ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳಾದ ದವಸ ಧಾನ್ಯ ವಿತರಣೆ (ರೇಷನ್) ಹಾಗೂ ಇತರೆ ಯಾವುದೇ ಸರ್ಕಾರಿ ಸವಲತ್ತುಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ.
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳಾದ ದವಸ ಧಾನ್ಯ ವಿತರಣೆ (ರೇಷನ್) ಹಾಗೂ ಇತರೆ ಯಾವುದೇ ಸರ್ಕಾರಿ ಸವಲತ್ತುಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ.
Thank you for reading this post, don't forget to subscribe!ಅದರಲ್ಲೂ ರಾಜ್ಯ ಸರಕಾರದ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಬಂದಾಗಿನಿಂದ ಹೊಸ ರೇಷನ್ ಕಾರ್ಡ್ ಗೆ ಬೇಡಿಕೆ ಹೆಚ್ಚಾಗಿದ್ದು, ಗೃಹ ಲಕ್ಷ್ಮಿ ಯೋಜನೆ ಜೊತೆ ಇತರೆ ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಸಾಕಷ್ಟು ಜನ ಕಾತುರದಿಂದ ಕಾಯುತ್ತಿದ್ದಾರೆ.
ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದ ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ರಾಜ್ಯ ಸರ್ಕಾರದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ಹೌದು ಸ್ನೇಹಿತರೆ, ಇಲ್ಲಿಯವರೆಗೆ ಹೊಸ ರೇಷನ್ ಕಾರ್ಡ್ ಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆ ಆಗಿವೆ. ಆದರೆ ಇದರಲ್ಲಿ ಒಟ್ಟು 2.36 ಲಕ್ಷ ಅರ್ಜಿಗಳು ಮಾತ್ರ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಹವಾಗಿವೆ. ಉಳಿದ ಅರ್ಜಿಗಳು ದಾಖಲೆ ಸಮಸ್ಯೆಯಿಂದ ತಿರಸ್ಕೃತಗೊಂಡಿವೆ.
ಹೊಸ ರೇಷನ್ ಕಾರ್ಡ್ ವಿತರಣೆ ಕುರಿತು ಮಾತನಾಡುತ್ತಾ ಆಹಾರ ಸಚಿವರು “ಶೀಘ್ರದಲ್ಲೇ 1.73 ಲಕ್ಷ ಪಡಿತರ ಚೀಟಿಗಳನ್ನು (Ration Card) ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು. ಇದರಿಂದ ಅಂತಹ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳ ಲಾಭ ಶೀಘ್ರದಲ್ಲೇ ಸಿಗುತ್ತದೆ. ಉಳಿದ ರೇಷನ್ ಕಾರ್ಡ್ ಗಳನ್ನು ನಂತರ ವಿತರಿಸಲಾಗುವುದು” ಎಂದು ಸದನಕ್ಕೆ ತಿಳಿಸಿದರು.
ಅದರ ಜೊತೆಗೆ ಹಳೆಯ ರೇಷನ್ ಕಾರ್ಡ್ ನಲ್ಲಿ ಏನಾದರೂ ತಪ್ಪಾಗಿದ್ದರೆ ಅಥವಾ ಹೊಸ ಕುಟುಂಬ ಸದಸ್ಯರ ಹೆಸರನ್ನು ಸೇರಿಸುವುದಿದ್ದರೆ, ಅದಕ್ಕೂ ಅವಕಾಶವನ್ನು ನೀಡಲಾಗಲಿದೆ ಎಂದು ಸಚಿವರು ವಿವರಿಸಿದರು.
ಕೊನೆಯದಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಎಲ್ಲಾ ನಾಗರಿಕರಿಗೂ ಇದರ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿಕೊಂಡರು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…