ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.
Thank you for reading this post, don't forget to subscribe!ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ
https://kswdcl.karnataka.gov.in/
ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಅಡಿಯಲ್ಲಿ ಈ ಸಬ್ಸಿಡಿ ಯೋಜನೆಯನ್ನು ನೀಡುತ್ತಿದ್ದು ಅರ್ಹ ರೈತ ಫಲಾನುಭಾವಿಗಳಿಂದ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ
ಹಾಗಾದರೇ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ
ಅರ್ಜಿ ಸಲ್ಲಿಸಲು ಯಾರು ಅರ್ಹರು?
ರಾಜ್ಯ ಸರ್ಕಾರದ ಕೃಷಿ ಇಲಾಖೆಯ ವತಿಯಿಂದ ಹನಿ ನೀರಾವರಿ ಅಥವಾ ತುಂತುರು ನೀರಾವರಿ ಉತ್ತೇಜಿಸುವ ಸಲುವಾಗಿ ಸ್ಪ್ರಿಂಕ್ಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ (subsidy scheme) ನೀಡಲಾಗುತ್ತಿದೆ.
ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಅರ್ಹತೆಗಳನ್ನು ಹೊಂದಿರಬೇಕು.
* ಅರ್ಜಿ ಸಲ್ಲಿಸಲು ಬಯಸುವ ರೈತರು ಸಣ್ಣ ಮತ್ತು ಅತೀ ಸಣ್ಣ ರೈತ ವರ್ಗಕ್ಕೆ ಸೇರಿರಬೇಕು.
* ಅರ್ಜಿ ಸಲ್ಲಿಸಲು ಬಯಸುವ ರೈತರು ತಮ್ಮ ಹೆಸರಿನಲ್ಲಿ ಕಡ್ಡಾಯವಾಗಿ ಜಮೀನನ್ನು ಹೊಂದಿರಬೇಕು.
* ಅರ್ಜಿ ಸಲ್ಲಿಸಲು ಬಯಸುವ ರೈತರು ಕಳೆದ 7 ವರ್ಷದಲ್ಲಿ ಈ ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಪಡೆದಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು,
ಈ ಸಬ್ಸಿಡಿಯನ್ನು ಪಡೆಯಲು ಬಯಸುವ ಅರ್ಹ ರೈತರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಹೊಂದಿರುವುದು ಕಡ್ಡಾಯ. ಅವು ಯಾವುವು ಎಂದರೆ:
- ಜಮೀನಿನ ಪಹಣಿ ಪತ್ರ
- ಬ್ಯಾಂಕ್ ಪಾಸ್ಬೂಕ್
- ಆಧಾರ್ ಕಾರ್ಡ್
- ಕೊಳವೆ ಬಾವಿ ಅಥವಾ ಬಾವಿ ಪ್ರಮಾಣ ಪತ್ರ
- ಜಮೀನಿನ ಹಿಡುವಳಿ ಪತ್ರ
- ಅರ್ಜಿದಾರರ ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂ
ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಈ ಸಬ್ಸಿಡಿ ಪಡೆಯಲು ಬಯಸುವ ಅರ್ಹ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅಲ್ಲಿ ಅರ್ಜಿ ನಮೂನೆಯನ್ನು ಪಡೆದು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ಮೂಲಕವೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಕೃಷಿ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
https://kkisan.karnataka.gov.in/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ,
ಇನ್ನು ಹನಿ ನೀರಾವರಿ ಮತ್ತು ತುಂತುರು ನೀರಾವರಿ ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರವು ರೈತರಿಗೆ ಕೊಡಮಾಡುತ್ತಿರುವ ಈ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಸ್ತುತ ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ.
ಹಾಗಂತ ಇದು ತಿಂಗಳುಗಟ್ಟಲೆ ಇರುವುದಿಲ್ಲ. ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳು ಡಿಸೆಂಬರ್ ತಿಂಗಳ ಅಂತ್ಯದ ಒಳಗಾಗಿ ಅರ್ಜಿ ಸಲ್ಲಿಸುವುದು ತುಂಬಾ ಒಳ್ಳೆಯದು.
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
https://chat.whatsapp.com/FM1qVgdNtJm5m1M9SL0BHc?mode=ac_t