ಪಿಎಂ ಕಿಸಾನ್ ಹಣ ಜಮಾ ಆಗಿಲ್ಲವೇ ? ಹಾಗಾದರೆ ಈ ನಂಬರಿಗೆ ಕರೆ ಮಾಡಿ! ನಿಮ್ಮ ಹಣ ಜಮಾ ಆಗುತ್ತದೆ !

ರೈತರ ಆದಾಯವನ್ನು ಧ್ವಿಗುಣಗೊಳಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ. ನಿಮಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣ ಜಮಾ ಆಗದೇ ಇದ್ದರೆ ನೀವು ಕೆಳಗೆ ನೀಡಲಾಗಿರುವ ಪಿಎಂ ಕಿಸಾನ್ ಸಹಾಯವಾಣಿ ನಂಬರಿಗೆ ಕರೆ ಮಾಡುವ ಮೂಲಕ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡು ಕೊಳ್ಳಬಹುದು. ನೀವು ವಿಚರಿಸಬೇಕಾದ ನಂಬರ್ ಕೆಳಗಿದೆ ನೋಡಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರ ಆದಾಯವನ್ನು ಧ್ವಿಗುಣಗೊಳಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ. (PM KISAN SAMMAN NIDHI YOJANA)

Thank you for reading this post, don't forget to subscribe!

ಈ ಯೋಜನೆ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 20 ಕಂತಿನಲ್ಲಿ 40,000 ರೂಪಾಯಿ ಹಣ ಜಮಾ ಆಗಿದ್ದು, ಇದೀಗ 21 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಆದರೆ ಹಲವು ರೈತರಿಗೆ 20 ನೇ ಕಂತಿನ ಹಣ ಇನ್ನು ಜಮಾ ಆಗಿಲ್ಲ. ಅದಕ್ಕೆ ಕಾರಣ ಹಲವಾರು.

ಇದನ್ನೂ ಓದಿ: ಮಹಿಳೆಯರಿಗೆ ಸಬ್ಸಿಡಿಯಲ್ಲಿ 1.5 ಲಕ್ಷ ರೂಪಾಯಿ ಸಾಲ ! ಈಗಲೇ ಅರ್ಜಿ ಸಲ್ಲಿಸಿ

ನಿಮಗೂ 20 ನೇ ಕಂತಿನ ಹಣ ಜಮಾ ಆಗಿಲ್ಲದಿದ್ದರೆ ನೀವೇನು ಮಾಡಬೇಕು, ಜಮಾ ಆಗದೇ ಇರಲು ಕಾರಣವೇನು ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್ ಹಣ ಜಮಾ ಆಗದಿದ್ದಲ್ಲಿ ಏನು ಮಾಡಬೇಕು? PM KISAN HELPLINE

ನಿಮಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣ ಜಮಾ ಆಗದೇ ಇದ್ದರೆ ನೀವು ಕೆಳಗೆ ನೀಡಲಾಗಿರುವ ಪಿಎಂ ಕಿಸಾನ್ ಸಹಾಯವಾಣಿ ನಂಬರಿಗೆ ಕರೆ ಮಾಡುವ ಮೂಲಕ ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡು ಕೊಳ್ಳಬಹುದು. ನೀವು ವಿಚರಿಸಬೇಕಾದ ನಂಬರ್ ಕೆಳಗಿದೆ ನೋಡಿ.

ಪಿಎಂ ಕಿಸಾನ್ ಸಹಾಯವಾಣಿ: 155261 ಅಥವಾ 011-24300606

ಪಿಎಂ ಕಿಸಾನ್ ಹಣ ಜಮಾ ಆಗದೇ ಇರಲು ಕಾರಣವೇನು?

ರೈತರೇ ನಿಮಗೆ ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಜಮಾ ಆಗ್ದೆ ಇರಲು ಪ್ರಮುಖ ಕಾರಣವೆಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗದೇ ಇರುವುದು.

