂಲಭೂತ ಸೌಲಭ್ಯಗಳನ್ನು ಪಡೆಯುತ್ತಿದ್ದರೂ, ಆಸ್ತಿ ದಾಖಲೆಗಳ ಕೊರತೆಯಿಂದಾಗಿ ತೊಂದರೆಗಳು ಎದುರಾಗುತ್ತಿವೆಇಂತಹ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಕರ್ನಾಟಕ ಸರ್ಕಾರ ಇ-ಸ್ವತ್ತು 2.0 ಯೋಜನೆಯನ್ನು ಜಾರಿಗೊಳಿಸಿದ್ದು, ಡಿಸೆಂಬರ್ 1, 2025ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಚಾಲನೆ ನೀಡಿದ್ದಾರೆ.
- ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.
- Krushi honda subsidy: ರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ! ಇಲ್ಲಿದೆ ಸಂಪೂರ್ಣ ಮಾಹಿತಿರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಅವಕಾಶ. ಕೃಷಿ ಭಾಗ್ಯ ಯೋಜನೆಯಡಿ ಮಳೆ ನೀರು ಸಂಗ್ರಹಣೆಗಾಗಿ ಕೃಷಿ ಹೊಂಡಕ್ಕೆ ಎಷ್ಟು ಸಬ್ಸಿಡಿ ಸಿಗುತ್ತದೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆ ವಿವರಗಳು ಇಲ್ಲಿವೆ.
- LIC HFL FD ಯೋಜನೆ: ಪ್ರತಿ ತಿಂಗಳಿಗೆ ₹9,750 ವರೆಗೆ ಬಡ್ಡಿ ಆದಾಯ!ಈ ಯೋಜನೆಯ ಮೂಲಕ, ಹೂಡಿಕೆದಾರರು ತಮ್ಮ ಹಣವನ್ನು ಸುರಕ್ಷಿತವಾಗಿ ಇರಿಸಬಹುದು ಮತ್ತು ಪ್ರತಿ ತಿಂಗಳ ಬಡ್ಡಿ ರೂಪದಲ್ಲಿ ಸ್ಥಿರ ಆದಾಯವನ್ನು ಪಡೆಯಬಹುದು. ವಿಶೇಷವಾಗಿ ಪದವೀ ವಿರಾಮ ಮಾಡಿದವರು, ಪಿಂಚಣಿದಾರರು ಅಥವಾ ಸ್ಥಿರವಾದ ಆದಾಯವನ್ನು ಬಯಸಿದವರಿಗೆ ಇದು ತುಂಬಾ ಉಪಯುಕ್ತ ಯೋಜನೆಯಾಗಿ ಪರಿಗಣಿಸಲ್ಪಡುತ್ತದೆ.
- ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಈಗಿನ ಕಾಲದಲ್ಲಿ ರೈತರು ತಮ್ಮ ಹೊಲದ ವಿವರಗಳನ್ನು ಪರಿಶೀಲಿಸಿ ಅದರ ಸೂಕ್ತ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಳ್ಳುವುದು ಬಹಳ ಅವಶ್ಯಕವಾಗಿದೆ. ಏಕೆಂದರೆ ಸರ್ಕಾರದಿಂದ ಬರುವ ಏನೇ ಸೌಲಭ್ಯಗಳಿದ್ದರೂ ಅವು ಈ ದಾಖಲೆ ನೋಡಿಯೇ ನೀಡಲಾಗುತ್ತದೆ. ಹಾಗಾಗಿ ಪ್ರತಿಯೊಬ್ಬ ರೈತರು ತಮ್ಮ ಜಮೀನಿನ ಸಂಪೂರ್ಣ ದಾಖಲೆ ಮತ್ತು ವಿವರಗಳನ್ನು ಕಡ್ಡಾಯವಾಗಿ ಮಾಡಿಸಿ ಇಡಬೇಕು.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.













