Categories: information

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ 2025–26 ಪ್ರಕಟ! — ವಿದ್ಯಾರ್ಥಿಗಳಿಗಾಗಿ ದೊಡ್ಡ ಸುದ್ದಿ!

ಬೆಂಗಳೂರು: ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ ಬಂದಿದೆ. 2025–26ನೇ ಸಾಲಿನ SSLC (10ನೇ ತರಗತಿ) ಹಾಗೂ ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಮತ್ತು ಪಿಯು ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ

Spread the love

ಬೆಂಗಳೂರು: ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ ಬಂದಿದೆ. 2025–26ನೇ ಸಾಲಿನ SSLC (10ನೇ ತರಗತಿ) ಹಾಗೂ ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಮತ್ತು ಪಿಯು ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ.

ಈ ಬಾರಿಗೆ ಪರೀಕ್ಷೆಗಳನ್ನು ಹಿಂದಿನ ವರ್ಷಕ್ಕಿಂತ ಒಂದು ತಿಂಗಳು ಮುಂಚೆಯೇ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ವಿದ್ಯಾರ್ಥಿಗಳು ಈಗಲೇ ತಮ್ಮ ಓದಿನ ತಯಾರಿ ಪ್ರಾರಂಭಿಸಬೇಕಾಗಿದೆ.

Thank you for reading this post, don't forget to subscribe!

SSLC ಪರೀಕ್ಷೆ ವೇಳಾಪಟ್ಟಿ 2025–26

ಈ ವರ್ಷ SSLC ಪರೀಕ್ಷೆ 1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಪರೀಕ್ಷೆ 2 ಮೇ 18ರಿಂದ ಮೇ 25ರವರೆಗೆ ನಿಗದಿಯಾಗಿದೆ.

SSLC ಪರೀಕ್ಷೆ 1 ವಿವರಗಳು:

1.ಮಾ.18: ಪ್ರಥಮ ಭಾಷೆ

2.ಮಾ.23: ವಿಜ್ಞಾನ

3.ಮಾ.25: ದ್ವಿತೀಯ ಭಾಷೆ

4.ಮಾ.28: ಗಣಿತ

5.ಮಾ.30: ತೃತೀಯ ಭಾಷೆ

6.ಏ.2: ಸಮಾಜ ವಿಜ್ಞಾನ

SSLC ಪರೀಕ್ಷೆ 2 ವಿವರಗಳು

1.ಮೇ 18: ಪ್ರಥಮ ಭಾಷೆ

2.ಮೇ 19: ವಿಜ್ಞಾನ

3.ಮೇ 20: ದ್ವಿತೀಯ ಭಾಷೆ

4.ಮೇ 21: ಗಣಿತ

5.ಮೇ 22: ತೃತೀಯ ಭಾಷೆ

6.ಮೇ 23: ಸಮಾಜ ವಿಜ್ಞಾನ

ವಿದ್ಯಾರ್ಥಿಗಳಿಗೆ ಸಲಹೆ: ಈ ವರ್ಷವೂ SSLCಗೆ ಎರಡು ಪ್ರಯೋಗಾತ್ಮಕ ಪರೀಕ್ಷೆಗಳ ಮಾದರಿ ಮುಂದುವರಿದಿದ್ದು, ಮೊದಲ ಪರೀಕ್ಷೆಯಲ್ಲಿ ಅಂಕ ತೃಪ್ತಿ ಇಲ್ಲದಿದ್ದರೆ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಯಲ್ಲಿ ಭಾಗವಹಿಸಬಹುದು.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ 2025–26

ದ್ವಿತೀಯ ಪಿಯುಸಿ ಪರೀಕ್ಷೆ 1 ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ, ಮತ್ತು ಪರೀಕ್ಷೆ 2 ಏಪ್ರಿಲ್ 24ರಿಂದ ಮೇ 9ರವರೆಗೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ:

1.ಫೆ.28: ಕನ್ನಡ, ಅರೇಬಿಕ್

2.ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

3.ಮಾ.3: ಇಂಗ್ಲಿಷ್

4.ಮಾ.4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

5.ಮಾ.5: ಇತಿಹಾಸ

6.ಮಾ.6: ಭೌತಶಾಸ್ತ್ರ

7.ಮಾ.7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ

8.ಮಾ.9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ

9.ಮಾ.10: ಅರ್ಥಶಾಸ್ತ್ರ

10.ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ

11.ಮಾ.12: ಹಿಂದಿ

12.ಮಾ.13: ರಾಜ್ಯಶಾಸ್ತ್ರ

13.ಮಾ.14: ಲೆಕ್ಕಶಾಸ್ತ್ರ, ಗಣಿತ

14.ಮಾ.16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

15.ಮಾ.17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

ವಿದ್ಯಾರ್ಥಿಗಳಿಗೆ ಉಪಯುಕ್ತ ಸಲಹೆಗಳು

1.ಪ್ರತಿ ವಿಷಯಕ್ಕೆ ಸಮಯ ಪಟ್ಟಿ ಮಾಡಿ ಓದಿ. ದಿನಕ್ಕೆ ಕನಿಷ್ಠ 6 ಗಂಟೆ ಓದುವ ಅಭ್ಯಾಸ ಇರಲಿ.

2.ಪೂರ್ವ ವರ್ಷದ ಪ್ರಶ್ನೆಪತ್ರಿಕೆಗಳು ಅಭ್ಯಾಸ ಮಾಡಲು ಪ್ರಯತ್ನಿಸಿ.

3.ಗ್ಯಾಪ್ ಡೇಸ್‌ಗಳನ್ನು ವಿಷಯ ಪುನರಾವರ್ತನೆಗೆ ಬಳಸಿ.

4.ಆರೋಗ್ಯದ ಕಡೆ ಗಮನ ನೀಡಿ. ಉತ್ತಮ ನಿದ್ರೆ ಹಾಗೂ ಆಹಾರ ಅಗತ್ಯ.

ಕರ್ನಾಟಕದ SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ 2025–26ನೇ ಸಾಲಿನ ಪರೀಕ್ಷಾ ವೇಳಾಪಟ್ಟಿ ಸ್ಪಷ್ಟವಾಗಿದೆ. ವಿದ್ಯಾರ್ಥಿಗಳು ಈಗಲೇ ತಯಾರಿ ಪ್ರಾರಂಭಿಸಿದರೆ ಉತ್ತಮ ಅಂಕ ಗಳಿಸಲು ಸಾಧ್ಯ. ಪರೀಕ್ಷೆ ದಿನಾಂಕದ ಹತ್ತಿರ ಬಂದಾಗ ಆತಂಕ ಪಡುವ ಬದಲು, ನಿಯಮಿತವಾಗಿ ಓದು, ಅಭ್ಯಾಸ ಮತ್ತು ಆತ್ಮವಿಶ್ವಾಸ ಇರಲಿ

              All the best

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago