ಒಂದು ವೇಳೆ ನಿಮ್ಮ ಪಹಣಿ ಪತ್ರಕ್ಕೆ ನಿಮ್ಮ ಆಧಾರ ಕಾರ್ಡ ಲಿಂಕ್ ಆಗಿಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಹಣ, ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ ಹಾಗೂ ಸರ್ಕಾರದ ಇತರೆ ಸಬ್ಸಿಡಿಯ ಪ್ರಯೋಜನ ಸಿಗುವುದಿಲ್ಲ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇಂದು ನೀವು ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕಾದರೆ ನಿಮ್ಮ ಪಹಣಿ ಪತ್ರಕ್ಕೆ ನಿಮ್ಮ ಆಧಾರ ಕಾರ್ಡ ಲಿಂಕ್ ಆಗಿರುವುದು ಕಡ್ಡಾಯವಾಗಿದೆ. (rtc adhar link)
Thank you for reading this post, don't forget to subscribe!ಒಂದು ವೇಳೆ ನಿಮ್ಮ ಪಹಣಿ ಪತ್ರಕ್ಕೆ ನಿಮ್ಮ ಆಧಾರ ಕಾರ್ಡ ಲಿಂಕ್ ಆಗಿಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಹಣ, ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ ಹಾಗೂ ಸರ್ಕಾರದ ಇತರೆ ಸಬ್ಸಿಡಿಯ ಪ್ರಯೋಜನ ಸಿಗುವುದಿಲ್ಲ.
ಆದ್ದರಿಂದ ಮನೆಯಲ್ಲೇ ಕುಳಿತು ನೀವು ನಿಮ್ಮ ಮೊಬೈಲ್ ಸಹಾಯದಿಂದ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಮಾಡುವ ಸುಲಭ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ರೈತರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಕಿ ಕೆಳಗೆ ನೀಡಲಾಗಿರುವ ಕ್ಯಾಪ್ಚ ಹಾಕಿ send otp ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಗೆ ಬಂದ OTP ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ನಂಬರ್ ಮತ್ತು ಆಧಾರ್ ಕಾರ್ಡ್ ನಲ್ಲಿ ಇರುವಂತೆ ನಿಮ್ಮ ಹೆಸರನ್ನು ನಮೂದಿಸಿ ಕೆಳಗೆ ನೀಡಲಾಗಿರುವ ಚಿಕ್ಕ ಬಾಕ್ಸ್ ನಲ್ಲಿ ರೈಟ್ ಮಾರ್ಕ್ ಟಿಕ್ ಮಾಡಿ verify ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಆಧಾರ್ ಕಾರ್ಡ್ ಅನ್ನು ಯಶಸ್ವಿಯಾಗಿ verify ಮಾಡಲಾಗಿದೆ ಎಂದು ಕಾಣಿಸುತ್ತದೆ.ನಂತರ ok ಮೇಲೆ ಕ್ಲಿಕ್ ಮಾಡಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ನಂಬರ್ ಹಾಕಿ ಕೆಳಗೆ ನೀಡಲಾಗಿರುವ ಬಾಕ್ಸ್ ನಲ್ಲಿ ರೈಟ್ ಮಾರ್ಕ್ ಟಿಕ್ ಮಾಡಿ ಒಟಿಪಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿ.
ಹಂತ -7) ನಂತರ ನಿಮಗೆ ಹೊಸದೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ಜಿಲ್ಲೆ ಹಾಗೂ ನಿಮ್ಮ ವಿಳಾಸ ಹಾಗೂ ನಿಮ್ಮ ಫೋಟೋ ಕಾಣಿಸುತ್ತದೆ.
ಅಲ್ಲಿ ಕಾಣುವ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ನಿಮ್ಮ ಆಧಾರ್ ನಂಬರಿಗೆ ಯಾವ ಪಹಣಿಗೆ ಲಿಂಕ್ ಆಗಿದೆ ಹಾಗೂ ಯಾವ ಸರ್ವೇ ನಂಬರ್ ಲಿಂಕ್ ಆಗಿದೆ ಎಂಬುದು ಕಾಣಿಸುತ್ತದೆ.
ಒಂದು ವೇಳೆ ಲಿಂಕ್ ಆಗಿಲ್ಲದಿದ್ದರೆ ಭೂಮಿ ಲಿಂಕ್ ಡಿಟೇಲ್ ನಲ್ಲಿ ಕೇಳಲಾದ ಮಾಹಿತಿಯನ್ನು ತುಂಬಿ ಸರ್ವೇ ನಂಬರ್ ಹಾಕಿ ಲಿಂಕ್ ಮಾಡಿ.
ಈ ರೀತಿಯಾಗಿ ರೈತರು ಸುಲಭವಾಗಿ ಮನೆಯಲ್ಲಿ ಕುಳಿತು ತಮ್ಮ ಪಹಣಿಗೆ ಆಧಾರ್ ಲಿಂಕ್ ಮಾಡುವ ಮೂಲಕ ಸರ್ಕಾರದ ಎಲ್ಲಾ ಯೋಜನೆಗಳ ಲಾಭ ಪಡೆಯಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…