ಇದನ್ನೂ ಓದಿ: ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ

ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ ಮಾಡಿದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಹಾಗೂ ಇನ್ನಿತರ ಯಾವುದೇ ಯೋಜನೆಯ ಹಣ ನಿಮ್ಮ ಖಾತೆಗೆ ನೇರವಾಗಿ ಜಮಾ ಆಗುತ್ತದೆ.

ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ? Pm Kisan Beneficiary status

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಆಧಾರ್ ಪ್ರಾಧಿಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

uidai.gov.in

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

ಹಂತ -3) ನಂತರ ಅಲ್ಲಿ ನಿಮಗೆ Check Adhaar Bank Seeding Status ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ Adhaar Seeding Status fetched from NPCI ಎಂದು ಕಾಣಿಸುತ್ತದೆ.

ಹಂತ -4) ನಂತರ ಅಲ್ಲಿ ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಅನ್ನು ಹಾಕಿ ಅಥವಾ 16 ಸಂಖ್ಯೆಯ Virtual ID ಅನ್ನು ಹಾಕಿ.

ಹಂತ -5) ನಂತರ ಅಲ್ಲಿಯೇ ಕೆಳಗೆ ನೀಡಲಾಗಿರುವ security code ಹಾಕಿ send OTP ಮೇಲೆ ಕ್ಲಿಕ್ ಮಾಡಿ.

ಹಂತ -6) ನಂತರ ನಿಮ್ಮ ಆಧಾರ್ ನಂಬರ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ OTP ಬರುತ್ತದೆ.ಅದನ್ನು ಹಾಕಿ submit ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -7) ನಂತರ ಅಲ್ಲಿ ನಿಮಗೆ ನಿಮ್ಮ ಆಧಾರ್ ನಂಬರ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆ, ಯಾವಾಗ ಲಿಂಕ್ ಆಗಿದೆ ಮತ್ತು ಈಗ ಅದು active ಇದೆಯಾ ಎಂಬ ಸಂಪೂರ್ಣ ಮಾಹಿತಿ ಅಲ್ಲಿ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?

ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಮುಂಚೆ ಪ್ರತಿ 4 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ವರ್ಷಕ್ಕೆ 3 ಕಂತುಗಳಲ್ಲಿ 6,000 ರೂಪಾಯಿ ಹಣ ಜಮಾ ಆಗುತ್ತಿದ್ದವು. ಕಳೆದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಈ ಯೋಜನೆಗೆ ಮತ್ತಷ್ಟು ಬಲ ನೀಡಿದ್ದು, ಇದೀಗ ಈ ಯೋಜನೆ ಅಡಿಯಲ್ಲಿ ವರ್ಷಕ್ಕೆ 4 ಕಂತುಗಳಲ್ಲಿ 8,000 ರೂಪಾಯಿ ಅರ್ಹ ರೈತರ ಖಾತೆಗೆ ಜಮಾ ಆಗಲಿವೆ.

ಇದನ್ನೂ ಓದಿ: ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಇನ್ನು 21ನೇ ಕಂತಿನ ಹಣ ಮುಂದಿನ ತಿಂಗಳ ಅಂತ್ಯದಲ್ಲಿ ಈಗಾಗಲೇ ಬಿಡುಗಡೆ ಮಾಡಿರುವ ಅರ್ಹ ಫಲಾನುಭವಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.

ಪಿಎಂ ಕಿಸಾನ್ ಅರ್ಹ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಕೆಳಗೆ ತೋರಿಸಿದಂತೆ ಚೆಕ್ ಮಾಡಿ Pm Kisan Beneficiary List

ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/Rpt_BeneficiaryStatus_pub.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ 18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.

ಮೊಬೈಲ್ ನಲ್ಲೇ ಇಕೇವೈಸಿ ಮಾಡಿಸುವುದು ಹೇಗೆ? Pm Kisan ekyc

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://exlink.pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇

https://chat.whatsapp.com/FM1qVgdNtJm5m1M9SL0BHc?mode

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago