ಕೋಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ... ಕ್ರಿಕೆಟ್ ಲೋಕದ ರಾಜ, ರನ್ ಮಷೀನ್, ದಾಖಲೆಗಳ ಸರದಾರ ಎಂದು ಖ್ಯಾತಿ ಹೊಂದಿರುವ ವಿರಾಟ್ ಕೋಹ್ಲಿಯವರು ತಮ್ಮ 35ನೇ ಜನ್ಮದಿನ ನವೆಂಬರ್ 5 ರಂದು ಇದ್ದು ಈ ಬಾರಿ ವಿಶೇಷವಾಗಿರಲಿದೆ.
ಕೋಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ…
ಕ್ರಿಕೆಟ್ ಲೋಕದ ರಾಜ, ರನ್ ಮಷೀನ್, ದಾಖಲೆಗಳ ಸರದಾರ ಎಂದು ಖ್ಯಾತಿ ಹೊಂದಿರುವ ವಿರಾಟ್ ಕೋಹ್ಲಿಯವರ 35ನೇ ಜನ್ಮದಿನ ನವೆಂಬರ್ 5 ರಂದು ಇದ್ದು,ಈ ಬಾರಿ ವಿಶೇಷವಾಗಿರಲಿದೆ. ಏಕೆಂದರೆ ನವೆಂಬರ್ 5 ರಂದು ಟಾಪ್ ಟೇಬಲ್ ನಲ್ಲಿರುವ ಎರಡು ತಂಡಗಳಾದ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಗೆಲುವಿಗಾಗಿ ಈಡನ್ ಗಾರ್ಡನ್ ಮೈದಾನದಲ್ಲಿ ಹೋರಾಡಲಿವೆ.
ಇದೇ ನವೆಂಬರ್ 5 ಕ್ಕೆ ವಿರಾಟ್ ಕೋಹ್ಲಿ 35 ನೇ ಜನ್ಮ ದಿನ ಆಚರಿಸಿಕೊಳ್ಳಲ್ಲಿದ್ದು ಅವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ತೀರ್ಮಾನಿಸಿದೆ. ಅದೇನೆಂದರೆ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡದ ಪಂದ್ಯದಲ್ಲಿ, ಪಂದ್ಯವನ್ನು ವೀಕ್ಷಿಸಲು ಬರುವ ಎಲ್ಲಾ ವಿಕ್ಷಕರಿಗೂ ವಿರಾಟ್ ಕೊಹ್ಲಿ ಅವರ ಮುಖವಾಡಗಳನ್ನ ನೀಡಲು ನಿರ್ಧರಿಸಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಈಡನ್ ಗಾರ್ಡನ್ಸ್ ಮೈದಾನದಲ್ಲಿ 70000 ವೀಕ್ಷಕರು ಸೇರುವ ನಿರೀಕ್ಷೆ ಇದ್ದು , ಎಲ್ಲರಿಗೂ ಮುಖವಾಡಗಳನ್ನು ವಿತರಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ ಇದಕ್ಕೆ ಐಸಿಸಿಯ ಒಪ್ಪಿಗೆ ಇನ್ನಷ್ಟೇ ಪಡೆಯಬೇಕಿದೆ. ಅಂದ ಹಾಗೆ ಭಾರತ ಇಲ್ಲಿಯವರೆಗೂ ಆಡಿರುವ 6 ಪಂದ್ಯಗಳನ್ನು ಗೆದ್ದು ಗೆಲುವಿನ ನಾಗಾಲೋಟ ಮುಂದುವರೆಸಿ ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರ ಸ್ಥಾನ ಭದ್ರ ಪಡಿಸಿಕೊಳ್ಳಲು ಎದುರು ನೋಡುತ್ತಿದೆ.
ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…