ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಇದೀಗ ಮೀನುಗಾರಿಕೆ ಇಲಾಖೆ ಅಧಿಕೃತವಾಗಿ ನೋಟಿಫಿಕೇಶನ್ ಜಾರಿಗೊಳಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಲು ಕೋರಲಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ರೈತರೇ ದ್ವಿಚಕ್ರ ವಾಹನ ಖರೀದಿಸಲು ನೀವು ಯೋಚಿಸುತ್ತಿದ್ದರೆ ನಿಮಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಅದೇನೆಂದರೆ ರಾಜ್ಯ ಸರ್ಕಾರದ ಮೀನುಗಾರಿಕೆ ಇಲಾಖೆಯಿಂದ ದ್ವಿಚಕ್ರ ವಾಹನ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ಗದಗ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಇದೀಗ ಮೀನುಗಾರಿಕೆ ಇಲಾಖೆ ಅಧಿಕೃತವಾಗಿ ನೋಟಿಫಿಕೇಶನ್ ಜಾರಿಗೊಳಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಲು ಕೋರಲಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ರಾಜ್ಯ ಸರ್ಕಾರದ ಮೀನುಗಾರಿಕೆ ಇಲಾಖೆಯು ಕರಾವಳಿ ಭಾಗದ ರೈತರಿಗೆ ಮತ್ತು ಒಳನಾಡು ಜಿಲ್ಲೆಯ ರೈತರಿಗೆ ಮೀನುಗಾರಿಕೆ ಮಾಡಿ ರೈತರು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ಈ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆ ಅಡಿಯಲ್ಲಿ ಮೀನುಗಾರಿಕೆ ಮಾಡಲು ಬಯಸುವ ರೈತರಿಗೆ ಮೀನುಗಾರಿಕೆ ಇಲಾಖೆಯು ಬೈಕ್, ಐಸ್ ಕ್ಯೂಬ್ ಬಾಕ್ಸ್,ಮೀನುಗಾರಿಕೆ ಕಿಟ್ ಮುಂತಾದ ವಸ್ತುಗಳ ಮೇಲೆ ಸಬ್ಸಿಡಿ ನೀಡುತ್ತಿದೆ.
ಅಂತೆಯೇ ಇದೀಗ ಮೀನುಗಾರಿಕೆ ಇಲಾಖೆಯು ಮೀನುಗಾರಿಕೆ ಮಾಡುವ ರೈತರಿಗೆ ಸಹಕಾರಿ ಆಗಲೆಂದು ಅಂತಹ ರೈತರು ಸಬ್ಸಿಡಿಯಲ್ಲಿ ಬೈಕ್ ಖರೀದಿಸಲು ಅರ್ಜಿ ಆಹ್ವಾನಿಸಿದೆ.
ಇನ್ನು ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಬಯಸುವ ರೈತರು ತಮ್ಮ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು. ಅದರ ಜೊತೆಗೆ ವಿಕಲ ಚೇತನರಾಗಿದ್ದಲ್ಲಿ ವಿಕಲ ಚೇತನರ ಪ್ರಮಾಣ ಪತ್ರ, ಎಚ್ ಐ ವಿ ಪೀಡಿತರಾಗಿದ್ದಲ್ಲಿ ಎಚ್ ಐ ವಿ ಪೀಡಿತ ಪ್ರಮಾಣ ಪತ್ರ, ವಿದವೆಯರಾಗಿದ್ದಲ್ಲಿ ವಿಧವಾ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಅದರ ಜೊತೆಗೆ ದ್ವಿಚಕ್ರ ವಾಹನ ಖರೀದಿಸಿದ ಮತ್ತು ಐಸ್ ಬಾಕ್ಸ್ ಕ್ರೇಟ್ಸ್ ಖರೀದಿಸಿದ ಬಿಲ್, ಡ್ರೈವಿಂಗ್ ಲೈಸೆನ್ಸ್, ಮೀನುಗಾರಿಕಾ ಚಟುವಟಿಕೆ ನಡೆಸಲು ನೀಡುವ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರ ನೀಡಬೇಕು.
ಮೀನುಗಾರಿಕೆ ಇಲಾಖೆಯ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ರೈತರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.
ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರು ಸೆಪ್ಟೆಂಬರ್ 30 ರೊಳಗಾಗಿ ಮೇಲೆ ನೀಡಿದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…
25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…
ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…
ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…
ಮೊಬೈಲ್ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…