Categories: information

ಕಬ್ಬಿನ ಟ್ರ್ಯಾಕ್ಟರ್‌ಗಳಿಗೆ ಬೆಂಕಿ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಶಿವಾನಂದ್ ಪಾಟೀಲ್

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತಉಪವಿಭಾಗಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಹಾನಿಯ ಪ್ರಮಾಣದ ಸಮೀಕ್ಷೆ ಆರಂಭಿಸಿದೆ. ಎಷ್ಟು ಪರಿಹಾರ ನೀಡಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಎಷ್ಟು ಸಾಧ್ಯವಿದೆಯೋ ಅಷ್ಟು ಪರಿಹಾರವನ್ನು ಸರಕಾರದಿಂದ ಇಲ್ಲವೇ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಂಸ್ಥೆಯಿಂದ ನೀಡಲಾಗುವುದು.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತಉಪವಿಭಾಗಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಹಾನಿಯ ಪ್ರಮಾಣದ ಸಮೀಕ್ಷೆ ಆರಂಭಿಸಿದೆ. ಎಷ್ಟು ಪರಿಹಾರ ನೀಡಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಎಷ್ಟು ಸಾಧ್ಯವಿದೆಯೋ ಅಷ್ಟು ಪರಿಹಾರವನ್ನು ಸರಕಾರದಿಂದ ಇಲ್ಲವೇ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಂಸ್ಥೆಯಿಂದ ನೀಡಲಾಗುವುದು.

Thank you for reading this post, don't forget to subscribe!

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್ ಲಿಮಿಟೆಡ್ ಬಳಿ ಗುರುವಾರ ಸಂಭವಿಸಿದ ಬೆಂಕಿ ಪ್ರಕರಣ ಸಂಬಂಧ ಉಂಟಾಗಿರುವ ಹಾನಿಗೆ ಸಾಧ್ಯವಿರುವ ಪರಿಹಾರ ನೀಡಲಾಗುವುದು ಸಚಿವ ಶಿವಾನಂದ ಪಾಟೀಲ್ ಶುಕ್ರವಾರ ಹೇಳಿದರು.

ದುರಂತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸಚಿವರು ಮಾತನಾಡಿದರು.

ಉಪವಿಭಾಗಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಹಾನಿಯ ಪ್ರಮಾಣದ ಸಮೀಕ್ಷೆ ಆರಂಭಿಸಿದೆ. ಎಷ್ಟು ಪರಿಹಾರ ನೀಡಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಎಷ್ಟು ಸಾಧ್ಯವಿದೆಯೋ ಅಷ್ಟು ಪರಿಹಾರವನ್ನು ಸರಕಾರದಿಂದ ಇಲ್ಲವೇ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಂಸ್ಥೆಯಿಂದ ನೀಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಘಟನೆಯನ್ನು ಖಂಡಿಸಿದ ಸಚಿವರು, ತಪ್ಪಿತಸ್ಥರ ವಿರುದ್ಧ ಅವರ ಸ್ಥಾನಮಾನವನ್ನು ಲೆಕ್ಕಿಸದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಳಿಕ ಕಬ್ಬು ಬೆಳೆಗಾರರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು

ಕರ್ನಾಟಕದಲ್ಲಿ 7.3 ಲಕ್ಷ ಹೆಕ್ಟೇರ್‌ಗಳಲ್ಲಿ ಕಬ್ಬು ಬೆಳೆಯಲಾಗುತ್ತಿದ್ದು, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ 5.67 ಲಕ್ಷ ಹೆಕ್ಟೇರ್‌ಗಳಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಕಬ್ಬು ಅರೆಯುವಿಕೆ ವಿಳಂಬವಾಗುವುದರಿಂದ ಸಕ್ಕರೆ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತದೆ, ತೂಕ ಕಡಿಮೆಯಾಗುತ್ತದೆ ಮತ್ತು ಮುಂದಿನ ಬೆಳೆ ಚಕ್ರದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಈ ನಡುವೆ ಘಟನೆ ಬಳಿಕ ಕಾರ್ಯಾಚರಣೆ ಆರಂಭಿಸಲು ಕಾರ್ಖಾನೆಗಳು ಹಿಂಜರಿಯುತ್ತಿದ್ದು, ಸಂಪೂರ್ಣ ರಕ್ಷಣೆ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ರಾಜ್ಯ ಸರ್ಕಾರ ಯಾವುದೇ ಕಾರ್ಖಾನೆಗಳ ಮಾಲೀಕರಿಗೆ ಮಣಿದಿಲ್ಲ. ಮಣಿದಿದ್ದರೆ ಹೆಚ್ಚಿನ ಬೆಲೆ ಕೊಡಿಸಲು ಸಾಧ್ಯವಾಗುತ್ತಿರಲಿಲ್ಲ. ಕಬ್ಬಿನ ಉಪ ಉತ್ಪನ್ನಗಳಿಂದ ಕಾರ್ಖಾನೆಗಳು ಗಳಿಸುವ ಲಾಭದ ಬಗ್ಗೆ ಹಾಗೂ ಸರಕಾರಕ್ಕೆ ಬರುವ ತೆರಿಗೆ ಬಗ್ಗೆಯೂ ತಪ್ಪು ಮಾಹಿತಿ ನೀಡುವ ಪ್ರಯತ್ನ ಆಗಬಾರದು. ಸಕ್ಕರೆ ರಫ್ತು ಪ್ರಮಾಣ ಹಾಗೂ ರಾಜ್ಯಕ್ಕೆ ನಿಗದಿಪಡಿಸಿರುವ ಎಥನಾಲ್ ಉತ್ಪಾದನೆ ಮಿತಿಯನ್ನು ಕೇಂದ್ರ ಸರಕಾರ ಹೆಚ್ಚಳ ಮಾಡಬೇಕು. ವಾಣಿಜ್ಯ ಬಳಕೆಯ ಸಕ್ಕರೆ ಬೆಲೆಯನ್ನು ಹೆಚ್ಚಳ ಮಾಡಬೇಕೆಂಬುದು ರಾಜ್ಯದ ಬೇಡಿಕೆಯಾಗಿದೆ ಎಂದು ಹೇಳಿದರು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago