ದೇಶದಾದ್ಯಂತ ದೀಪಾವಳಿಗೆ ಪಟಾಕಿ ಸಿಡಿಸದಂತೆ ಸುಪ್ರೀಂ ಕೋರ್ಟ್ ನಿರ್ಭಂಧ! ಸುಪ್ರೀಮ್ ಕೋರ್ಟ್ ಯಾಕೆ ಈ ತೀರ್ಪನ್ನು ಕೊಟ್ಟಿದೆ ಗೊತ್ತಾ?
ಇನ್ನೇನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಮನೆ ಮನೆಗಳಲ್ಲೂ ಹಬ್ಬದ ಸಂಭ್ರಮ ಉಂಟು ಮಾಡಲು ತಯಾರಾಗಿರುವ ಹೊಸ್ತಿಲಲ್ಲಿಯೇ ಸುಪ್ರೀಮ್ ಕೋರ್ಟ್ ನಿಂದ ಮಹತ್ವದ ತೀರ್ಪೊಂದು ಹೊರಬಿದ್ದಿದೆ.
Thank you for reading this post, don't forget to subscribe!ಇತ್ತೀಚೆಗೆ ಪಟಾಕಿ ಸಿಡಿಸುವ ಕುರಿತು ಕೇಸ್ ಒಂದನ್ನ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಅದನ್ನು ಸಂಪೂರ್ಣವಾಗಿ ಚರ್ಚಿಸಿ ದೇಶದಾದ್ಯಂತ ತತ್ ಕ್ಷಣವೇ ಜಾರಿಗೆ ಬರುವಂತೆ ದೀಪಾವಳಿ ಅಂದು ಪಟಾಕಿ ಸಿಡಿಸದಂತೆ ತೀರ್ಪನ್ನು ನೀಡಿದೆ. ದೇಶದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ದೃಷ್ಟಿಯಿಂದ ಉಚ್ಚ ನ್ಯಾಯಾಲಯವು ಈ ತೀರ್ಪನ್ನ ನೀಡಿದೆ. ಜಾಗತೀಕರಣದಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಇಂಥದ್ದೊಂದು ಕ್ರಮ ಬಹಳ ಅವಶ್ಯಕವಾಗಿತ್ತು ಅಲ್ಲದೆ ಹಬ್ಬದ ಹೆಸರಿನಲ್ಲಿ ಪರಿಸರವನ್ನು ಹಾಳು ಮಾಡುವುದು ಎಷ್ಟು ಸರಿ ಎಂಬಂತಹ ಪ್ರಶ್ನೆಗಳು ಸುಪ್ರೀಂಕೋರ್ಟ್ ಎದುರಿಗಿದ್ದವು. ಈ ಎಲ್ಲ ಪ್ರಶ್ನೆಗಳನ್ನು ಸವಿವರವಾಗಿ ಚರ್ಚಿಸಿ ಸುಪ್ರೀಂ ಕೋರ್ಟ್ ಈ ನಿರ್ಧಾರಕ್ಕೆ ಬಂದಿತು.
ಮುಂಚೆ ಸುಪ್ರೀಂ ಕೋರ್ಟ್ ಈ ತೀರ್ಪನ್ನು ಕೇವಲ ರಾಷ್ಟ್ರದ ರಾಜಧಾನಿಯಾದ ದೆಹಲಿಗೆ ಮಾತ್ರ ಸೀಮಿತಗೊಳಿಸಿತ್ತು. ಆದರೆ ಈಗ ಹೊರಡಿಸಿರುವ ತೀರ್ಪಿನಲ್ಲಿ ಈ ಕ್ರಮವು ಇಡೀ ದೇಶದಾದ್ಯಂತ ಅನ್ವಯಿಸಲಿದೆ. ಇದರಿಂದ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಲಿದ್ದು ಅದರ ಜೊತೆಗೆ ಶುದ್ಧ ಗಾಳಿಯ ಪ್ರಮಾಣದಲ್ಲಿ ಏರಿಕೆ ಕಂಡು ಬರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ಉಸಿರಾಡಲು ಶುದ್ದಗಾಳಿಯ ಕೊರತೆ ಇದೆ ಅಂತದ್ದರಲ್ಲಿ ಪಟಾಕಿಯನ್ನು ಸೇರಿಸಿ ಅದರಿಂದ ಹೊಮ್ಮುವ ಹೊಗೆಯನ್ನು ವಾತಾವರಣಕ್ಕೆ ಬಿಡುವುದು ವಾಯುಮಾಲಿನ್ಯಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತದೆ. ಹಾಗಾಗಿ ಮುಂಚೆ ಸುಪ್ರೀಂ ಕೋರ್ಟ್ ಇದನ್ನು ದೆಹಲಿಯಲ್ಲಿ ನಿರ್ಬಂಧಿಸಿತ್ತು. ಪ್ರಸ್ತುತ ಈ ತೀರ್ಪು ದೇಶದಾದ್ಯಂತ ಅನ್ವಯಿಸಲಿದ್ದು ಪರಿಸರ ಪ್ರೇಮಿಗಳು ಈ ತೀರ್ಪನ್ನ ಸ್ವಾಗತಿಸಿದ್ದಾರೆ.
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…