"ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ " ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿರುವ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಸರಕಾರ ಈಗಾಗಲೇ ಅಧಿಕೃತ ಆದೇಶ ಹೊರಡಿಸಿದೆ.
Thank you for reading this post, don't forget to subscribe!ಇನ್ನು ಈ ಕುರಿತಂತೆ ಇದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ರಾಜ್ಯ ಸರ್ಕಾರದ ಅಧಿಕೃತ ಆದೇಶವನ್ನು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮತ್ತೊಮ್ಮೆ ಸ್ಪಷ್ಟವಾಗಿ ವಿವರಿಸಿದ್ದಾರೆ.
“ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ” ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
ಇನ್ನು ತಾಂತ್ರಿಕ ಕಾರಣದಿಂದ ಯಾರದ್ದಾದರೂ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅಂತಹ ಕುಟುಂಬದ ಸದಸ್ಯರು ತಮ್ಮ ತಹಶೀಲ್ದಾರರಿಗೆ ಭೇಟಿಯಾದರೆ ಕೇವಲ ಒಂದು ವಾರದ ಒಳಗೆ ಅವರ ಬಿಪಿಎಲ್ ಕಾರ್ಡ್ ವಾಪಸ್ ಮಾಡಿ ಕೊಡಲಾಗುವುದು ಎಂದು ಆಹಾರ ಸಚಿವರು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಬಡ ಕುಟುಂಬಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನ ಕಲ್ಯಾಣ ಯೋಜನೆಗಳಾದ ಗರಿಬ್ ಕಲ್ಯಾಣ್ ಅನ್ನ ಯೋಜನಾ ಮತ್ತು ಅನ್ನಭಾಗ್ಯ ಯೋಜನೆಗಳಿಂದ ವಂಚಿತರಾಗಬಾರದು ಎಂದು ಅವರು ತಿಳಿಸಿದರು.
“ಇದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಪ್ರಯೋಜನೆಯನ್ನು ಅನರ್ಹ ಫಲಾನುಭವಿಗಳಿಗೆ ಮತ್ತು ಅಕ್ರಮವಾಗಿ ರೇಷನ್ ಪಡೆಯುತ್ತಿರುವವರಿಗೆ ಸಿಗದಂತೆ ತಡೆಯುವುದು ನಮ್ಮ ಜವಾಬ್ದಾರಿಯಾಗಿದೆ. ಹಾಗಾಗಿ ಇಂತಹ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ” ಎಂದೂ ಅವರು ಹೇಳಿದರು.
“ಇನ್ನು ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಆಗಿರುವ ಕುಟುಂಬಗಳು ಯಾವ ಕಾರಣಕ್ಕೂ ಆತಂಕಕ್ಕೆ ಒಳಪಡಬೇಕಾಗಿಲ್ಲ. ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಆಗಿದ್ದರೂ ಅಂತಹ ಕುಟುಂಬಗಳಿಗೆ ಆರೋಗ್ಯ ಯೋಜನೆಯ ಸವಲತ್ತು ಮುಂದುವರಿಯಲಿದೆ” ಎಂದು ಆಹಾರ ಸಚಿವರಾದ ಕೆ. ಎಚ್. ಮುನಿಯಪ್ಪ ಅವರು ಬಿಪಿಎಲ್ ಕಾರ್ಡ್ ಪರಿವರ್ತನೆ ಆಗಿರುವ ಕುಟುಂಬಗಳಿಗೆ ಅಭಯ ನೀಡಿದರು.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ ಮತ್ತು ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ನಿಮ್ಮ ರೇಷನ್ ಕಾರ್ಡ್ ಸಂಪೂರ್ಣ ಮಾಹಿತಿ ಸಿಗುತ್ತದೆ. ಅಲ್ಲಿ ನಿಮ್ಮ ರೇಷನ್ ಕಾರ್ಡಿನಲ್ಲಿ ಎಷ್ಟು ಜನರ ಹೆಸರಿದೆ, ನಿಮ್ಮ ರೇಷನ್ ಕಾರ್ಡ್ ಆ್ಯಕ್ಟಿವ್ ಇದೆಯೋ ಇಲ್ಲವೋ ಮತ್ತು ಈ ತಿಂಗಳು ನಿಮಗೆ ಎಷ್ಟು ರೇಷನ್ ಸಿಕ್ಕಿದೆ ಎಂಬ ಮಾಹಿತಿ ಸಿಗುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…